ಬ್ರೇಕಿಂಗ್ ನ್ಯೂಸ್
18-10-20 12:47 pm Headline Karnataka News Network ಕರ್ನಾಟಕ
ಮೈಸೂರು, ಅಕ್ಟೋಬರ್ 18: ಪ್ರಜಾವಾಣಿ, ವಿಜಯವಾಣಿ, ಕಸ್ತೂರಿ ಟಿವಿಯಲ್ಲಿ ಕೆಲಸ ಮಾಡಿದ್ದ ಉತ್ಸಾಹಿ ಪತ್ರಕರ್ತ ಪವನ್ ಹೆತ್ತೂರು (35) ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ.
ಮೈಸೂರು ಪ್ರಜಾವಾಣಿ ಬ್ಯೂರೋದಲ್ಲಿ ಕೆಲಸ ಮಾಡುತ್ತಿದ್ದ ಪವನ್ ಹೆತ್ತೂರು ಅವರು ಪತ್ನಿ, ಇಬ್ಬರು ಚಿಕ್ಕ ವಯಸ್ಸಿನ ಮಕ್ಕಳನ್ನು ಅಗಲಿದ್ದಾರೆ. ಮೈಸೂರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಪವನ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿ, ಚಿಕಿತ್ಸೆಗೆ ಸ್ಪಂಧಿಸಲಿಲ್ಲ. ಅ.18 ರ ರಾತ್ರಿ 1.30 ಸುಮಾರಿಗೆ ಕೊನೆಯುಸಿರೆಳೆದರು.
ಮೈಸೂರಿನ ಪ್ರಜಾವಾಣಿ ವರದಿಗಾರ ಪವನ್ ಬದುಕಿ ಬರಲೆಂದು ಅವರ ಪತ್ರಕರ್ತ ಸ್ನೇಹಿತರು ಪ್ರಾರ್ಥಿಸಿದ್ದು ಪ್ರಯೋಜನವಾಗಲಿಲ್ಲ.ಮೃತರ ಅಂತ್ಯಕ್ರಿಯೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹೆತ್ತೂರಿನಲ್ಲಿ ನಡೆಯಲಿದೆ.
ಪತ್ರಕರ್ತ ಪವನ್ ಹೆತ್ತೂರು ಕೊರೊನಾ ಸೋಂಕಿನಿಂದ ನಿಧನವಾಗಿರುವುದಕ್ಕೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(KUWJ) ತೀವ್ರ ಸಂತಾಪ ವ್ಯಕ್ತಪಡಿಸಿದೆ.
ಮಡಿಕೇರಿಯ ಪ್ರಜಾವಾಣಿ ವರದಿಗಾರ ಕೆ.ಎ ಆದಿತ್ಯ ಮಾತನಾಡಿ, ನನ್ನ ಸಹೋದ್ಯೋಗಿ, ಗೆಳೆಯ ಪವನ್ಗೆ ಏನೂ ಆಗುವುದಿಲ್ಲ ಎಂಬ ನಂಬಿಕೆಯಿತ್ತು. ಮತ್ತೆ ಮೊದಲಿನಂತೆ ಆಗುವ ಭರವಸೆಯೂ ಎರಡು ದಿನಗಳ ಹಿಂದೆ ಮೂಡಿತ್ತು. ವಿಧಿ ಕ್ರೂರಿ ಕೊರೊನಾ ಈ ರೀತಿ ಮಾಡಿದೆ. ಅವನ ನಗು, ಮಾತು ಕಣ್ಮುಂದೆ ಬರುತ್ತಿದೆ. ಚಿಕ್ಕ ಅವಳಿ ಮಕ್ಕಳಿದ್ದಾರೆ ಎಂದು ದುಃಖ ವ್ಯಕ್ತಪಡಿಸಿದರು.
ಎರಡು ದಿನಗಳ ಎಲ್ಲ ಪತ್ರಕರ್ತ ಗೆಳೆಯರಿಗೆ ಆಸ್ಪತ್ರೆಯಿಂದ ಪವನ್ ಮಸೇಜ್ ಸಹ ಮಾಡಿದ್ದರು. ಆದರೆ, ಕೊರೊನಾ ಅವನಿಗೆ ಗೊತ್ತಿಲ್ಲದೇ ಅವನ ಶ್ವಾಸಕೋಶ ಹಾಳು ಮಾಡಿತ್ತು ಎಂದರು.
Young Kannada Journalist dies due to Covid 19. The deceased has been identified as Pawan (35) from mysore.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
11-08-26 04:49 pm
HK News Staffer
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
11-08-26 03:08 pm
HK News Staffer
Mangalore Suicide: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ...
10-08-26 11:00 pm
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
11-08-26 01:04 pm
HK News Staffer
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am