ಬ್ರೇಕಿಂಗ್ ನ್ಯೂಸ್
18-10-20 12:47 pm Headline Karnataka News Network ಕರ್ನಾಟಕ
ಮೈಸೂರು, ಅಕ್ಟೋಬರ್ 18: ಪ್ರಜಾವಾಣಿ, ವಿಜಯವಾಣಿ, ಕಸ್ತೂರಿ ಟಿವಿಯಲ್ಲಿ ಕೆಲಸ ಮಾಡಿದ್ದ ಉತ್ಸಾಹಿ ಪತ್ರಕರ್ತ ಪವನ್ ಹೆತ್ತೂರು (35) ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ.
ಮೈಸೂರು ಪ್ರಜಾವಾಣಿ ಬ್ಯೂರೋದಲ್ಲಿ ಕೆಲಸ ಮಾಡುತ್ತಿದ್ದ ಪವನ್ ಹೆತ್ತೂರು ಅವರು ಪತ್ನಿ, ಇಬ್ಬರು ಚಿಕ್ಕ ವಯಸ್ಸಿನ ಮಕ್ಕಳನ್ನು ಅಗಲಿದ್ದಾರೆ. ಮೈಸೂರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಪವನ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿ, ಚಿಕಿತ್ಸೆಗೆ ಸ್ಪಂಧಿಸಲಿಲ್ಲ. ಅ.18 ರ ರಾತ್ರಿ 1.30 ಸುಮಾರಿಗೆ ಕೊನೆಯುಸಿರೆಳೆದರು.
ಮೈಸೂರಿನ ಪ್ರಜಾವಾಣಿ ವರದಿಗಾರ ಪವನ್ ಬದುಕಿ ಬರಲೆಂದು ಅವರ ಪತ್ರಕರ್ತ ಸ್ನೇಹಿತರು ಪ್ರಾರ್ಥಿಸಿದ್ದು ಪ್ರಯೋಜನವಾಗಲಿಲ್ಲ.ಮೃತರ ಅಂತ್ಯಕ್ರಿಯೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹೆತ್ತೂರಿನಲ್ಲಿ ನಡೆಯಲಿದೆ.
ಪತ್ರಕರ್ತ ಪವನ್ ಹೆತ್ತೂರು ಕೊರೊನಾ ಸೋಂಕಿನಿಂದ ನಿಧನವಾಗಿರುವುದಕ್ಕೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(KUWJ) ತೀವ್ರ ಸಂತಾಪ ವ್ಯಕ್ತಪಡಿಸಿದೆ.
ಮಡಿಕೇರಿಯ ಪ್ರಜಾವಾಣಿ ವರದಿಗಾರ ಕೆ.ಎ ಆದಿತ್ಯ ಮಾತನಾಡಿ, ನನ್ನ ಸಹೋದ್ಯೋಗಿ, ಗೆಳೆಯ ಪವನ್ಗೆ ಏನೂ ಆಗುವುದಿಲ್ಲ ಎಂಬ ನಂಬಿಕೆಯಿತ್ತು. ಮತ್ತೆ ಮೊದಲಿನಂತೆ ಆಗುವ ಭರವಸೆಯೂ ಎರಡು ದಿನಗಳ ಹಿಂದೆ ಮೂಡಿತ್ತು. ವಿಧಿ ಕ್ರೂರಿ ಕೊರೊನಾ ಈ ರೀತಿ ಮಾಡಿದೆ. ಅವನ ನಗು, ಮಾತು ಕಣ್ಮುಂದೆ ಬರುತ್ತಿದೆ. ಚಿಕ್ಕ ಅವಳಿ ಮಕ್ಕಳಿದ್ದಾರೆ ಎಂದು ದುಃಖ ವ್ಯಕ್ತಪಡಿಸಿದರು.
ಎರಡು ದಿನಗಳ ಎಲ್ಲ ಪತ್ರಕರ್ತ ಗೆಳೆಯರಿಗೆ ಆಸ್ಪತ್ರೆಯಿಂದ ಪವನ್ ಮಸೇಜ್ ಸಹ ಮಾಡಿದ್ದರು. ಆದರೆ, ಕೊರೊನಾ ಅವನಿಗೆ ಗೊತ್ತಿಲ್ಲದೇ ಅವನ ಶ್ವಾಸಕೋಶ ಹಾಳು ಮಾಡಿತ್ತು ಎಂದರು.
Young Kannada Journalist dies due to Covid 19. The deceased has been identified as Pawan (35) from mysore.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
02-03-26 09:23 pm
HK News Staffer
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
02-03-26 10:06 pm
HK News Staffer
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm