ಬ್ರೇಕಿಂಗ್ ನ್ಯೂಸ್
13-01-23 10:55 pm HK News Desk ಕರ್ನಾಟಕ
ಮೈಸೂರು, ಜ.13 : ಕರ್ನಾಟಕ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ತಲೆಮರೆಸಿಕೊಂಡಿದ್ದ ಸ್ಯಾಂಟ್ರೋ ರವಿ ಅಲಿಯಾಸ್ ಕೆ.ಎಸ್.ಮಂಜುನಾಥ್ ಅಂದ್ರೆ ಮಿರುಗುವ ಚಿನ್ನದ ಸರ, ಕೈಗೆ ಉಂಗುರ, ಕಣ್ಣಿಗೆ ಕಪ್ಪು ಕೂಲಿಂಗ್ ಗ್ಲಾಸ್, ತಲೆಗೆ ಆಕರ್ಷಕ ವಿಗ್ ಹಾಕಿದ್ದ ಫೋಟೊ ಅಷ್ಟೇ ನೋಡಿದ್ದೆವು. ಆದರೆ ಪೊಲೀಸರ ಕಣ್ತಪ್ಪಿಸಿ ಓಡಾಡ್ತಿದ್ದ ನೂರಾರು ಕೋಟಿ ಒಡೆಯ ರವಿ, ಆ ಎಲ್ಲವನ್ನೂ ಬಿಟ್ಟು ಖಾಲಿ ಖಾಲಿಯಾಗಿದ್ದ. ಬೋಳು ತಲೆ, ಮೀಸೆಯನ್ನೂ ತೆಗೆದಿದ್ದ ಸ್ಯಾಂಟ್ರೋ ರವಿ ತನ್ನನ್ನು ಸುಲಭದಲ್ಲಿ ಯಾರೂ ಗುರುತು ಹಿಡಿಯದಂತೆ ವೇಷ ಬದಲಿಸಿಕೊಂಡಿದ್ದ.
ಈ ನಡುವೆ, ಮೈಸೂರು, ಬೆಂಗಳೂರು, ಮಂಗಳೂರು ಸುತ್ತಾಡಿದ್ದ ರವಿ ಗುಜರಾತ್ ಸೇರಿದ್ದೇ ರೋಚಕ. ಮಂಗಳೂರಿನಿಂದ ಪುಣೆಗೆ ಹೋಗಿ ಅಲ್ಲಿಂದ ಗುಜರಾತಿನ ಅಹ್ಮದಾಬಾದ್ ಸೇರಿದ್ದಾನೆ ಎನ್ನುವ ಮಾಹಿತಿ ಕಲೆಹಾಕಲಾಗಿದೆ. ಇದೇ ವೇಳೆ, ಹಲವಾರು ಹೊಸ ಸಿಮ್ ಗಳನ್ನೂ ಖರೀದಿಸಿದ್ದಾನೆ. ಈ ನಡುವೆ, ರವಿಯ ಬಂಧನ ಪೊಲೀಸರಿಗೆ ಸವಾಲಾಗುತ್ತಿದ್ದಂತೆ ಆಪ್ತರನ್ನು ಬಲೆಗೆ ಕೆಡವಿದ್ದರು. ಅಲ್ಲದೆ, ಯಾರೆಲ್ಲ ಆಪ್ತರಿದ್ದಾರೋ ಅವರ ಮೊಬೈಲ್ ಮೇಲೆ ಪೊಲೀಸರು ನಿಗಾ ಇಟ್ಟಿದ್ದರು. ಇದೇ ವೇಳೆ, ಮೈಸೂರಿನ ಚೇತನ್ ಎಂಬಾತನಿಗೆ ಅಪರಿಚಿತ ನಂಬರಿನಿಂದ ಕರೆ ಬಂದಿದ್ದನ್ನು ಪೊಲೀಸರು ಗಮನಿಸಿದ್ದಾರೆ. ಟ್ರೇಸ್ ಮಾಡಿದಾಗ, ಆ ಕರೆ ಅಹ್ಮದಾಬಾದ್ ನಿಂದ ಬಂದಿರುವುದು ತಿಳಿದುಬಂದಿತ್ತು. ಅದು ಸ್ಯಾಂಟ್ರೋ ರವಿಯದ್ದೇ ಎನ್ನುವುದನ್ನು ದೃಢ ಪಡಿಸುತ್ತಲೇ ಮೈಸೂರು ಪೊಲೀಸರ ತಂಡ ಅಹ್ಮದಾಬಾದ್ ತಲುಪಿತ್ತು.

ಸ್ಯಾಂಟ್ರೋ ರವಿ ತನ್ನ ವೇಷ ಬದಲಿಸಿಕೊಳ್ತಾನೆ ಎನ್ನುವುದು ಪೊಲೀಸರಿಗೂ ತಿಳಿದಿತ್ತು. ಹಾಗಾಗಿ ಆತನ ಎಲ್ಲ ರೀತಿಯ ಚಹರೆಗಳನ್ನೂ ರೆಡಿ ಮಾಡ್ಕೊಂಡಿದ್ದರು. ಬೋಳು ತಲೆ, ಮೀಸೆ ತೆಗೆದರೆ ಹೇಗಿರುತ್ತಾನೆ ಎನ್ನುವ ಚಿತ್ರವೂ ರೆಡಿಯಾಗಿತ್ತು. ಪೊಲೀಸರು ಅಂದ್ಕೊಂಡ ರೀತಿಯಲ್ಲೇ ರವಿ ವೇಷ ಬದಲಾಗಿತ್ತು. ಅಹ್ಮದಾಬಾದ್ ತಲುಪಿದ ಪೊಲೀಸರು ತಮ್ಮ ಕೈಲಿದ್ದ ಫೋಟೊ ಹಿಡಿದುಕೊಂಡೇ ಸಿವಿಲ್ ಡ್ರೆಸ್ನಲ್ಲಿ ಆ ಹೊಟೇಲ್ ನುಗ್ಗಿದ್ದರು. ಅಲ್ಲಿಯೇ ಶುಕ್ರವಾರ ಬೆಳಗ್ಗೆ ಸಿಕ್ಕಾಕ್ಕೊಂಡಿದ್ದಾನೆ ಎನ್ನಲಾಗುತ್ತಿದೆ.

ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಡಿಜಿಪಿ ಅಲೋಕ್ ಕುಮಾರ್, ಆತನ ಜೊತೆಯಲ್ಲಿದ್ದ ಮೈಸೂರಿನ ಶೃತೇಶ್, ಗುಜರಾತ್ ಮೂಲದ ಕೊಚ್ಚಿಯ ನಿವಾಸಿ ರಾಮ್ ಜಿ ಎಂಬ ಇಬ್ಬರನ್ನು ಬಂಧಿಸಲಾಗಿದೆ. ಇದಕ್ಕೂ ಮೊದಲೇ ಸ್ಯಾಂಟ್ರೋ ರವಿಯೊಂದಿಗೆ ಸಂಪರ್ಕದಲ್ಲಿದ್ದ ಮಧುಸೂದನ್ ಎಂಬಾತನನ್ನು ಬಂಧಿಸಲಾಗಿತ್ತು ಎಂದು ಮಾಹಿತಿ ನೀಡಿದರು.


ಸ್ಯಾಂಟ್ರೋ ರವಿ ತಲೆಗೆ ಹಾಕಿದ್ದ ವಿಗ್ ತೆಗೆದು ಮೀಸೆ ಬೋಳಿಸಿಕೊಂಡು ಯಾರಿಗೂ ಅನುಮಾನ ಬರದಂತೆ ತಲೆಮರೆಸಿಕೊಂಡಿದ್ದ. ರಾಯಚೂರು ಎಸ್ಪಿ, ಮಂಡ್ಯ ಎಸ್ಪಿ, ರಾಮನಗರ ಎಸ್ಪಿ ಅತ್ಯುತ್ತಮ ಕೆಲಸ ಮಾಡಿದ್ದಾರೆ. ಕರ್ನಾಟಕ ಪೊಲೀಸರ ಮರ್ಯಾದೆ ಉಳಿಸುವ ಕೆಲಸ ಸಿಬ್ಬಂದಿ ಮಾಡಿದ್ದಾರೆ. 1500 ಕಿಮೀ ದೂರದಲ್ಲಿ ಹೋಗಿ ಆರೋಪಿ ಹಿಡಿದಿದ್ದಾರೆ ಎಂದು ಅಲೋಕ್ ಕುಮಾರ್ ಹೇಳಿದರು.
Hytech pimp santro ravi arrest in Gujrath interesting story.
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
03-04-26 11:00 pm
HK News Staffer
ಜಿಮ್ ಸೆಂಟರ್ ನೆಪದಲ್ಲಿ ಲವ್ ಜಿಹಾದ್! ಜಿಮ್ ಟ್ರೈ...
03-04-26 10:53 pm
ಮೆಲ್ಕಾರ್ ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ;...
01-04-26 02:54 pm
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am