ಬ್ರೇಕಿಂಗ್ ನ್ಯೂಸ್
16-01-23 10:25 pm HK News Desk ಕರ್ನಾಟಕ
ಶಿವಮೊಗ್ಗ, ಜ.16: ಹೋರಿ ಓಡಿಸುವ ಸ್ಪರ್ಧೆಯನ್ನು ವೀಕ್ಷಿಸಲು ಬಂದಿದ್ದ ಇಬ್ಬರು ಯುವಕರು ಹೋರಿ ತಿವಿತಕ್ಕೊಳಗಾಗಿ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ನಡೆದಿದೆ.
ಶಿಕಾರಿಪುರ ತಾಲೂಕಿನ ಮಳೂರು ಗ್ರಾಮದಲ್ಲಿ ಸಂಕ್ರಾಂತಿ ಹಬ್ಬದ ಪ್ರಯುಕ್ತ ಹೋರಿ ಓಡಿಸುವ ಸ್ಪರ್ಧೆ ನಡೆಯುತ್ತಿದ್ದಾಗ ವೀಕ್ಷಣೆಗೆ ಬಂದಿದ್ದ ರಂಗನಾಥ್ (24) ಹೋರಿ ತಿವಿತಕ್ಕೊಳಗಾಗಿ ಗಾಯಗೊಂಡಿದ್ದರು. ಇದೇ ಸಂದರ್ಭದಲ್ಲಿ ಶಿವಮೊಗ್ಗ ತಾಲೂಕಿನ ಕೊನಗವಳ್ಳಿಯಲ್ಲಿ ಆಯೋಜಿಸಿದ್ದ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಆಲ್ಕೊಳದ ಲೋಕೇಶ್(31) ಎಂಬವರು ಗಾಯಗೊಂಡಿದ್ದು, ಇಬ್ಬರು ಕೂಡ ಸೋಮವಾರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಮಳೂರು ಗ್ರಾಮದಲ್ಲಿ ಹೋರಿ ಬೆದರಿಸುವ ಸ್ಪರ್ಧೆ ನಡೆಯುತ್ತಿದ್ದಾಗ ರಂಗನಾಥ್ ಅದನ್ನು ನೋಡಲೆಂದು ಸ್ಥಳಕ್ಕೆ ಬಂದಿದ್ದರು. ಈ ವೇಳೆ, ಹೋರಿಯು ಏಕಾಏಕಿ ನುಗ್ಗಿ ಬಂದು ಯುವಕರನ್ನು ತಿವಿದು ಹಾಕಿದೆ. ರಂಗನಾಥ್ ಗಂಭೀರ ಗಾಯಗೊಂಡಿದ್ದು ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಕೊನಗವಳ್ಳಿಯಲ್ಲೂ ಲೋಕೇಶ್ ಸೇರಿದಂತೆ ಜನರತ್ತ ಗೂಳಿ ನುಗ್ಗಿ ಬಂದಿದ್ದು, ತಿವಿದು ಹಾಕಿದೆ. ಈ ವೇಳೆ, ಲೋಕೇಶ್ ಗಂಭೀರ ಗಾಯಗೊಂಡು ಮೆಗ್ಗಾನ್ ಆಸ್ಪತ್ರೆ ಸೇರಿದ್ದರು. ಅವರಿಬ್ಬರು ಕೂಡ ಸೋಮವಾರ ಸಾವು ಕಂಡಿದ್ದಾರೆ.
ಶಿವಮೊಗ್ಗ, ಹಾವೇರಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಂಕ್ರಾಂತಿ, ದೀಪಾವಳಿ ಹಬ್ಬಗಳ ಸಂದರ್ಭದಲ್ಲಿ ಹೋರಿ ಓಡಿಸುವ ಸ್ಪರ್ಧೆ ನಡೆಯುತ್ತದೆ. ತರಬೇತಿ ಮಾಡಲ್ಪಟ್ಟಿರುವ ಹೋರಿಯನ್ನು ಓಡಿಸುತ್ತಾ ಮುನ್ನಡೆಯುವಾಗ ಉದ್ದಕ್ಕೂ ನಿಲ್ಲುವ ಯುವಕರು ಅದನ್ನು ಹಿಡಿಯಲು ಯತ್ನಿಸುತ್ತಾರೆ. ಹೋರಿಯನ್ನು ಹಿಡಿದು ನಿಲ್ಲಿಸುವ ಯುವಕರಿಗೆ ನಗದು ಬಹುಮಾನ ಇರುತ್ತದೆ. ಶಿವಮೊಗ್ಗದಲ್ಲಿ ನಡೆದ ಘಟನೆಯಲ್ಲಿ ಇತರ ಆರು ಮಂದಿಗೂ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಹಿನ್ನೆಲೆಯಲ್ಲಿ ಪೊಲೀಸರು ಸ್ಪರ್ಧೆ ಆಯೋಜಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
Shivamogga Hori habba, two dead.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm