ಬ್ರೇಕಿಂಗ್ ನ್ಯೂಸ್
15-01-23 01:28 pm HK News Desk ಕರ್ನಾಟಕ
ಬೆಳಗಾವಿ, ಜ.15 : ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ನಾಗ್ಪುರ ಕಚೇರಿಗೆ ಬೆದರಿಕೆ ಕರೆ ಮಾಡಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮೂಲದ ಜಯೇಶ್ ಕುಮಾರ್ ಎಂದು ತಿಳಿದುಬಂದಿದೆ. ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಜಯೇಶ್ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿದ್ದು ಜೈಲು ಒಳಗಿನಿಂದಲೇ ಸಚಿವರ ಕಚೇರಿಗೆ ಕರೆ ಮಾಡಿದ್ದಾನೆ.
ಜೈಲು ಕೈದಿಯಾಗಿರುವ ಜಯೇಶ್, ಅಕ್ರಮವಾಗಿ ಫೋನ್ ಬಳಸಿ ಈ ಕೃತ್ಯವನ್ನು ಎಸಗಿದ್ದಾನೆ. ಈ ಸಂಬಂಧ ನಾಗ್ಪುರ ಪೊಲೀಸರು ತನಿಖೆಗಾಗಿ ಬೆಳಗಾವಿಗೆ ತೆರಳಿದ್ದಾರೆ. ಆರೋಪಿಯನ್ನು ಪ್ರೊಡಕ್ಷನ್ ರಿಮಾಂಡ್ ನೀಡಲು ಕೇಳಿಕೊಂಡಿದ್ದೇವೆ ಎಂದು ನಾಗ್ಪುರ ಪೊಲೀಸ್ ಆಯುಕ್ತ ಅಮಿತೇಶ್ ಕುಮಾರ್ ಹೇಳಿದ್ದಾರೆ.
ಜಯೇಶ್ ಕುಮಾರ್ ಪುತ್ತೂರಿನ ಕೊಲೆ ಪ್ರಕರಣ ಒಂದರಲ್ಲಿ ಜೀವಾವಧಿ ಶಿಕ್ಷೆಗೆ ಒಳಪಟ್ಟಿದ್ದಾನೆ. ಈ ಹಿಂದೆ ಜೈಲಿನಲ್ಲೇ ಇದ್ದುಕೊಂಡು ಎಡಿಜಿಪಿ ಅಲೋಕ್ ಕುಮಾರ್ ಅವರಿಗೂ ಜೀವ ಬೆದರಿಕೆ ಕರೆಯನ್ನು ಮಾಡಿ ಸುದ್ದಿಯಾಗಿದ್ದ. ಆರೋಪಿಯ ಬಳಿ ಡೈರಿ ಪತ್ತೆಯಾಗಿದ್ದು, ಅದರಲ್ಲಿ ಸಚಿವರ ಕಚೇರಿಯ ನಂಬರ್ ಸೇರಿದಂತೆ ಹಲವು ನಂಬರ್ ಗಳಿದ್ದವು. ಸದ್ಯ ಡೈರಿಯನ್ನು ವಶಕ್ಕೆ ಪಡೆದಿದ್ದು, ಮೊಬೈಲ್ ಪತ್ತೆಯಾಗಿಲ್ಲ.
ಜಯೇಶ್, ಸಚಿವರ ನಾಗಪುರ ಕಚೇರಿಗೆ ಶನಿವಾರ ಬೆಳಗ್ಗೆ 11:25, 11:32 ಹಾಗೂ 12:30ಕ್ಕೆ ಮೂರು ಬಾರಿ ಕರೆ ಮಾಡಿ, ತಾನು ದಾವೂದ್ ಇಬ್ರಾಹಿಂ ಗ್ಯಾಂಗ್ ಸದಸ್ಯನೆಂದು ಹೇಳಿ 100 ಕೋಟಿ ರೂ.ಗೆ ಬೇಡಿಕೆಯಿಟ್ಟಿದ್ದ. ಇದಾದ ಬಳಿಕ ಸಚಿವರ ನಿವಾಸದ ಸುತ್ತ ಭದ್ರತೆ ಹೆಚ್ಚಿಸಲಾಗಿತ್ತು. ತನಿಖೆ ನಡೆಸಿದ ಭಯೋತ್ಪಾದನೆ ವಿರೋಧಿ ದಳ ಬೆಳಗಾವಿಗೆ ಬಂದಿದ್ದು ಆರೋಪಿಯನ್ನು ವಶಕ್ಕೆ ಪಡೆಯಲಿದ್ದಾರೆ.
Union Road Transport and Highways Minister Nitin Gadkari received death threat calls from a man who is imprisoned in Belagavi, Karnataka. Nagpur police traced the caller on Saturday. The caller has been identified as Jayesh Kantha. "Union Minister Nitin Gadkari was being threatened from jail. The caller is a notorious gangster and murder accused Jayesh Kantha, who is imprisoned in Belagavi jail. He threatened Gadkari's office by using the phone illegally inside the jail," Amitesh Kumar, Commissioner of Police, Nagpur, said.
09-08-25 10:12 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ಹೊಸ ಸ್ಟೇಡಿಯಂ ; 80 ಸಾವಿ...
09-08-25 08:00 pm
ಎರಡು ವಂದೇ ಭಾರತ್, ಮೆಟ್ರೋ ಯಲ್ಲೋ ಲೈನ್ ಅನಾವರಣಕ್ಕೆ...
09-08-25 07:28 pm
Siddaramaiah,Ibrahim: ಸಿದ್ದರಾಮಯ್ಯ ಎರಡು ಬಾರಿ ಮ...
09-08-25 03:32 pm
Fraud Case, Dhruva Sarja, Mumbai: ಆಕ್ಷನ್ ಪ್ರಿ...
09-08-25 01:40 pm
09-08-25 11:09 pm
HK News Desk
ಯಾರ ಮುಂದೆಯೂ ಭಾರತ ತಲೆ ಬಾಗದು ; ಸಾವಿರ ಬಾರಿ ಯತ್ನಿ...
09-08-25 07:38 pm
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
09-08-25 10:53 pm
Mangalore Correspondent
Drug’s Mangalore, Police, Arrest: ಡ್ರಗ್ಸ್ ಮುಕ...
09-08-25 09:42 pm
ಧರ್ಮಸ್ಥಳ ಕ್ಷೇತ್ರದ ಘನತೆ ಕುಗ್ಗಿಸಲೆತ್ನಿಸುತ್ತಿರುವ...
09-08-25 08:10 pm
Father Muller Medical College, Hospital, Mang...
09-08-25 04:22 pm
Dharmasthala,16th Spot at Bahubali Hill: ಧರ್ಮ...
09-08-25 02:16 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm