ಬ್ರೇಕಿಂಗ್ ನ್ಯೂಸ್
14-01-23 07:07 pm HK News Desk ಕರ್ನಾಟಕ
ಮಂಡ್ಯ, ಜ.14: ಸ್ಯಾಂಟ್ರೋ ರವಿ ಬಂಧನದ ಬೆನ್ನಲ್ಲೇ ನಿಮಿಷಾಂಬಾ ದೇವಿ ಹರಕೆ ತೀರಿಸಿದ ಎಡಿಜಿಪಿ ಅಲೋಕ್ ಕುಮಾರ್
ಕಳೆದ ೧೨ ದಿನಗಳಿಂದ ಭಾರಿ ತಲೆನೋವಾಗಿದ್ದ ಕೆ.ಎಸ್. ಮಂಜುನಾಥ್ ಅಲಿಯಾಸ್ ಸ್ಯಾಂಟ್ರೋ ರವಿಯನ್ನು ಗುಜರಾತ್ನಲ್ಲಿ ಬಂಧಿಸಿದ್ದರಿಂದ ತುಂಬಾ ನಿರಾಳರಾದವರು ರಾಜ್ಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿರುವ ಅಲೋಕ್ ಕುಮಾರ್.
ಸ್ಯಾಂಟ್ರೋ ರವಿಯ ವಿಚಾರದಲ್ಲಿ ದಿನಕ್ಕೊಂದು, ಕ್ಷಣಕ್ಕೊಂದು ಪ್ರಶ್ನೆಗಳನ್ನು ಎದುರಿಸಿದ ಅವರು ಬಂಧನವಾಗದೆ ಯಾವ ಉತ್ತರವನ್ನೂ ನೀಡುವ ಹಾಗಿರಲಿಲ್ಲ. ಯಾಕೆಂದರೆ, ಪೊಲೀಸರೇ ಸ್ಯಾಂಟ್ರೋ ರವಿಯನ್ನು ಬಂಧಿಸಲು ಹಿಂದೇಟು ಹಾಕುತ್ತಿದ್ದಾರೆ, ಅವರೇ ರಕ್ಷಿಸುತ್ತಿದ್ದಾರೆ ಎಂಬ ಆರೋಪ ಎದುರಾಗಿತ್ತು. ಈ ನಡುವೆ, ಇದೀಗ ಎಡಿಜಿಪಿ ನಿರಾಳರಾಗಿದ್ದಾರೆ. ಹಾಗಾಗಿ ಅವರು ಶನಿವಾರ ಗಂಜಾಂನ ನಿಮಿಷಾಂಬ ದೇವಾಲಯಕ್ಕೆ ಭೇಟಿ ನೀಡಿ ಹರಕೆ ತೀರಿಸಿದ್ದಾರೆ.
ನಿಜವೆಂದರೆ, ಸ್ಯಾಂಟ್ರೋ ರವಿ ಬಂಧನವಾಗದೆ ಭಾರಿ ಅಪಮಾನ ಸಂಕಟ ಎದುರಿಸಿದ್ದ ಎಡಿಜಿಪಿ ಅವರು ನಾಲ್ಕು ದಿನಗಳ ಹಿಂದೆ ಇದೇ ದೇವಸ್ಥಾನಕ್ಕೆ ಬಂದು ಸ್ಯಾಂಟ್ರೋ ರವಿ ಬಂಧನವಾದರೆ ವಿಶೇಷ ಪೂಜೆ ಸಲ್ಲಿಸುವುದಾಗಿ ಹರಕೆ ಹೇಳಿಕೊಂಡಿದ್ದರು. ಹೀಗಾಗಿ ರವಿ ಬಂಧನ ಖಚಿತಪಡಿಸಿದ ೨೬ ಗಂಟೆಗಳಲ್ಲೇ ದೇವಸ್ಥಾನಕ್ಕೆ ಬಂದು ಹರಕೆ ತೀರಿಸಿದರು.
ದೇವಿಯ ಮೇಲೆ ನನಗೆ ಅಪಾರವಾದ ನಂಬಿಕೆ. ೨೦೧೧ರಲ್ಲಿ ಮೈಸೂರಿನಲ್ಲಿ ಒಂದು ಡಬಲ್ ಮರ್ಡರ್ ಆಗಿತ್ತು. ಆಗಲೂ ಇಲ್ಲಿ ಬಂದು ದೇವರಿಗೆ ಹರಕೆ ಹೊತ್ತಿದ್ದೆ. ಹರಕೆ ಹೊತ್ತು ಮೈಸೂರಿಗೆ ಮರಳುವಷ್ಟರಲ್ಲಿ ಅಂದರೆ ಸುಮಾರು ೫ ಗಂಟೆಯ ಒಳಗೆ ಆರೋಪಿಗಳನ್ನು ಬಂಧಿಸಲಾಗಿತ್ತು. ಈ ಬಾರಿ ಕಳೆದ ೧೦ನೇ ತಾರೀಕಿನಂದು ಇಲ್ಲಿಗೆ ಬಂದು ಸ್ಯಾಂಟ್ರೋ ರವಿ ಬಂಧನವಾಲಿ ಎಂದು ಹರಕೆ ಹೊತ್ತಿದ್ದೆ. ನಾನು ಹರಕೆ ಹೊತ್ತ ಒಂದೆರಡೇ ದಿನದಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ದೇವಿಯ ಮೇಲೆ ನಾನಿಟ್ಟ ನಂಬಿಕೆ ನಿಜವಾಗಿದೆ. ಹಾಗಾಗಿ ತಕ್ಷಣವೇ ಬಂದು ಪೂಜೆ ಸಲ್ಲಿಸಿದ್ದೇನೆ ಎಂದು ದೇವಸ್ಥಾನದಲ್ಲಿ ಮಾತನಾಡಿದ ಅಲೋಕ್ ಕುಮಾರ್ ಹೇಳಿದರು.
ಸ್ಯಾಂಟ್ರೋ ರವಿಯಿಂದಾಗಿ ಸರ್ಕಾರದ ಮೇಲೆ, ಪೊಲೀಸ್ ಇಲಾಖೆಗೆ ಕೆಟ್ಟ ಹೆಸರು ಬಂದಿತ್ತು. ಹೀಗಾಗಿ ಆದಷ್ಟು ಬೇಗನೆ ಆತನ ಬಂಧನ ಆಗಲಿ ಎಂದು ಹಾರೈಸಿದ್ದೆ. ಅದು ನಿಜವಾಗಿದೆ. ಇನ್ನು ಮುಂದೆ ಆತನ ವಿಚಾರಣೆಯನ್ನು ಸಮಗ್ರವಾಗಿ ನಡೆಸಲಾಗುವುದು ಎಂದು ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ.
Adgp Alok Kumar visits Mandya temple for the successful arrest of Santro Ravi.
07-02-25 11:00 pm
Bangalore Correspondent
ಮುಡಾ ಹಗರಣ ; ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್ ರಿಲೀಫ...
07-02-25 08:09 pm
Microfinance Karnataka, Governor, Siddaramai...
07-02-25 04:22 pm
National aerobic Championship Karnataka: ಜಮ್ಮ...
06-02-25 07:55 pm
Yadagiri Accident, Five Killed: ಯಾದಗಿರಿ; ಸಾರಿ...
05-02-25 06:39 pm
07-02-25 05:27 pm
HK News Desk
Zamfara school fire accident: SHOCKING; ತರಗತ...
07-02-25 05:23 pm
Telangana, student suicide: ಪ್ರಾಂಶುಪಾಲರು ಬೈದರ...
06-02-25 05:37 pm
ಅಮೆರಿಕದಲ್ಲಿ ಅಕ್ರಮ ವಲಸಿಗರ ಗಡೀಪಾರು ; ಪ್ರಧಾನಿ ಮೋ...
06-02-25 02:21 pm
Kerala Suicide, Ragging: ಕೇರಳದಲ್ಲಿ 15ರ ಬಾಲಕ ಮ...
04-02-25 10:49 pm
07-02-25 10:13 pm
Mangalore Correspondent
Brijesh Chowta, DK MP, Piyush Goyal: ದ.ಕ.ದಲ್ಲ...
07-02-25 08:24 pm
Belthangady, House, Evil spirit: ಬೆಳ್ತಂಗಡಿ ;...
07-02-25 03:12 pm
Mangalore airport: ಮಂಗಳೂರು ಏರ್ಪೋರ್ಟ್ ರನ್ ವೇ ವ...
06-02-25 10:16 pm
Prasad Attavar, Saloon Attack, Mangalore: ಮಸಾ...
05-02-25 10:51 pm
07-02-25 11:55 am
Mangalore Correspondent
Mangalore crime, blackmail Temple priest: ಅರ್...
06-02-25 09:32 pm
Kalaburagi, Reels,weapons, Crime: ಕಲಬುರಗಿ ; ಶ...
06-02-25 04:35 pm
Raichur Rape, Crime: ರಾಯಚೂರಿನಲ್ಲಿ ಎರಡನೇ ಕ್ಲಾಸ...
06-02-25 12:00 pm
Bangalore crime, Illicit affair: ಶೀಲ ಶಂಕಿಸಿ ನ...
05-02-25 04:29 pm