ಬ್ರೇಕಿಂಗ್ ನ್ಯೂಸ್
16-01-23 10:25 pm HK News Desk ಕರ್ನಾಟಕ
ಶಿವಮೊಗ್ಗ, ಜ.16: ಹೋರಿ ಓಡಿಸುವ ಸ್ಪರ್ಧೆಯನ್ನು ವೀಕ್ಷಿಸಲು ಬಂದಿದ್ದ ಇಬ್ಬರು ಯುವಕರು ಹೋರಿ ತಿವಿತಕ್ಕೊಳಗಾಗಿ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ನಡೆದಿದೆ.
ಶಿಕಾರಿಪುರ ತಾಲೂಕಿನ ಮಳೂರು ಗ್ರಾಮದಲ್ಲಿ ಸಂಕ್ರಾಂತಿ ಹಬ್ಬದ ಪ್ರಯುಕ್ತ ಹೋರಿ ಓಡಿಸುವ ಸ್ಪರ್ಧೆ ನಡೆಯುತ್ತಿದ್ದಾಗ ವೀಕ್ಷಣೆಗೆ ಬಂದಿದ್ದ ರಂಗನಾಥ್ (24) ಹೋರಿ ತಿವಿತಕ್ಕೊಳಗಾಗಿ ಗಾಯಗೊಂಡಿದ್ದರು. ಇದೇ ಸಂದರ್ಭದಲ್ಲಿ ಶಿವಮೊಗ್ಗ ತಾಲೂಕಿನ ಕೊನಗವಳ್ಳಿಯಲ್ಲಿ ಆಯೋಜಿಸಿದ್ದ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಆಲ್ಕೊಳದ ಲೋಕೇಶ್(31) ಎಂಬವರು ಗಾಯಗೊಂಡಿದ್ದು, ಇಬ್ಬರು ಕೂಡ ಸೋಮವಾರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಮಳೂರು ಗ್ರಾಮದಲ್ಲಿ ಹೋರಿ ಬೆದರಿಸುವ ಸ್ಪರ್ಧೆ ನಡೆಯುತ್ತಿದ್ದಾಗ ರಂಗನಾಥ್ ಅದನ್ನು ನೋಡಲೆಂದು ಸ್ಥಳಕ್ಕೆ ಬಂದಿದ್ದರು. ಈ ವೇಳೆ, ಹೋರಿಯು ಏಕಾಏಕಿ ನುಗ್ಗಿ ಬಂದು ಯುವಕರನ್ನು ತಿವಿದು ಹಾಕಿದೆ. ರಂಗನಾಥ್ ಗಂಭೀರ ಗಾಯಗೊಂಡಿದ್ದು ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಕೊನಗವಳ್ಳಿಯಲ್ಲೂ ಲೋಕೇಶ್ ಸೇರಿದಂತೆ ಜನರತ್ತ ಗೂಳಿ ನುಗ್ಗಿ ಬಂದಿದ್ದು, ತಿವಿದು ಹಾಕಿದೆ. ಈ ವೇಳೆ, ಲೋಕೇಶ್ ಗಂಭೀರ ಗಾಯಗೊಂಡು ಮೆಗ್ಗಾನ್ ಆಸ್ಪತ್ರೆ ಸೇರಿದ್ದರು. ಅವರಿಬ್ಬರು ಕೂಡ ಸೋಮವಾರ ಸಾವು ಕಂಡಿದ್ದಾರೆ.
ಶಿವಮೊಗ್ಗ, ಹಾವೇರಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಂಕ್ರಾಂತಿ, ದೀಪಾವಳಿ ಹಬ್ಬಗಳ ಸಂದರ್ಭದಲ್ಲಿ ಹೋರಿ ಓಡಿಸುವ ಸ್ಪರ್ಧೆ ನಡೆಯುತ್ತದೆ. ತರಬೇತಿ ಮಾಡಲ್ಪಟ್ಟಿರುವ ಹೋರಿಯನ್ನು ಓಡಿಸುತ್ತಾ ಮುನ್ನಡೆಯುವಾಗ ಉದ್ದಕ್ಕೂ ನಿಲ್ಲುವ ಯುವಕರು ಅದನ್ನು ಹಿಡಿಯಲು ಯತ್ನಿಸುತ್ತಾರೆ. ಹೋರಿಯನ್ನು ಹಿಡಿದು ನಿಲ್ಲಿಸುವ ಯುವಕರಿಗೆ ನಗದು ಬಹುಮಾನ ಇರುತ್ತದೆ. ಶಿವಮೊಗ್ಗದಲ್ಲಿ ನಡೆದ ಘಟನೆಯಲ್ಲಿ ಇತರ ಆರು ಮಂದಿಗೂ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಹಿನ್ನೆಲೆಯಲ್ಲಿ ಪೊಲೀಸರು ಸ್ಪರ್ಧೆ ಆಯೋಜಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
Shivamogga Hori habba, two dead.
13-03-26 12:09 pm
HK News Staffer
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
13-03-26 11:24 am
HK News Staffer
ಅಮೆರಿಕದ ಪಶ್ಚಿಮ ಕರಾವಳಿಗೆ ಇರಾನ್ ದಾಳಿ ಸಾಧ್ಯತೆ ;...
12-03-26 09:03 pm
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
13-03-26 11:46 am
HK News Staffer
ಸುಳ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯ...
12-03-26 10:47 pm
ಸೈಬರ್ ಜಾಲದ ಮ್ಯೂಲ್ ಅಕೌಂಟ್ ವಂಚನೆ ; ಚೀನಾ ಲಿಂಕ್ ಹ...
12-03-26 02:44 pm
Cyber Fraud Awareness, Mangalore: ಸೈಬರ್ ವಂಚನೆ...
12-03-26 08:33 am
Gas News, Mangalore: ಗಲ್ಫ್ ಯುದ್ಧಕ್ಕೆ ಗ್ಯಾಸ್ ಟ...
11-03-26 09:15 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm