ಬ್ರೇಕಿಂಗ್ ನ್ಯೂಸ್
13-01-23 06:28 pm Bangalore Correspondent ಕರ್ನಾಟಕ
ಬೆಂಗಳೂರು, ಜ.13 : ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದ್ದ ಸ್ಯಾಂಟ್ರೋ ರವಿ ಕೊನೆಗೂ 11 ದಿನಗಳ ಬಳಿಕ ಗುಜರಾತ್ನಲ್ಲಿ ಕರ್ನಾಟಕ ಪೊಲೀಸರ ಬಲೆಗೆ ಬಿದ್ದಿದ್ದಾನೆ.
ಮಂಡ್ಯ ಮೂಲದ ಮಂಜುನಾಥ್ ಅಲಿಯಾಸ್ ಸ್ಯಾಂಟ್ರೋ ರವಿ ಮೈಸೂರಿನಲ್ಲಿ ಕೇಸು ದಾಖಲಾದ ಬಳಿಕ ಪೊಲೀಸರ ಕೈಗೆ ಸಿಗದೆ 11 ದಿನಗಳಿಂದ ತಲೆಮರೆಸಿಕೊಂಡಿದ್ದ. ಈ ಹಿಂದೆ ಕಾರ್ಯಾಚರಣೆ ನಡೆಸಿದ್ದ ವೇಳೆ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಸ್ಯಾಂಟ್ರೋ ರವಿ ತಪ್ಪಿಸಿಕೊಂಡಿದ್ದ. ಪೊಲೀಸರಿಗೆ ಸಿಗದೇ ತಲೆಮರೆಸಿಕೊಂಡಿದ್ದ ಸ್ಯಾಂಟ್ರೋ ರವಿಯನ್ನು ಬಂಧನ ಮಾಡಲು ಕರ್ನಾಟಕ ಪೊಲೀಸರು ವಿಶೇಷ ತಂಡ ರಚನೆ ಮಾಡಿದ್ದರು.

ಹತ್ತು ದಿನಗಳಾದರೂ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದ ಸ್ಯಾಂಟ್ರೋ ರವಿಯನ್ನು ಬಂಧಿಸುವುದು ಸವಾಲಾಗಿತ್ತು. ಬಂಧಿಸಲೇ ಬೇಕು ಎಂದು ಪಣ ತೊಟ್ಟಿದ್ದ ಕರ್ನಾಟಕ ಪೊಲೀಸರು, ಆತನ ಸೆರೆಗೆ ನಾಲ್ವರು ಎಸ್ಪಿಗಳ ವಿಶೇಷ ತಂಡ ರಚನೆ ಮಾಡಿದ್ದರು. ಈ ತಂಡ ಹಗಲಿರುಳೂ ಸ್ಯಾಂಟ್ರೋ ರವಿ ಪತ್ತೆಗಾಗಿ ಹುಡುಕಾಟ ನಡೆಸಿತ್ತು. ಈ ನಡುವೆ ಸ್ಯಾಂಟ್ರೋ ರವಿ ಗುಜರಾತ್ ತಲುಪಿದ್ದಾನೆ ಎಂಬ ಸುಳಿವು ಸಿಕ್ಕ ಕೂಡಲೇ ಅಲ್ಲಿಗೆ ಧಾವಿಸಿದ ಪೊಲೀಸರ ವಿಶೇಷ ತಂಡ, ಆತನನ್ನು ಬಂಧನ ಮಾಡಿದೆ. ಇದೀಗ ಸ್ಯಾಂಟ್ರೋ ರವಿಯನ್ನು ಕರ್ನಾಟಕಕ್ಕೆ ಕರೆತರಲಾಗುತ್ತಿದೆ.
ಈ ಹಿಂದೆ ಉಡುಪಿ ಜಿಲ್ಲೆಯ ಹೆಬ್ರಿಯಲ್ಲೂ ಸ್ಯಾಂಟ್ರೋ ರವಿ ಬಂಧನಕ್ಕೆ ಪೊಲೀಸರು ಹುಡುಕಾಟ ನಡೆಸಿದ್ದರು. ಮಫ್ತಿಯಲ್ಲಿ ಹಲವರನ್ನು ವಿಚಾರಣೆಗೆ ಒಳಪಡಿಸಿದ್ದರು. ಪೊಲೀಸರಿಂದ ತಪ್ಪಿಸಿಕೊಳ್ಳಲು ಮೈಸೂರು, ಬೆಂಗಳೂರು ಹಾಗೂ ಮಂಗಳೂರಿನಲ್ಲೂ ಸ್ಯಾಂಟ್ರೋ ರವಿ ತಲೆಮರೆಸಿಕೊಂಡು ಓಡಾಡಿದ್ದ ಎಂದು ಎನ್ನಲಾಗಿದೆ.
Hightech pimp Santro Ravi arrested after 11 days at Gujarat by Karnataka police. K. S. Manjunath, an alleged human trafficker popularly known as ‘Santro Ravi’ who is in the eye of a storm over his alleged role in police transfers and links to several politicians of the ruling BJP in Karnataka, was arrested in Gujarat, on January 13.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 04:31 pm
HK News Staffer
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm