ಬ್ರೇಕಿಂಗ್ ನ್ಯೂಸ್
22-01-23 12:51 pm HK News Desk ಕರ್ನಾಟಕ
ಮೈಸೂರು, ಜ 22; ಮೈಸೂರು ಜಿಲ್ಲೆಯ ತಿ. ನರಸೀಪುರದಲ್ಲಿ ಚಿರತೆಯ ದಾಳಿಗೆ 11 ವರ್ಷದ ಬಾಲಕ ಬಲಿಯಾಗಿದ್ದಾನೆ. ಅರಣ್ಯ ಇಲಾಖೆ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸಿದ್ದಾರೆ.
ತಿ. ನರಸೀಪುರ ತಾಲೂಕಿನ ಹೊರಳಹಳ್ಳಿ ಗ್ರಾಮದಲ್ಲಿ 11 ವರ್ಷದ ಜಯಂತ್ ಎಂಬ ಬಾಲಕ ಚಿರತೆ ದಾಳಿಗೆ ಬಲಿಯಾಗಿದ್ದಾನೆ. ಶನಿವಾರ ರಾತ್ರಿಯಿಂದ ಜಯಂತ್ ನಾಪತ್ತೆಯಾಗಿದ್ದ, ಪೋಷಕರು ಹುಡುಕಾಟ ನಡೆಸುತ್ತಿದ್ದರು.
ಭಾನುವಾರ ಗ್ರಾಮದ ಸಮೀಪ ಇರುವ ಹೊಲದಲ್ಲಿ ಬಾಲಕನ ಶವ ಪತ್ತೆಯಾಗಿದೆ. ತಾಲೂಕಿನಲ್ಲಿ ಚಿರತೆ ದಾಳಿಗೆ ಇದು ನಾಲ್ಕನೇ ಬಲಿಯಾಗಿದ್ದು, ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ
ಕೆಲವು ದಿನಗಳ ಹಿಂದೆ ತಾಲೂಕಿನಲ್ಲಿ 60 ವರ್ಷದ ವೃದ್ಧ ಚಿರತೆ ದಾಳಿಯಿಂದಾಗಿ ಮೃತಪಟ್ಟಿದ್ದ. ಇದು ತಾಲೂಕಿನಲ್ಲಿ ಚಿರತೆ ದಾಳಿಗೆ 4ನೇ ಬಲಿಯಾಗಿದೆ. ಚಿರತೆಯನ್ನು ಹಿಡಿಯಲು ಅರಣ್ಯ ಇಲಾಖೆ ವಿಫಲವಾಗಿದೆ ಎಂದು ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ.
ಅರಣ್ಯ ಇಲಾಖೆ ಪ್ರಕಟಣೆ;
ಹೊರಳಹಳ್ಳಿ ಗ್ರಾಮದಲ್ಲಿ ಬಾಲಕ ಚಿರತೆ ದಾಳಿಗೆ ಬಲಿಯಾದ ಬಳಿಕ ಅರಣ್ಯ ಇಲಾಖೆ ಪ್ರಕಟಣೆ ಹೊರಡಿಸಿದೆ. ಜನರು ಮನೆಯಿಂದ ಅನಗತ್ಯವಾಗಿ ಹೊರ ಬರಬೇಡಿ ಎಂದು ಹೇಳಿದೆ.
ಸಂಜೆ, ರಾತ್ರಿ ಮಕ್ಕಳು, ಮಹಿಳೆಯರು ಒಂಟಿಯಾಗಿ ಸಂಚಾರ ನಡೆಸಬೇಡಿ ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ. ಚಿರತೆ ಹಿಡಿಯಲು ಬೋನು ಅಳವಡಿಕೆ ಮಾಡುವ ಸಾಧ್ಯತೆ ಇದೆ.
ಚಿರತೆ ಕಾಟ ತಡೆಯಲು ವಿಫಲರಾದ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ತಿ. ನರಸೀಪುರ-ಚಾಮರಾಜನಗರ ರಸ್ತೆ ತಡೆದು ಜನರು ಪ್ರತಿಭಟನೆ ನಡೆಸುತ್ತಿದ್ದಾರೆ. ಇದರಿಂದಾಗಿ ರಸ್ತೆಯಲ್ಲಿ ಸಂಚಾರ ದಟ್ಟಣೆ ಉಂಟಾಗಿದೆ.
A 11-year-old boy who went missing on Saturday evening in Horalahalli village in T.Narsipura taluk of Mysuru, was found dead in what is suspected to be a leopard attack.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm