ಬ್ರೇಕಿಂಗ್ ನ್ಯೂಸ್
16-01-23 10:25 pm HK News Desk ಕರ್ನಾಟಕ
ಶಿವಮೊಗ್ಗ, ಜ.16: ಹೋರಿ ಓಡಿಸುವ ಸ್ಪರ್ಧೆಯನ್ನು ವೀಕ್ಷಿಸಲು ಬಂದಿದ್ದ ಇಬ್ಬರು ಯುವಕರು ಹೋರಿ ತಿವಿತಕ್ಕೊಳಗಾಗಿ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ನಡೆದಿದೆ.
ಶಿಕಾರಿಪುರ ತಾಲೂಕಿನ ಮಳೂರು ಗ್ರಾಮದಲ್ಲಿ ಸಂಕ್ರಾಂತಿ ಹಬ್ಬದ ಪ್ರಯುಕ್ತ ಹೋರಿ ಓಡಿಸುವ ಸ್ಪರ್ಧೆ ನಡೆಯುತ್ತಿದ್ದಾಗ ವೀಕ್ಷಣೆಗೆ ಬಂದಿದ್ದ ರಂಗನಾಥ್ (24) ಹೋರಿ ತಿವಿತಕ್ಕೊಳಗಾಗಿ ಗಾಯಗೊಂಡಿದ್ದರು. ಇದೇ ಸಂದರ್ಭದಲ್ಲಿ ಶಿವಮೊಗ್ಗ ತಾಲೂಕಿನ ಕೊನಗವಳ್ಳಿಯಲ್ಲಿ ಆಯೋಜಿಸಿದ್ದ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಆಲ್ಕೊಳದ ಲೋಕೇಶ್(31) ಎಂಬವರು ಗಾಯಗೊಂಡಿದ್ದು, ಇಬ್ಬರು ಕೂಡ ಸೋಮವಾರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಮಳೂರು ಗ್ರಾಮದಲ್ಲಿ ಹೋರಿ ಬೆದರಿಸುವ ಸ್ಪರ್ಧೆ ನಡೆಯುತ್ತಿದ್ದಾಗ ರಂಗನಾಥ್ ಅದನ್ನು ನೋಡಲೆಂದು ಸ್ಥಳಕ್ಕೆ ಬಂದಿದ್ದರು. ಈ ವೇಳೆ, ಹೋರಿಯು ಏಕಾಏಕಿ ನುಗ್ಗಿ ಬಂದು ಯುವಕರನ್ನು ತಿವಿದು ಹಾಕಿದೆ. ರಂಗನಾಥ್ ಗಂಭೀರ ಗಾಯಗೊಂಡಿದ್ದು ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಕೊನಗವಳ್ಳಿಯಲ್ಲೂ ಲೋಕೇಶ್ ಸೇರಿದಂತೆ ಜನರತ್ತ ಗೂಳಿ ನುಗ್ಗಿ ಬಂದಿದ್ದು, ತಿವಿದು ಹಾಕಿದೆ. ಈ ವೇಳೆ, ಲೋಕೇಶ್ ಗಂಭೀರ ಗಾಯಗೊಂಡು ಮೆಗ್ಗಾನ್ ಆಸ್ಪತ್ರೆ ಸೇರಿದ್ದರು. ಅವರಿಬ್ಬರು ಕೂಡ ಸೋಮವಾರ ಸಾವು ಕಂಡಿದ್ದಾರೆ.
ಶಿವಮೊಗ್ಗ, ಹಾವೇರಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಂಕ್ರಾಂತಿ, ದೀಪಾವಳಿ ಹಬ್ಬಗಳ ಸಂದರ್ಭದಲ್ಲಿ ಹೋರಿ ಓಡಿಸುವ ಸ್ಪರ್ಧೆ ನಡೆಯುತ್ತದೆ. ತರಬೇತಿ ಮಾಡಲ್ಪಟ್ಟಿರುವ ಹೋರಿಯನ್ನು ಓಡಿಸುತ್ತಾ ಮುನ್ನಡೆಯುವಾಗ ಉದ್ದಕ್ಕೂ ನಿಲ್ಲುವ ಯುವಕರು ಅದನ್ನು ಹಿಡಿಯಲು ಯತ್ನಿಸುತ್ತಾರೆ. ಹೋರಿಯನ್ನು ಹಿಡಿದು ನಿಲ್ಲಿಸುವ ಯುವಕರಿಗೆ ನಗದು ಬಹುಮಾನ ಇರುತ್ತದೆ. ಶಿವಮೊಗ್ಗದಲ್ಲಿ ನಡೆದ ಘಟನೆಯಲ್ಲಿ ಇತರ ಆರು ಮಂದಿಗೂ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಹಿನ್ನೆಲೆಯಲ್ಲಿ ಪೊಲೀಸರು ಸ್ಪರ್ಧೆ ಆಯೋಜಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
Shivamogga Hori habba, two dead.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm