ಶಿವಮೊಗ್ಗದಲ್ಲಿ 10ನೇ ತರಗತಿ ವಿದ್ಯಾರ್ಥಿ ಹೃದಯಾಘಾತದಿಂದ ಸಾವು ; ದಿನವೂ ಹರೆಯದ ಹುಡುಗರ ಸಾವಿನ ಸರದಿ ! 

11-01-23 08:15 pm       HK News Desk   ಕರ್ನಾಟಕ

ಸೊರಬ ತಾಲೂಕಿನ ಎಣ್ಣೆಕೊಪ್ಪ ಗ್ರಾಮದಲ್ಲಿ 10 ನೇ ತರಗತಿ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ನಡೆದಿದೆ.

ಶಿವಮೊಗ್ಗ, ಜ.11 : ಸೊರಬ ತಾಲೂಕಿನ ಎಣ್ಣೆಕೊಪ್ಪ ಗ್ರಾಮದಲ್ಲಿ 10 ನೇ ತರಗತಿ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ನಡೆದಿದೆ.

ಎಣ್ಣೆಕೊಪ್ಪ ಗ್ರಾಮದಲ್ಲಿ 10ನೇ ತರಗತಿ ವಿದ್ಯಾರ್ಥಿ ಜಯಂತ್ ರಜತಾದ್ರಯ್ಯ ಮೃತ ದುರ್ದೈವಿ. ಆನವಟ್ಟಿ ಜೂನಿಯರ್ ಕಾಲೇಜಿನಲ್ಲಿ ಕಲಿಯುತ್ತಿದ್ದ ಜಯಂತ್ ಬುಧವಾರ ಬೆಳಗ್ಗೆ ಶಾಲೆಗೆ ತೆರಳುವ ಸಂದರ್ಭದಲ್ಲಿ ಮೃತಪಟ್ಟಿದ್ದಾನೆ. ಜಯಂತ್ ಎದ್ದಿನಂತೆ ಬೆಳಗ್ಗೆ ಎದ್ದು ಶಾಲೆಗೆ ಹೋಗಲು ರೆಡಿಯಾಗುತ್ತಿದ್ದ. ಈ ವೇಳೆ ಎದೆ ನೋವು ಕಾಣಿಸಿಕೊಂಡಿದ್ದು ತಕ್ಷಣವೇ ಜಯಂತ್​ನನ್ನು ಎಣ್ಣೆಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಜಯಂತ್ ಮೃತಪಟ್ಟಿದ್ದಾನೆ. 

ಮೂರು ದಿನಗಳ ಹಿಂದೆ ಮಡಿಕೇರಿ ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು ಗ್ರಾಮದಲ್ಲಿ 15 ವರ್ಷದ ಬಾಲಕ‌ ಹೃದಯಾಘಾತದಿಂದ ಸಾವನ್ನಪ್ಪಿದ್ದ. ಎರಡು ದಿನಗಳ ಹಿಂದೆ ಮಂಗಳೂರಿನ ಸುರತ್ಕಲ್ ಬಳಿಯ ಕಾಟಿಪಳ್ಳದಲ್ಲಿ 14 ವರ್ಷದ ಬಾಲಕ ಹಠಾತ್ ಕುಸಿದು ಬಿದ್ದು ಮೃತಪಟ್ಟಿದ್ದಾನೆ.

Shivamogga 10th class student dies of heart attack.