ಬ್ರೇಕಿಂಗ್ ನ್ಯೂಸ್
17-01-23 06:50 pm Bangalore Correspondent ಕರ್ನಾಟಕ
ಬೆಂಗಳೂರು, ಜ.17: 200 ಯೂನಿಟ್ ಉಚಿತ ವಿದ್ಯುತ್, ‘ಗೃಹಲಕ್ಷ್ಮೀ’ ಕಾರ್ಯಕ್ರಮದಡಿ ಮನೆಯ ಯಜಮಾನಿಗೆ ಮಾಸಿಕ ₹2,000 ಸಹಾಯಧನ ನೀಡುವ ಕಾಂಗ್ರೆಸ್ನ ಆಶ್ವಾಸನೆಗಳ ವಿರುದ್ಧ ಬಿಜೆಪಿ ದಾಳಿ ಮುಂದುವರಿಸಿದೆ. ‘ಪುಕ್ಸಟ್ಟೆ ಭಾಗ್ಯಗಳನ್ನು ನೀಡಿ ರಾಜ್ಯವನ್ನು ದಿವಾಳಿ ಮಾಡುವ ಆಲೋಚನೆಯಲ್ಲಿದೆ ಕಾಂಗ್ರೆಸ್’ ಎಂದು ಆರೋಪಿಸಿದೆ.
ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದರೆ 200 ಯೂನಿಟ್ ಉಚಿತ ವಿದ್ಯುತ್ ನೀಡುವುದಾಗಿಯೂ, ರಾಜ್ಯದ ಪ್ರತಿ ಕುಟುಂಬದ ಯಜಮಾನಿಗೆ ₹2,000 ಸಹಾಯಧನ ನೀಡುವುದಾಗಿಯೂ ಕಾಂಗ್ರೆಸ್ ಭರವಸೆ ನೀಡಿದೆ. ಕಾಂಗ್ರೆಸ್ ಈ ಕಾರ್ಯಕ್ರಮಗಳನ್ನು ಘೋಷಿಸಿದಾಗಿನಿಂದಲೂ ವಾಗ್ದಾಳಿ ನಡೆಸುತ್ತಿರುವ ಬಿಜೆಪಿ, ಇಂದೂ ಕೂಡ ತನ್ನ ಟೀಕೆ ಮುಂದುವರಿಸಿದೆ.


ಕಾಂಗ್ರೆಸ್ ತನ್ನ ಏಳು ದಶಕಗಳ ಸಾಧನೆಯನ್ನು ಜನತೆಯ ಮುಂದಿಟ್ಟು ಮತ ಭಿಕ್ಷೆ ಕೇಳಬೇಕಿತ್ತು. ಅದರ ಬದಲು ಜನರಿಗೆ ಪೂರೈಸಲಾಗದ ಪೊಳ್ಳು ಭರವಸೆಗಳನ್ನು ಕೊಡುತ್ತಿದೆ. ಅಧಿಕಾರದ ಲಾಲಸೆಯಲ್ಲಿರುವ ಡಿ.ಕೆ ಶಿವಕುಮಾರ್ ಸ್ವಾಭಿಮಾನಿ ಕನ್ನಡಿಗರ ದಾರಿ ತಪ್ಪಿಸುತ್ತಿದ್ದಾರೆ. 2013-18ರವರೆಗೂ ಕಾಂಗ್ರೆಸ್ ಸಿದ್ದರಾಮಯ್ಯ ನೇತೃತ್ವದಲ್ಲಿ ಕರ್ನಾಟಕವನ್ನು ಕೊಳ್ಳೆ ಹೊಡಿದಿತ್ತು. ಕಾಂಗ್ರೆಸ್ ನೀಡಿದ ದೌರ್ಭಾಗ್ಯಗಳ ಫಲವಾಗಿ ಇಂದು ವಿರೋಧ ಪಕ್ಷದ ಸ್ಥಾನದಲ್ಲಿದೆ. ಸಂಸತ್ತಿನಲ್ಲಿ ವಿಪಕ್ಷ ಸ್ಥಾನ ಕಳೆದುಕೊಂಡಿರುವ ಕಾಂಗ್ರೆಸ್, ಕರ್ನಾಟಕದಲ್ಲೂ ಈ ದುಸ್ಥಿತಿ ಎದುರಾಗುವ ಆತಂಕದಲ್ಲಿದೆ’ ಎಂದು ವ್ಯಂಗ್ಯವಾಡಿದೆ.


‘ನಾ ನಾಯಕಿ’ ಎಂದು ರಾಜ್ಯಕ್ಕೆ ಬಂದ ಪ್ರಿಯಾಂಕಾ ಗಾಂಧಿ ವಂಶಪಾರಂಪರ್ಯ ನಾಯಕತ್ವವನ್ನು ಉಳಿಸಿಕೊಳ್ಳಲು ಸ್ವಾಭಿಮಾನಿ ಕನ್ನಡಿಗರನ್ನು ಈ ಬಾರಿ ಅವಲಂಬಿಸಿದ್ದಾರೆ. ರಾಹುಲ್ ಗಾಂಧಿ ಉಪಯೋಗಕ್ಕಿಲ್ಲವಾಗಿರುವುದರಿಂದಲೇ ಬೋಗಸ್ ಭಾಗ್ಯದ ಆಮಿಷ ಒಡುತ್ತಿರುವುದು. ಕನ್ನಡಿಗರದ್ದು ಕೊಡುವ ಗುಣವೆಂಬುದು ಅವರು ಮರೆತಂತಿದೆ’ ಎಂದು ಬಿಜೆಪಿ ಹೇಳಿದೆ.
ಕಾಂಗ್ರೆಸ್ ತನ್ನ ಏಳು ದಶಕಗಳ ಸಾಧನೆಯನ್ನು ಜನತೆಯ ಮುಂದಿಟ್ಟು ಮತ ಭಿಕ್ಷೆ ಕೇಳಬೇಕಿತ್ತು. ಅದರ ಬದಲು ಜನರಿಗೆ ಪೂರೈಸಲಾಗದ ಪೊಳ್ಳು ಭರವಸೆಗಳನ್ನು ಕೊಡುತ್ತಿದೆ. ಅಧಿಕಾರದ ಲಾಲಸೆಯಲ್ಲಿರುವ @DKShivakumar ಸ್ವಾಭಿಮಾನಿ ಕನ್ನಡಿಗರ ದಾರಿ ತಪ್ಪಿಸುತ್ತಿದ್ದಾರೆ.#PriyankaKeFakePromises
— BJP Karnataka (@BJP4Karnataka) January 17, 2023
1/5
Bjp slams congress over Gruha Lakshmi scheme by Priyanka in Bengaluru, saya schemes to fool people.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
16-02-26 12:53 pm
HK Staffer
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
16-02-26 11:13 pm
Mangaluru Staffer
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Manjunath Bhandary MLC: ಕೆಪಿಸಿಸಿ ಕಾರ್ಯಾಧ್ಯಕ್ಷ...
16-02-26 01:48 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
16-02-26 04:01 pm
HK News Desk
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm