ಕೊಟ್ಟ ಮಾತಿಗೆ ತಪ್ಪಿದರೆ ರಾಜಕೀಯದಿಂದಲೇ ‌ನಿವೃತ್ತಿ ; ಸಂಚಲನ ಎಬ್ಬಿಸಿದ ಸಿದ್ದರಾಮಯ್ಯ ಹೇಳಿಕೆ 

22-01-23 07:55 pm       HK News Desk   ಕರ್ನಾಟಕ

ಕೊಟ್ಟ ಮಾತಿಗೆ ತಪ್ಪಿದರೆ ರಾಜಕೀಯದಿಂದಲೇ ನಿವೃತ್ತಿಯಾಗುವುದಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ ನೀಡಿದ್ದು ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ.

ಹಾಸನ, ಜ.22 : ಕೊಟ್ಟ ಮಾತಿಗೆ ತಪ್ಪಿದರೆ ರಾಜಕೀಯದಿಂದಲೇ ನಿವೃತ್ತಿಯಾಗುವುದಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ ನೀಡಿದ್ದು ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ನಾವು ಅಧಿಕಾರಕ್ಕೆ ಬಂದರೆ 10 ಕೆಜಿ ಉಚಿತ ಅಕ್ಕಿ ಕೊಡುತ್ತೇವೆ. ಹಾಗೆಯೇ ಮಹಿಳೆಯರಿಗೆ 2000 ರೂ. ಹಣ ಕೊಡುತ್ತೇವೆ. ಕೊಟ್ಟ ಮಾತಿಗೆ ತಪ್ಪಿದರೆ ರಾಜಕೀಯದಿಂದಲೇ ನಿವೃತ್ತಿ ಘೋಷಿಸುತ್ತೇನೆ ಎಂದು ತಿಳಿಸಿದ್ದಾರೆ. 

ಹಾಸನದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಹಾಸನ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳಲ್ಲಿ 5 ಕ್ಷೇತ್ರಗಳನ್ನಾದರೂ ಕಾಂಗ್ರೆಸ್ ಗೆಲ್ಲಬೇಕು. ನಾನು ಮುಖ್ಯಮಂತ್ರಿಯಾಗಿದ್ದಾಗ 7 ಕೆಜಿ ಅಕ್ಕಿ ಕೊಡುತ್ತಿದ್ದೆ. ಈಗ ಬಿಜೆಪಿಯವರು ಎರಡು ಕೆಜಿ ಇಳಿಸಿ, 5 ಕೇಜಿ ಅಕ್ಕಿ ಕೊಡುತ್ತಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 10 ಕೆಜಿ ಅಕ್ಕಿ ಕೊಡಲಿದೆ ಎಂದು ಹೇಳಿದರು.

ಕುಟುಂಬದ ಮಹಿಳೆಯರಿಗೆ 2000 ರೂ. ನೀಡುತ್ತೇವೆ. ಉಚಿತವಾಗಿ ತಿಂಗಳಿಗೆ 200 ಯೂನಿಟ್ ವಿದ್ಯುತ್ ಕೊಡುತ್ತೇವೆ. ಕೊಟ್ಟ ಮಾತಿನಂತೆ ನಾವು ನಡೆದುಕೊಳ್ಳುತ್ತೇವೆ. ಮಾತು ತಪ್ಪಿದರೆ ರಾಜಕೀಯ ನಿವೃತ್ತಿ ಪಡೆಯುತ್ತೇವೆ ಎಂದು ಘೋಷಿಸಿದರು.

Karnataka Congress Siddaramaiah promises 10 kg free rice to poor if voted to power says will leave politics if not fullfilled.