ಬ್ರೇಕಿಂಗ್ ನ್ಯೂಸ್
14-01-23 07:07 pm HK News Desk ಕರ್ನಾಟಕ
ಮಂಡ್ಯ, ಜ.14: ಸ್ಯಾಂಟ್ರೋ ರವಿ ಬಂಧನದ ಬೆನ್ನಲ್ಲೇ ನಿಮಿಷಾಂಬಾ ದೇವಿ ಹರಕೆ ತೀರಿಸಿದ ಎಡಿಜಿಪಿ ಅಲೋಕ್ ಕುಮಾರ್
ಕಳೆದ ೧೨ ದಿನಗಳಿಂದ ಭಾರಿ ತಲೆನೋವಾಗಿದ್ದ ಕೆ.ಎಸ್. ಮಂಜುನಾಥ್ ಅಲಿಯಾಸ್ ಸ್ಯಾಂಟ್ರೋ ರವಿಯನ್ನು ಗುಜರಾತ್ನಲ್ಲಿ ಬಂಧಿಸಿದ್ದರಿಂದ ತುಂಬಾ ನಿರಾಳರಾದವರು ರಾಜ್ಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿರುವ ಅಲೋಕ್ ಕುಮಾರ್.
ಸ್ಯಾಂಟ್ರೋ ರವಿಯ ವಿಚಾರದಲ್ಲಿ ದಿನಕ್ಕೊಂದು, ಕ್ಷಣಕ್ಕೊಂದು ಪ್ರಶ್ನೆಗಳನ್ನು ಎದುರಿಸಿದ ಅವರು ಬಂಧನವಾಗದೆ ಯಾವ ಉತ್ತರವನ್ನೂ ನೀಡುವ ಹಾಗಿರಲಿಲ್ಲ. ಯಾಕೆಂದರೆ, ಪೊಲೀಸರೇ ಸ್ಯಾಂಟ್ರೋ ರವಿಯನ್ನು ಬಂಧಿಸಲು ಹಿಂದೇಟು ಹಾಕುತ್ತಿದ್ದಾರೆ, ಅವರೇ ರಕ್ಷಿಸುತ್ತಿದ್ದಾರೆ ಎಂಬ ಆರೋಪ ಎದುರಾಗಿತ್ತು. ಈ ನಡುವೆ, ಇದೀಗ ಎಡಿಜಿಪಿ ನಿರಾಳರಾಗಿದ್ದಾರೆ. ಹಾಗಾಗಿ ಅವರು ಶನಿವಾರ ಗಂಜಾಂನ ನಿಮಿಷಾಂಬ ದೇವಾಲಯಕ್ಕೆ ಭೇಟಿ ನೀಡಿ ಹರಕೆ ತೀರಿಸಿದ್ದಾರೆ.
ನಿಜವೆಂದರೆ, ಸ್ಯಾಂಟ್ರೋ ರವಿ ಬಂಧನವಾಗದೆ ಭಾರಿ ಅಪಮಾನ ಸಂಕಟ ಎದುರಿಸಿದ್ದ ಎಡಿಜಿಪಿ ಅವರು ನಾಲ್ಕು ದಿನಗಳ ಹಿಂದೆ ಇದೇ ದೇವಸ್ಥಾನಕ್ಕೆ ಬಂದು ಸ್ಯಾಂಟ್ರೋ ರವಿ ಬಂಧನವಾದರೆ ವಿಶೇಷ ಪೂಜೆ ಸಲ್ಲಿಸುವುದಾಗಿ ಹರಕೆ ಹೇಳಿಕೊಂಡಿದ್ದರು. ಹೀಗಾಗಿ ರವಿ ಬಂಧನ ಖಚಿತಪಡಿಸಿದ ೨೬ ಗಂಟೆಗಳಲ್ಲೇ ದೇವಸ್ಥಾನಕ್ಕೆ ಬಂದು ಹರಕೆ ತೀರಿಸಿದರು.

ದೇವಿಯ ಮೇಲೆ ನನಗೆ ಅಪಾರವಾದ ನಂಬಿಕೆ. ೨೦೧೧ರಲ್ಲಿ ಮೈಸೂರಿನಲ್ಲಿ ಒಂದು ಡಬಲ್ ಮರ್ಡರ್ ಆಗಿತ್ತು. ಆಗಲೂ ಇಲ್ಲಿ ಬಂದು ದೇವರಿಗೆ ಹರಕೆ ಹೊತ್ತಿದ್ದೆ. ಹರಕೆ ಹೊತ್ತು ಮೈಸೂರಿಗೆ ಮರಳುವಷ್ಟರಲ್ಲಿ ಅಂದರೆ ಸುಮಾರು ೫ ಗಂಟೆಯ ಒಳಗೆ ಆರೋಪಿಗಳನ್ನು ಬಂಧಿಸಲಾಗಿತ್ತು. ಈ ಬಾರಿ ಕಳೆದ ೧೦ನೇ ತಾರೀಕಿನಂದು ಇಲ್ಲಿಗೆ ಬಂದು ಸ್ಯಾಂಟ್ರೋ ರವಿ ಬಂಧನವಾಲಿ ಎಂದು ಹರಕೆ ಹೊತ್ತಿದ್ದೆ. ನಾನು ಹರಕೆ ಹೊತ್ತ ಒಂದೆರಡೇ ದಿನದಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ದೇವಿಯ ಮೇಲೆ ನಾನಿಟ್ಟ ನಂಬಿಕೆ ನಿಜವಾಗಿದೆ. ಹಾಗಾಗಿ ತಕ್ಷಣವೇ ಬಂದು ಪೂಜೆ ಸಲ್ಲಿಸಿದ್ದೇನೆ ಎಂದು ದೇವಸ್ಥಾನದಲ್ಲಿ ಮಾತನಾಡಿದ ಅಲೋಕ್ ಕುಮಾರ್ ಹೇಳಿದರು.
ಸ್ಯಾಂಟ್ರೋ ರವಿಯಿಂದಾಗಿ ಸರ್ಕಾರದ ಮೇಲೆ, ಪೊಲೀಸ್ ಇಲಾಖೆಗೆ ಕೆಟ್ಟ ಹೆಸರು ಬಂದಿತ್ತು. ಹೀಗಾಗಿ ಆದಷ್ಟು ಬೇಗನೆ ಆತನ ಬಂಧನ ಆಗಲಿ ಎಂದು ಹಾರೈಸಿದ್ದೆ. ಅದು ನಿಜವಾಗಿದೆ. ಇನ್ನು ಮುಂದೆ ಆತನ ವಿಚಾರಣೆಯನ್ನು ಸಮಗ್ರವಾಗಿ ನಡೆಸಲಾಗುವುದು ಎಂದು ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ.
Adgp Alok Kumar visits Mandya temple for the successful arrest of Santro Ravi.
19-05-26 11:34 pm
HK News Desk
ಮೋರ್ಬಿ ಘಟನೆ ಗುಜರಾತ್ ಮಾದರಿಯನ್ನು ಟೊಳ್ಳಾಗಿಸಿದೆ,...
19-05-26 09:09 pm
ದಕ್ಷಿಣ ಭಾರತದಲ್ಲೇ ಮೊದಲ ಪ್ರಯೋಗ ; ಚಿಕ್ಕಮಗಳೂರಿನಲ್...
17-05-26 08:55 pm
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
21-05-26 02:49 pm
HK News Staffer
ಗೊಂದಲ ನಡುವೆಯೇ ಖಾತೆ ಹಂಚಿಕೆ ಮಾಡಿದ ಕೇರಳ ಸಿಎಂ ಸತೀ...
20-05-26 11:23 pm
ಆನ್ಲೈನ್ ಔಷಧ ಮಾರಾಟ ವಿರುದ್ಧ ದೇಶವ್ಯಾಪಿ ಪ್ರತಿಭಟ...
20-05-26 10:33 am
ಆನೆಗಳ ಕಾದಾಟ; ದುಬಾರೆ ಕ್ಯಾಂಪ್ನಲ್ಲಿ ಗಾಯಗೊಂಡಿದ್ದ...
19-05-26 04:27 pm
ಮತ್ತೆ ಬೆಲೆ ಏರಿಕೆ ಶಾಕ್! ಒಂದೇ ವಾರದಲ್ಲಿ 2ನೇ ಬಾರಿ...
19-05-26 01:06 pm
21-05-26 05:52 pm
HK News Staffer
ಮೇ 25ರವರೆಗೆ ಮೀನುಗಾರರಿಗೆ ಸಮುದ್ರ ಪ್ರವೇಶ ನಿಷೇಧ ಎ...
20-05-26 06:51 pm
ಬೆಳ್ತಂಗಡಿ ; ನೇತ್ರಾವತಿ ನದಿಯಲ್ಲಿ ಸ್ನಾನಕ್ಕಿಳಿದು...
19-05-26 10:47 pm
ಬಾವಿಯಲ್ಲಿ ನೀರಲ್ಲ , ಡೀಸೆಲ್ ! ಮಂಗಳೂರಿನಲ್ಲಿ ಆತಂಕ...
19-05-26 05:57 pm
ಒಂದು ರೂ.ಗೆ ಒಂದು ಶರ್ಟ್ ! ಆಫರ್ ಕೇಳಿ ಮುಗಿಬಿದ್ದ ಜ...
19-05-26 10:44 am
21-05-26 08:28 pm
HK News Staffer
ಕುಂಟಿಕಾನ; ಆವರಣ ಗೋಡೆ ಕುಸಿದು ಮಣ್ಣಿನಡಿಗೆ ಬಿದ್ದ ಸ...
21-05-26 07:33 pm
ಧರ್ಮಸ್ಥಳದ ಬುರುಡೆ ರಹಸ್ಯ ಪ್ರಕರಣ ಮತ್ತೆ ಚುರುಕು ;...
21-05-26 04:34 pm
ಎನ್ಐಎಸ್ಎಂ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ವಿದ್ಯಾ...
21-05-26 01:34 pm
ಬೆಳ್ತಂಗಡಿ; ಜಲಪಾತಕ್ಕೆ ತೆರಳಿದ್ದ ಕಾಲೇಜು ಯುವತಿಯರಿ...
21-05-26 10:20 am