ಬ್ರೇಕಿಂಗ್ ನ್ಯೂಸ್
18-10-20 12:47 pm Headline Karnataka News Network ಕರ್ನಾಟಕ
ಮೈಸೂರು, ಅಕ್ಟೋಬರ್ 18: ಪ್ರಜಾವಾಣಿ, ವಿಜಯವಾಣಿ, ಕಸ್ತೂರಿ ಟಿವಿಯಲ್ಲಿ ಕೆಲಸ ಮಾಡಿದ್ದ ಉತ್ಸಾಹಿ ಪತ್ರಕರ್ತ ಪವನ್ ಹೆತ್ತೂರು (35) ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ.
ಮೈಸೂರು ಪ್ರಜಾವಾಣಿ ಬ್ಯೂರೋದಲ್ಲಿ ಕೆಲಸ ಮಾಡುತ್ತಿದ್ದ ಪವನ್ ಹೆತ್ತೂರು ಅವರು ಪತ್ನಿ, ಇಬ್ಬರು ಚಿಕ್ಕ ವಯಸ್ಸಿನ ಮಕ್ಕಳನ್ನು ಅಗಲಿದ್ದಾರೆ. ಮೈಸೂರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಪವನ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿ, ಚಿಕಿತ್ಸೆಗೆ ಸ್ಪಂಧಿಸಲಿಲ್ಲ. ಅ.18 ರ ರಾತ್ರಿ 1.30 ಸುಮಾರಿಗೆ ಕೊನೆಯುಸಿರೆಳೆದರು.
ಮೈಸೂರಿನ ಪ್ರಜಾವಾಣಿ ವರದಿಗಾರ ಪವನ್ ಬದುಕಿ ಬರಲೆಂದು ಅವರ ಪತ್ರಕರ್ತ ಸ್ನೇಹಿತರು ಪ್ರಾರ್ಥಿಸಿದ್ದು ಪ್ರಯೋಜನವಾಗಲಿಲ್ಲ.ಮೃತರ ಅಂತ್ಯಕ್ರಿಯೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹೆತ್ತೂರಿನಲ್ಲಿ ನಡೆಯಲಿದೆ.
ಪತ್ರಕರ್ತ ಪವನ್ ಹೆತ್ತೂರು ಕೊರೊನಾ ಸೋಂಕಿನಿಂದ ನಿಧನವಾಗಿರುವುದಕ್ಕೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(KUWJ) ತೀವ್ರ ಸಂತಾಪ ವ್ಯಕ್ತಪಡಿಸಿದೆ.
ಮಡಿಕೇರಿಯ ಪ್ರಜಾವಾಣಿ ವರದಿಗಾರ ಕೆ.ಎ ಆದಿತ್ಯ ಮಾತನಾಡಿ, ನನ್ನ ಸಹೋದ್ಯೋಗಿ, ಗೆಳೆಯ ಪವನ್ಗೆ ಏನೂ ಆಗುವುದಿಲ್ಲ ಎಂಬ ನಂಬಿಕೆಯಿತ್ತು. ಮತ್ತೆ ಮೊದಲಿನಂತೆ ಆಗುವ ಭರವಸೆಯೂ ಎರಡು ದಿನಗಳ ಹಿಂದೆ ಮೂಡಿತ್ತು. ವಿಧಿ ಕ್ರೂರಿ ಕೊರೊನಾ ಈ ರೀತಿ ಮಾಡಿದೆ. ಅವನ ನಗು, ಮಾತು ಕಣ್ಮುಂದೆ ಬರುತ್ತಿದೆ. ಚಿಕ್ಕ ಅವಳಿ ಮಕ್ಕಳಿದ್ದಾರೆ ಎಂದು ದುಃಖ ವ್ಯಕ್ತಪಡಿಸಿದರು.
ಎರಡು ದಿನಗಳ ಎಲ್ಲ ಪತ್ರಕರ್ತ ಗೆಳೆಯರಿಗೆ ಆಸ್ಪತ್ರೆಯಿಂದ ಪವನ್ ಮಸೇಜ್ ಸಹ ಮಾಡಿದ್ದರು. ಆದರೆ, ಕೊರೊನಾ ಅವನಿಗೆ ಗೊತ್ತಿಲ್ಲದೇ ಅವನ ಶ್ವಾಸಕೋಶ ಹಾಳು ಮಾಡಿತ್ತು ಎಂದರು.
Young Kannada Journalist dies due to Covid 19. The deceased has been identified as Pawan (35) from mysore.
19-09-24 10:42 pm
Bangalore Correspondent
BJP MLA Munirathna, honeytrap, Blackmail: ಏಡ್...
19-09-24 08:42 pm
N Santosh Hegde: ಭ್ರಷ್ಟಾಚಾರ ಮಿತಿಮೀರಿದರೆ ದೇಶದಲ...
19-09-24 08:07 pm
Zameer Ahmed, Palestinian flag: ಪ್ಯಾಲೆಸ್ತೀನ್...
19-09-24 08:03 pm
Shobha Karandlaje, R Ashok, Nagamangala riot...
19-09-24 06:48 pm
19-09-24 09:51 pm
HK News Desk
Lebanon blast, Pager; ಪೇಜರ್ ಸ್ಫೋಟ ಬೆನ್ನಲ್ಲೇ ವ...
19-09-24 11:42 am
ಸ್ಮಾರ್ಟ್ ಫೋನ್ ಹ್ಯಾಕ್ ಆಗುತ್ತೆ ಎಂದು ಪೇಜರ್ ಬಳಸುತ...
18-09-24 02:52 pm
ಹೆದ್ದಾರಿ ವೆಚ್ಚಕ್ಕಿಂತ ಹೆಚ್ಚು ಟೋಲ್ ವಸೂಲಿ ಯಾಕೆ ?...
18-09-24 02:46 pm
ಜಿಂಬಾಬ್ವೆಯಲ್ಲಿ ಭೀಕರ ಬರ ; ಜನರ ಹಸಿವು ನೀಗಿಸಲು ನ...
18-09-24 11:03 am
19-09-24 11:12 pm
Mangalore Correspondent
Lokayukta, Kinnigoli, Crime: ಗುತ್ತಿಗೆದಾರರಿಂದ...
19-09-24 10:38 pm
Mangalore, Off roading, Car: 20-21ರಂದು ಮುಡಿಪಿ...
19-09-24 09:08 pm
By elections, Kota Srinivas Poojary; ಕೋಟರಿಂದ...
19-09-24 04:53 pm
Mcc elections, Manoj Kumar mayor: ಮಂಗಳೂರು ಪಾಲ...
19-09-24 03:39 pm
18-09-24 10:08 pm
Mangalore Correspondent
Bangalore fraud, Siddalingaiah Hiremath, Scam...
15-09-24 01:21 pm
MLA Munirathna Arrest: ತಿಂಗಳಿಗೆ 30 ಲಕ್ಷ ಲಂಚಕ್...
14-09-24 06:54 pm
Srimathi Shetty murder case, Mangalore Court...
14-09-24 11:52 am
Kristina Joksimovic, Miss Switzerland finalis...
13-09-24 10:50 pm