ಬ್ರೇಕಿಂಗ್ ನ್ಯೂಸ್
22-01-23 12:51 pm HK News Desk ಕರ್ನಾಟಕ
ಮೈಸೂರು, ಜ 22; ಮೈಸೂರು ಜಿಲ್ಲೆಯ ತಿ. ನರಸೀಪುರದಲ್ಲಿ ಚಿರತೆಯ ದಾಳಿಗೆ 11 ವರ್ಷದ ಬಾಲಕ ಬಲಿಯಾಗಿದ್ದಾನೆ. ಅರಣ್ಯ ಇಲಾಖೆ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸಿದ್ದಾರೆ.
ತಿ. ನರಸೀಪುರ ತಾಲೂಕಿನ ಹೊರಳಹಳ್ಳಿ ಗ್ರಾಮದಲ್ಲಿ 11 ವರ್ಷದ ಜಯಂತ್ ಎಂಬ ಬಾಲಕ ಚಿರತೆ ದಾಳಿಗೆ ಬಲಿಯಾಗಿದ್ದಾನೆ. ಶನಿವಾರ ರಾತ್ರಿಯಿಂದ ಜಯಂತ್ ನಾಪತ್ತೆಯಾಗಿದ್ದ, ಪೋಷಕರು ಹುಡುಕಾಟ ನಡೆಸುತ್ತಿದ್ದರು.

ಭಾನುವಾರ ಗ್ರಾಮದ ಸಮೀಪ ಇರುವ ಹೊಲದಲ್ಲಿ ಬಾಲಕನ ಶವ ಪತ್ತೆಯಾಗಿದೆ. ತಾಲೂಕಿನಲ್ಲಿ ಚಿರತೆ ದಾಳಿಗೆ ಇದು ನಾಲ್ಕನೇ ಬಲಿಯಾಗಿದ್ದು, ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ
ಕೆಲವು ದಿನಗಳ ಹಿಂದೆ ತಾಲೂಕಿನಲ್ಲಿ 60 ವರ್ಷದ ವೃದ್ಧ ಚಿರತೆ ದಾಳಿಯಿಂದಾಗಿ ಮೃತಪಟ್ಟಿದ್ದ. ಇದು ತಾಲೂಕಿನಲ್ಲಿ ಚಿರತೆ ದಾಳಿಗೆ 4ನೇ ಬಲಿಯಾಗಿದೆ. ಚಿರತೆಯನ್ನು ಹಿಡಿಯಲು ಅರಣ್ಯ ಇಲಾಖೆ ವಿಫಲವಾಗಿದೆ ಎಂದು ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ.

ಅರಣ್ಯ ಇಲಾಖೆ ಪ್ರಕಟಣೆ;
ಹೊರಳಹಳ್ಳಿ ಗ್ರಾಮದಲ್ಲಿ ಬಾಲಕ ಚಿರತೆ ದಾಳಿಗೆ ಬಲಿಯಾದ ಬಳಿಕ ಅರಣ್ಯ ಇಲಾಖೆ ಪ್ರಕಟಣೆ ಹೊರಡಿಸಿದೆ. ಜನರು ಮನೆಯಿಂದ ಅನಗತ್ಯವಾಗಿ ಹೊರ ಬರಬೇಡಿ ಎಂದು ಹೇಳಿದೆ.
ಸಂಜೆ, ರಾತ್ರಿ ಮಕ್ಕಳು, ಮಹಿಳೆಯರು ಒಂಟಿಯಾಗಿ ಸಂಚಾರ ನಡೆಸಬೇಡಿ ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ. ಚಿರತೆ ಹಿಡಿಯಲು ಬೋನು ಅಳವಡಿಕೆ ಮಾಡುವ ಸಾಧ್ಯತೆ ಇದೆ.
ಚಿರತೆ ಕಾಟ ತಡೆಯಲು ವಿಫಲರಾದ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ತಿ. ನರಸೀಪುರ-ಚಾಮರಾಜನಗರ ರಸ್ತೆ ತಡೆದು ಜನರು ಪ್ರತಿಭಟನೆ ನಡೆಸುತ್ತಿದ್ದಾರೆ. ಇದರಿಂದಾಗಿ ರಸ್ತೆಯಲ್ಲಿ ಸಂಚಾರ ದಟ್ಟಣೆ ಉಂಟಾಗಿದೆ.
A 11-year-old boy who went missing on Saturday evening in Horalahalli village in T.Narsipura taluk of Mysuru, was found dead in what is suspected to be a leopard attack.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm