ಬ್ರೇಕಿಂಗ್ ನ್ಯೂಸ್
18-10-20 01:11 pm Headline Karnataka News Network ಕರ್ನಾಟಕ
ಬೆಂಗಳೂರು, ಅಕ್ಟೋಬರ್ 18 : ಮಹತ್ವದ ಬೆಳವಣಿಗೆಯಲ್ಲಿ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ವಿವಿಧ ಪ್ರಕರಣಗಳಲ್ಲಿ ವಶಕ್ಕೆ ಪಡೆದು ಗೋದಾಮಿನಲ್ಲಿ ಶೇಖರಿಸಿಟ್ಟಿದ್ದ 2.5 ಕೇಜಿ ಚಿನ್ನ ನಾಪತ್ತೆಯಾಗಿರುವ ವಿಚಾರ ಬೆಳಕಿಗೆ ಬಂದಿದೆ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಜಪ್ತಿ ಮಾಡಿದ್ದ 2.5 ಕೆಜಿ ಚಿನ್ನ ನಾಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಕಸ್ಟಮ್ಸ್ ಅಧಿಕಾರಿಗಳ ವಿರುದ್ಧ ಸಿಬಿಐ ಎಫ್ಐಆರ್ ದಾಖಲಿಸಿದ್ದಾರೆ.

ಕಸ್ಟಮ್ಸ್ ಇಲಾಖೆಯ ಜಂಟಿ ಆಯ್ತುಕ ಎಂ.ಜೆ. ಚೇತನ್ ದೂರಿನ ಮೇರೆಗೆ ಕಸ್ಟಮ್ಸ್ ಮತ್ತು ಕೇಂದ್ರ ಅಬಕಾರಿ ಇಲಾಖೆಯ ಸಹಾಯಕ ಆಯುಕ್ತ ವಿನೋದ್ ಚಿನ್ನಪ್ಪ ಮತ್ತು ಕೇಶವ್, ಸುಪರಿಟೆಂಡೆಂಟ್ ಎನ್. ಜಿ ರವಿಶೇಖರ್, ಕೆಬಿ ಲಿಂಗರಾಜು ಮತ್ತು ಖಾಸಗಿ ವ್ಯಕ್ತಿ ಎಸ್.ಟಿ ಹಿರೇಮಠ್ ವಿರುದ್ಧ ಎಫ್ಐರ್ ದಾಖಲಾಗಿದೆ.
ಕಳ್ಳ ಸಾಗಣೆಯ ಮೂಲಕ ದೇಶಕ್ಕೆ ಚಿನ್ನ ಸಾಗಿಸುವ ಪ್ರಕರಣಗಳನ್ನು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸುತ್ತಾರೆ. ಆದರೆ, ಕಳೆದ 2012 ರಿಂದ 14ರ ಮಧ್ಯೆ 13 ಪ್ರಕರಣಗಳಲ್ಲಿ ಎರಡು ಕೇಜಿ 594 ಗ್ರಾಂ ಚಿನ್ನ ವಶಕ್ಕೆ ಪಡೆಯಲಾಗಿತ್ತು. ಈ ವೇಳೆ ಸಿಕ್ಕಿಬಿದ್ದ ಚಿನ್ನವನ್ನು ವಿಮಾನ ನಿಲ್ದಾಣದ ಕಾರ್ಗೋ ಗೋದಾಮಿನಲ್ಲಿ ಇಡಲಾಗಿತ್ತು. ಆದರೆ ಅಲ್ಲಿ ಇಟ್ಟಿದ್ದ ಚಿನ್ನ ಈಗ ನಾಪತ್ತೆಯಾಗಿರುವುದು ಹೈದರಾಬಾದಿನ ವಿಚಕ್ಷಣ ದಳದ ತಪಾಸಣೆಯಲ್ಲಿ ಬೆಳಕಿಗೆ ಬಂದಿದೆ.
ಈ ವೇಳೆ ಕಸ್ಟಮ್ಸ್ ಇಲಾಖೆಯ ಅಧಿಕಾರಿಗಳ ಬಗ್ಗೆ ಅನುಮಾನ ವ್ಯಕ್ತವಾಗಿತ್ತು. ವಿಚಕ್ಷಣ ದಳದ ಅಧಿಕಾರಿಗಳ ಮಾಹಿತಿಯ ಮೇರೆಗೆ ಕಸ್ಟಮ್ಸ್ ಇಲಾಖೆ ಆಯುಕ್ತ ಚೇತನ್ ದೂರು ನೀಡಿದ್ದರು. ಅದರಂತೆ ಸಿಬಿಐ ಅಧಿಕಾರಿಗಳು ಅ.12 ರಂದು ಎಫ್ಐಆರ್ ದಾಖಲಿಸಿದ್ದು ತನಿಖೆ ಆರಂಭಿಸಿದ್ದಾರೆ.
In a startling incident, as much as 2.5 kg of gold has gone missin from the cargo section of Bengaluru Kempegowda international godown. FIR has been registered against 5 custom officers.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
11-08-26 04:49 pm
HK News Staffer
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
11-08-26 03:08 pm
HK News Staffer
Mangalore Suicide: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ...
10-08-26 11:00 pm
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
11-08-26 01:04 pm
HK News Staffer
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am