ಬ್ರೇಕಿಂಗ್ ನ್ಯೂಸ್
23-01-23 05:22 pm HK News Desk ಕರ್ನಾಟಕ
ಹಾವೇರಿ, ಜ.23: ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜಕಾರಣಿಗಳಿಗೆ ಈಗ ಮತದಾರನೇ ಮನೆ ದೇವರು. ಹೇಗಾದರೂ ಮತ್ತೆ ಗೆದ್ದು ಬರಬೇಕೆಂಬ ಗುಂಗಿನಲ್ಲಿ ಮತದಾರನ ಓಲೈಕೆಗೆ ತೊಡಗಿದ್ದಾರೆ. ಸಿಎಂ ತವರು ಜಿಲ್ಲೆ ಹಾವೇರಿಯಲ್ಲಿ ಪಕ್ಷೇತರ ಶಾಸಕ, ಮಾಜಿ ಸಚಿವ ಆರ್.ಶಂಕರ್ ಮತದಾರರಿಗೆ ಕುಕ್ಕರ್ ಕೊಡಲು ಶುರು ಮಾಡಿದ್ದಾರೆ.
ರಾಣೆಬೆನ್ನೂರು ವಿಧಾನಸಭೆ ಕ್ಷೇತ್ರದ ಜನತೆಗೆ ಆರ್. ಶಂಕರ್ ಕುಕ್ಕರ್ ಗಿಫ್ಟ್ ಕೊಟ್ಟಿದ್ದಾರೆ. ಮನೆ ಮನೆಗೆ ತೆರಳಿ ಶಂಕರ್ ಬೆಂಬಲಿಗರು ಕೂಪನ್ ನೀಡುತ್ತಿದ್ದು, ಅದನ್ನು ನಿಗದಿತ ಅಂಗಡಿಯಲ್ಲಿ ತೋರಿಸಿದರೆ ಕುಕ್ಕರ್ ಉಚಿತ ಸಿಗುತ್ತದೆ.
"ಸದಾ ನಿಮ್ಮ ಸೇವೆಗಾಗಿ ನಿಮ್ಮ ಮನೆ ಮಗ ಆರ್ ಶಂಕರ್" ಅಂತ ಕುಕ್ಕರ್ ಮೇಲೆ ಬರೆದಿದ್ದು ಅದನ್ನು ರಹಸ್ಯವಾಗಿ ಹಂಚಿಕೆ ಮಾಡಲಾಗುತ್ತಿದೆ. ಬಿಜೆಪಿ ಎಂ.ಎಲ್ ಸಿ, ಮಾಜಿ ಸಚಿವ ಆರ್ ಶಂಕರ್ ಈ ಬಾರಿ ರಾಣೆಬೆನ್ನೂರು ಕ್ಷೇತ್ರದಲ್ಲಿ ಮತ್ತೆ ಚುನಾವಣೆ ಸ್ಪರ್ಧೆಗೆ ಸಜ್ಜಾಗಿದ್ದಾರೆ. ಬಿಜೆಪಿಯಿಂದ ಟಿಕೆಟ್ ಸಿಕ್ಕರೆ ಓಕೆ, ಇಲ್ಲದಿದ್ದರೆ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಲು ರೆಡಿಯಾಗಿದ್ದಾರೆ.

ಈ ನಡುವೆ, ಆರ್. ಶಂಕರ್ ಕಾಂಗ್ರೆಸ್ ಸೇರ್ತಾರೆ ಅನ್ನೋ ಸುದ್ದಿಯೂ ಜೋರಾಗೇ ಹರಿದಾಡ್ತಿದೆ. ಕಳೆದ 2018 ರ ವಿಧಾನ ಚುನಾವಣೆಯಲ್ಲಿ ರಾಣೆಬೆನ್ನೂರು ಕ್ಷೇತ್ರದಲ್ಲಿ ಕರ್ನಾಟಕ ಪ್ರಜ್ಞಾವಂತರ ಜನತಾ ಪಕ್ಷದ ಹೆಸರಲ್ಲಿ ಸ್ಪರ್ಧಿಸಿ ಆಯ್ಕೆಯಾಗಿದ್ದರು. ಚುನಾವಣೆ ಬಳಿಕ ಯಡಿಯೂರಪ್ಪ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲು ಸಿದ್ಧತೆ ನಡೆಸುತ್ತಿದ್ದಾಗ ಶಂಕರ್ ಬೆಂಬಲ ನೀಡಲು ಮುಂದಾಗಿದ್ದರು. ಆದರೆ ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ಅದೇ ದಿನ ಸಾಯಂಕಾಲ ಕೆಪಿಸಿಸಿ ಕಚೇರಿಗೆ ಹೋಗಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರಕ್ಕೆ ಬೆಂಬಲ ನೀಡಿದ್ದರು.

ಸಮ್ಮಿಶ್ರ ಸರ್ಕಾರಕ್ಕೆ ಬೆಂಬಲ ನೀಡಿದ್ದಲ್ಲದೆ, ತಮ್ಮ ಪಕ್ಷವನ್ನು ಕಾಂಗ್ರೆಸ್ ಜೊತೆಗೆ ವಿಲೀನಗೊಳಿಸಿದ್ದರು. ಸಮ್ಮಿಶ್ರ ಸರ್ಕಾರದಲ್ಲಿ ಅಬಕಾರಿ ಸಚಿವ ಖಾತೆಯನ್ನೂ ಪಡೆದಿದ್ದರು. ಆದರೆ, ಬಳಿಕ ಬಿಜೆಪಿ ದಾಳಕ್ಕೆ ಸಿಲುಕಿ ಆಪರೇಷನ್ ಕಮಲಕ್ಕೊಳಗಾಗಿ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು. ಶಂಕರ್ ಬಿಜೆಪಿಗೆ ಸೇರ್ಪಡೆಗೊಂಡರೂ ಉಪ ಚುನಾವಣೆ ಸಂದರ್ಭದಲ್ಲಿ ಟಿಕೆಟ್ ಸಿಕ್ಕಿರಲಿಲ್ಲ. ಯಡಿಯೂರಪ್ಪ ಮಾತ್ರ ಅವರನ್ನು ಸಚಿವರನ್ನಾಗಿಸುವ ನೀಡಿದ್ದಲ್ಲದೆ, ವಿಧಾನ ಪರಿಷತ್ ಸದಸ್ಯನಾಗಿ ಮಾಡಿದ್ದರು. ಆದರೆ ಸಚಿವ ಸ್ಥಾನ ಸಿಗದೆ ನಿರಾಶೆಗೊಂಡಿದ್ದರು.
ಹೀಗಾಗಿ ಅತ್ತಲೂ ಇಲ್ಲ ಇತ್ತಲೂ ಎಂಬಂತಾಗಿ ರಾಜಕೀಯ ದಾಳಕ್ಕೆ ಸಿಲುಕಿ ಕಂಗಾಲಾಗಿದ್ದರು. ಇದೀಗ ಮತ್ತೆ ರಾಣೆಬೆನ್ನೂರು ಅಖಾಡಕ್ಕೆ ಧುಮುಕಲು ಶಂಕರ್ ರೆಡಿಯಾಗಿದ್ದು ಕಾಂಗ್ರೆಸ್, ಬಿಜೆಪಿ ಯಾರು ಸೀಟು ಕೊಟ್ಡರೂ ಸೈ ಎನ್ನುವ ಇರಾದೆಯಲ್ಲಿದ್ದಾರೆ. ಎಲ್ಲಿಯೂ ಸಿಗದಿದ್ದರೆ ಪಕ್ಷೇತರನಾಗಿಯೇ ಸ್ಪರ್ಧಿಸುವ ಇಂಗಿತ ಹೊಂದಿದ್ದಾರೆ.
Cooker politics, R Shankar distributes free cooker with his pictures to voters in Haveri.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 04:31 pm
HK News Staffer
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm