ಬ್ರೇಕಿಂಗ್ ನ್ಯೂಸ್
13-01-23 10:55 pm HK News Desk ಕರ್ನಾಟಕ
ಮೈಸೂರು, ಜ.13 : ಕರ್ನಾಟಕ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ತಲೆಮರೆಸಿಕೊಂಡಿದ್ದ ಸ್ಯಾಂಟ್ರೋ ರವಿ ಅಲಿಯಾಸ್ ಕೆ.ಎಸ್.ಮಂಜುನಾಥ್ ಅಂದ್ರೆ ಮಿರುಗುವ ಚಿನ್ನದ ಸರ, ಕೈಗೆ ಉಂಗುರ, ಕಣ್ಣಿಗೆ ಕಪ್ಪು ಕೂಲಿಂಗ್ ಗ್ಲಾಸ್, ತಲೆಗೆ ಆಕರ್ಷಕ ವಿಗ್ ಹಾಕಿದ್ದ ಫೋಟೊ ಅಷ್ಟೇ ನೋಡಿದ್ದೆವು. ಆದರೆ ಪೊಲೀಸರ ಕಣ್ತಪ್ಪಿಸಿ ಓಡಾಡ್ತಿದ್ದ ನೂರಾರು ಕೋಟಿ ಒಡೆಯ ರವಿ, ಆ ಎಲ್ಲವನ್ನೂ ಬಿಟ್ಟು ಖಾಲಿ ಖಾಲಿಯಾಗಿದ್ದ. ಬೋಳು ತಲೆ, ಮೀಸೆಯನ್ನೂ ತೆಗೆದಿದ್ದ ಸ್ಯಾಂಟ್ರೋ ರವಿ ತನ್ನನ್ನು ಸುಲಭದಲ್ಲಿ ಯಾರೂ ಗುರುತು ಹಿಡಿಯದಂತೆ ವೇಷ ಬದಲಿಸಿಕೊಂಡಿದ್ದ.
ಈ ನಡುವೆ, ಮೈಸೂರು, ಬೆಂಗಳೂರು, ಮಂಗಳೂರು ಸುತ್ತಾಡಿದ್ದ ರವಿ ಗುಜರಾತ್ ಸೇರಿದ್ದೇ ರೋಚಕ. ಮಂಗಳೂರಿನಿಂದ ಪುಣೆಗೆ ಹೋಗಿ ಅಲ್ಲಿಂದ ಗುಜರಾತಿನ ಅಹ್ಮದಾಬಾದ್ ಸೇರಿದ್ದಾನೆ ಎನ್ನುವ ಮಾಹಿತಿ ಕಲೆಹಾಕಲಾಗಿದೆ. ಇದೇ ವೇಳೆ, ಹಲವಾರು ಹೊಸ ಸಿಮ್ ಗಳನ್ನೂ ಖರೀದಿಸಿದ್ದಾನೆ. ಈ ನಡುವೆ, ರವಿಯ ಬಂಧನ ಪೊಲೀಸರಿಗೆ ಸವಾಲಾಗುತ್ತಿದ್ದಂತೆ ಆಪ್ತರನ್ನು ಬಲೆಗೆ ಕೆಡವಿದ್ದರು. ಅಲ್ಲದೆ, ಯಾರೆಲ್ಲ ಆಪ್ತರಿದ್ದಾರೋ ಅವರ ಮೊಬೈಲ್ ಮೇಲೆ ಪೊಲೀಸರು ನಿಗಾ ಇಟ್ಟಿದ್ದರು. ಇದೇ ವೇಳೆ, ಮೈಸೂರಿನ ಚೇತನ್ ಎಂಬಾತನಿಗೆ ಅಪರಿಚಿತ ನಂಬರಿನಿಂದ ಕರೆ ಬಂದಿದ್ದನ್ನು ಪೊಲೀಸರು ಗಮನಿಸಿದ್ದಾರೆ. ಟ್ರೇಸ್ ಮಾಡಿದಾಗ, ಆ ಕರೆ ಅಹ್ಮದಾಬಾದ್ ನಿಂದ ಬಂದಿರುವುದು ತಿಳಿದುಬಂದಿತ್ತು. ಅದು ಸ್ಯಾಂಟ್ರೋ ರವಿಯದ್ದೇ ಎನ್ನುವುದನ್ನು ದೃಢ ಪಡಿಸುತ್ತಲೇ ಮೈಸೂರು ಪೊಲೀಸರ ತಂಡ ಅಹ್ಮದಾಬಾದ್ ತಲುಪಿತ್ತು.

ಸ್ಯಾಂಟ್ರೋ ರವಿ ತನ್ನ ವೇಷ ಬದಲಿಸಿಕೊಳ್ತಾನೆ ಎನ್ನುವುದು ಪೊಲೀಸರಿಗೂ ತಿಳಿದಿತ್ತು. ಹಾಗಾಗಿ ಆತನ ಎಲ್ಲ ರೀತಿಯ ಚಹರೆಗಳನ್ನೂ ರೆಡಿ ಮಾಡ್ಕೊಂಡಿದ್ದರು. ಬೋಳು ತಲೆ, ಮೀಸೆ ತೆಗೆದರೆ ಹೇಗಿರುತ್ತಾನೆ ಎನ್ನುವ ಚಿತ್ರವೂ ರೆಡಿಯಾಗಿತ್ತು. ಪೊಲೀಸರು ಅಂದ್ಕೊಂಡ ರೀತಿಯಲ್ಲೇ ರವಿ ವೇಷ ಬದಲಾಗಿತ್ತು. ಅಹ್ಮದಾಬಾದ್ ತಲುಪಿದ ಪೊಲೀಸರು ತಮ್ಮ ಕೈಲಿದ್ದ ಫೋಟೊ ಹಿಡಿದುಕೊಂಡೇ ಸಿವಿಲ್ ಡ್ರೆಸ್ನಲ್ಲಿ ಆ ಹೊಟೇಲ್ ನುಗ್ಗಿದ್ದರು. ಅಲ್ಲಿಯೇ ಶುಕ್ರವಾರ ಬೆಳಗ್ಗೆ ಸಿಕ್ಕಾಕ್ಕೊಂಡಿದ್ದಾನೆ ಎನ್ನಲಾಗುತ್ತಿದೆ.

ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಡಿಜಿಪಿ ಅಲೋಕ್ ಕುಮಾರ್, ಆತನ ಜೊತೆಯಲ್ಲಿದ್ದ ಮೈಸೂರಿನ ಶೃತೇಶ್, ಗುಜರಾತ್ ಮೂಲದ ಕೊಚ್ಚಿಯ ನಿವಾಸಿ ರಾಮ್ ಜಿ ಎಂಬ ಇಬ್ಬರನ್ನು ಬಂಧಿಸಲಾಗಿದೆ. ಇದಕ್ಕೂ ಮೊದಲೇ ಸ್ಯಾಂಟ್ರೋ ರವಿಯೊಂದಿಗೆ ಸಂಪರ್ಕದಲ್ಲಿದ್ದ ಮಧುಸೂದನ್ ಎಂಬಾತನನ್ನು ಬಂಧಿಸಲಾಗಿತ್ತು ಎಂದು ಮಾಹಿತಿ ನೀಡಿದರು.


ಸ್ಯಾಂಟ್ರೋ ರವಿ ತಲೆಗೆ ಹಾಕಿದ್ದ ವಿಗ್ ತೆಗೆದು ಮೀಸೆ ಬೋಳಿಸಿಕೊಂಡು ಯಾರಿಗೂ ಅನುಮಾನ ಬರದಂತೆ ತಲೆಮರೆಸಿಕೊಂಡಿದ್ದ. ರಾಯಚೂರು ಎಸ್ಪಿ, ಮಂಡ್ಯ ಎಸ್ಪಿ, ರಾಮನಗರ ಎಸ್ಪಿ ಅತ್ಯುತ್ತಮ ಕೆಲಸ ಮಾಡಿದ್ದಾರೆ. ಕರ್ನಾಟಕ ಪೊಲೀಸರ ಮರ್ಯಾದೆ ಉಳಿಸುವ ಕೆಲಸ ಸಿಬ್ಬಂದಿ ಮಾಡಿದ್ದಾರೆ. 1500 ಕಿಮೀ ದೂರದಲ್ಲಿ ಹೋಗಿ ಆರೋಪಿ ಹಿಡಿದಿದ್ದಾರೆ ಎಂದು ಅಲೋಕ್ ಕುಮಾರ್ ಹೇಳಿದರು.
Hytech pimp santro ravi arrest in Gujrath interesting story.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 11:47 am
HK News Staffer
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm