ಬ್ರೇಕಿಂಗ್ ನ್ಯೂಸ್
22-01-23 12:51 pm HK News Desk ಕರ್ನಾಟಕ
ಮೈಸೂರು, ಜ 22; ಮೈಸೂರು ಜಿಲ್ಲೆಯ ತಿ. ನರಸೀಪುರದಲ್ಲಿ ಚಿರತೆಯ ದಾಳಿಗೆ 11 ವರ್ಷದ ಬಾಲಕ ಬಲಿಯಾಗಿದ್ದಾನೆ. ಅರಣ್ಯ ಇಲಾಖೆ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸಿದ್ದಾರೆ.
ತಿ. ನರಸೀಪುರ ತಾಲೂಕಿನ ಹೊರಳಹಳ್ಳಿ ಗ್ರಾಮದಲ್ಲಿ 11 ವರ್ಷದ ಜಯಂತ್ ಎಂಬ ಬಾಲಕ ಚಿರತೆ ದಾಳಿಗೆ ಬಲಿಯಾಗಿದ್ದಾನೆ. ಶನಿವಾರ ರಾತ್ರಿಯಿಂದ ಜಯಂತ್ ನಾಪತ್ತೆಯಾಗಿದ್ದ, ಪೋಷಕರು ಹುಡುಕಾಟ ನಡೆಸುತ್ತಿದ್ದರು.
ಭಾನುವಾರ ಗ್ರಾಮದ ಸಮೀಪ ಇರುವ ಹೊಲದಲ್ಲಿ ಬಾಲಕನ ಶವ ಪತ್ತೆಯಾಗಿದೆ. ತಾಲೂಕಿನಲ್ಲಿ ಚಿರತೆ ದಾಳಿಗೆ ಇದು ನಾಲ್ಕನೇ ಬಲಿಯಾಗಿದ್ದು, ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ
ಕೆಲವು ದಿನಗಳ ಹಿಂದೆ ತಾಲೂಕಿನಲ್ಲಿ 60 ವರ್ಷದ ವೃದ್ಧ ಚಿರತೆ ದಾಳಿಯಿಂದಾಗಿ ಮೃತಪಟ್ಟಿದ್ದ. ಇದು ತಾಲೂಕಿನಲ್ಲಿ ಚಿರತೆ ದಾಳಿಗೆ 4ನೇ ಬಲಿಯಾಗಿದೆ. ಚಿರತೆಯನ್ನು ಹಿಡಿಯಲು ಅರಣ್ಯ ಇಲಾಖೆ ವಿಫಲವಾಗಿದೆ ಎಂದು ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ.
ಅರಣ್ಯ ಇಲಾಖೆ ಪ್ರಕಟಣೆ;
ಹೊರಳಹಳ್ಳಿ ಗ್ರಾಮದಲ್ಲಿ ಬಾಲಕ ಚಿರತೆ ದಾಳಿಗೆ ಬಲಿಯಾದ ಬಳಿಕ ಅರಣ್ಯ ಇಲಾಖೆ ಪ್ರಕಟಣೆ ಹೊರಡಿಸಿದೆ. ಜನರು ಮನೆಯಿಂದ ಅನಗತ್ಯವಾಗಿ ಹೊರ ಬರಬೇಡಿ ಎಂದು ಹೇಳಿದೆ.
ಸಂಜೆ, ರಾತ್ರಿ ಮಕ್ಕಳು, ಮಹಿಳೆಯರು ಒಂಟಿಯಾಗಿ ಸಂಚಾರ ನಡೆಸಬೇಡಿ ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ. ಚಿರತೆ ಹಿಡಿಯಲು ಬೋನು ಅಳವಡಿಕೆ ಮಾಡುವ ಸಾಧ್ಯತೆ ಇದೆ.
ಚಿರತೆ ಕಾಟ ತಡೆಯಲು ವಿಫಲರಾದ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ತಿ. ನರಸೀಪುರ-ಚಾಮರಾಜನಗರ ರಸ್ತೆ ತಡೆದು ಜನರು ಪ್ರತಿಭಟನೆ ನಡೆಸುತ್ತಿದ್ದಾರೆ. ಇದರಿಂದಾಗಿ ರಸ್ತೆಯಲ್ಲಿ ಸಂಚಾರ ದಟ್ಟಣೆ ಉಂಟಾಗಿದೆ.
A 11-year-old boy who went missing on Saturday evening in Horalahalli village in T.Narsipura taluk of Mysuru, was found dead in what is suspected to be a leopard attack.
09-08-25 10:12 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ಹೊಸ ಸ್ಟೇಡಿಯಂ ; 80 ಸಾವಿ...
09-08-25 08:00 pm
ಎರಡು ವಂದೇ ಭಾರತ್, ಮೆಟ್ರೋ ಯಲ್ಲೋ ಲೈನ್ ಅನಾವರಣಕ್ಕೆ...
09-08-25 07:28 pm
Siddaramaiah,Ibrahim: ಸಿದ್ದರಾಮಯ್ಯ ಎರಡು ಬಾರಿ ಮ...
09-08-25 03:32 pm
Fraud Case, Dhruva Sarja, Mumbai: ಆಕ್ಷನ್ ಪ್ರಿ...
09-08-25 01:40 pm
09-08-25 11:09 pm
HK News Desk
ಯಾರ ಮುಂದೆಯೂ ಭಾರತ ತಲೆ ಬಾಗದು ; ಸಾವಿರ ಬಾರಿ ಯತ್ನಿ...
09-08-25 07:38 pm
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
09-08-25 10:53 pm
Mangalore Correspondent
Drug’s Mangalore, Police, Arrest: ಡ್ರಗ್ಸ್ ಮುಕ...
09-08-25 09:42 pm
ಧರ್ಮಸ್ಥಳ ಕ್ಷೇತ್ರದ ಘನತೆ ಕುಗ್ಗಿಸಲೆತ್ನಿಸುತ್ತಿರುವ...
09-08-25 08:10 pm
Father Muller Medical College, Hospital, Mang...
09-08-25 04:22 pm
Dharmasthala,16th Spot at Bahubali Hill: ಧರ್ಮ...
09-08-25 02:16 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm