ಬ್ರೇಕಿಂಗ್ ನ್ಯೂಸ್
22-01-23 12:51 pm HK News Desk ಕರ್ನಾಟಕ
ಮೈಸೂರು, ಜ 22; ಮೈಸೂರು ಜಿಲ್ಲೆಯ ತಿ. ನರಸೀಪುರದಲ್ಲಿ ಚಿರತೆಯ ದಾಳಿಗೆ 11 ವರ್ಷದ ಬಾಲಕ ಬಲಿಯಾಗಿದ್ದಾನೆ. ಅರಣ್ಯ ಇಲಾಖೆ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸಿದ್ದಾರೆ.
ತಿ. ನರಸೀಪುರ ತಾಲೂಕಿನ ಹೊರಳಹಳ್ಳಿ ಗ್ರಾಮದಲ್ಲಿ 11 ವರ್ಷದ ಜಯಂತ್ ಎಂಬ ಬಾಲಕ ಚಿರತೆ ದಾಳಿಗೆ ಬಲಿಯಾಗಿದ್ದಾನೆ. ಶನಿವಾರ ರಾತ್ರಿಯಿಂದ ಜಯಂತ್ ನಾಪತ್ತೆಯಾಗಿದ್ದ, ಪೋಷಕರು ಹುಡುಕಾಟ ನಡೆಸುತ್ತಿದ್ದರು.

ಭಾನುವಾರ ಗ್ರಾಮದ ಸಮೀಪ ಇರುವ ಹೊಲದಲ್ಲಿ ಬಾಲಕನ ಶವ ಪತ್ತೆಯಾಗಿದೆ. ತಾಲೂಕಿನಲ್ಲಿ ಚಿರತೆ ದಾಳಿಗೆ ಇದು ನಾಲ್ಕನೇ ಬಲಿಯಾಗಿದ್ದು, ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ
ಕೆಲವು ದಿನಗಳ ಹಿಂದೆ ತಾಲೂಕಿನಲ್ಲಿ 60 ವರ್ಷದ ವೃದ್ಧ ಚಿರತೆ ದಾಳಿಯಿಂದಾಗಿ ಮೃತಪಟ್ಟಿದ್ದ. ಇದು ತಾಲೂಕಿನಲ್ಲಿ ಚಿರತೆ ದಾಳಿಗೆ 4ನೇ ಬಲಿಯಾಗಿದೆ. ಚಿರತೆಯನ್ನು ಹಿಡಿಯಲು ಅರಣ್ಯ ಇಲಾಖೆ ವಿಫಲವಾಗಿದೆ ಎಂದು ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ.

ಅರಣ್ಯ ಇಲಾಖೆ ಪ್ರಕಟಣೆ;
ಹೊರಳಹಳ್ಳಿ ಗ್ರಾಮದಲ್ಲಿ ಬಾಲಕ ಚಿರತೆ ದಾಳಿಗೆ ಬಲಿಯಾದ ಬಳಿಕ ಅರಣ್ಯ ಇಲಾಖೆ ಪ್ರಕಟಣೆ ಹೊರಡಿಸಿದೆ. ಜನರು ಮನೆಯಿಂದ ಅನಗತ್ಯವಾಗಿ ಹೊರ ಬರಬೇಡಿ ಎಂದು ಹೇಳಿದೆ.
ಸಂಜೆ, ರಾತ್ರಿ ಮಕ್ಕಳು, ಮಹಿಳೆಯರು ಒಂಟಿಯಾಗಿ ಸಂಚಾರ ನಡೆಸಬೇಡಿ ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ. ಚಿರತೆ ಹಿಡಿಯಲು ಬೋನು ಅಳವಡಿಕೆ ಮಾಡುವ ಸಾಧ್ಯತೆ ಇದೆ.
ಚಿರತೆ ಕಾಟ ತಡೆಯಲು ವಿಫಲರಾದ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ತಿ. ನರಸೀಪುರ-ಚಾಮರಾಜನಗರ ರಸ್ತೆ ತಡೆದು ಜನರು ಪ್ರತಿಭಟನೆ ನಡೆಸುತ್ತಿದ್ದಾರೆ. ಇದರಿಂದಾಗಿ ರಸ್ತೆಯಲ್ಲಿ ಸಂಚಾರ ದಟ್ಟಣೆ ಉಂಟಾಗಿದೆ.
A 11-year-old boy who went missing on Saturday evening in Horalahalli village in T.Narsipura taluk of Mysuru, was found dead in what is suspected to be a leopard attack.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 11:47 am
HK News Staffer
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm