ಬ್ರೇಕಿಂಗ್ ನ್ಯೂಸ್
23-01-23 05:30 pm HK News Desk ಕರ್ನಾಟಕ
ಬೆಳಗಾವಿ, ಜ.23: ಬೆಂಗಳೂರನ್ನು ಸಂಪೂರ್ಣವಾಗಿ ಹಾಳು ಮಾಡಿದವರೇ ಕಾಂಗ್ರೆಸ್ ನವರು. ಭ್ರಷ್ಟಾಚಾರದಲ್ಲಿ ಕಾಂಗ್ರೆಸ್ ನಾಯಕರು ಪಿ ಎಚ್ ಡಿ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದರು.
ಬೆಳಗಾವಿ ವಿಮಾನ ನಿಲ್ದಾಣದ ಲ್ಲಿ ಸೋಮವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು ಬೆಂಗಳೂರಿನಲ್ಲಿ ಅತಿಕ್ರಮಣ ಬರುವುದಕ್ಕೆ ರಾಜಕಾಲುವೆ ಮುಚ್ಚುವದಕ್ಕೆ ಮತ್ತು ರಾಜಕಾಲುವೆ ಹೆಸರಿನಲ್ಲಿ ಭ್ರಷ್ಟಾಚಾರ ನಡೆದಿರುವದಕ್ಕೆ ಕಾಂಗ್ರೆಸ್ ಕಾರಣ.
ಹತ್ತು ಹಲವು ಭ್ರಷ್ಟಾಚಾರ ಅವರ ಕಾಲದಲ್ಲಿ ನಡೆದಿವೆ. ಈಗ ಅವುಗಳನ್ನು ಮುಚ್ಚಿಹಾಕಲು ಈ ರೀತಿಯ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಭ್ರಷ್ಟಾಚಾರ ಮತ್ತು ಕಾಂಗ್ರೆಸ್ ಅವಿಭಾಜ್ಯ ಅಂಗ. ಸಂವಿಧಾನಾತ್ಮಕ ವಾಗಿ ರಚನೆಯಾಗಿದ್ದ ಲೋಕಾಯುಕ್ತ ಸಂಸ್ಥೆಯನ್ನು ಮುಚ್ಚಿ ಭ್ರಷ್ಟಾಚಾರಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ. ಕಾಂಗ್ರೆಸ್ ನಾಯಕರು ತಮ್ಮ ವಿರುದ್ಧ ಇದ್ದ ಎಲ್ಲ ಭ್ರಷ್ಟಾಚಾರ ಪ್ರಕರಣಗಳನ್ನು ಎ ಸಿ ಬಿ ಗೆ ಕೊಟ್ಟು ಮುಚ್ಚಿಹಾಕಿದರು ಎಂದು ಟೀಕಿಸಿದ ಮುಖ್ಯಮಂತ್ರಿಗಳು ಈಗ ಮತ್ತೆ ಎಲ್ಲ ಪ್ರಕರಣಗಳನ್ನು ಲೋಕಾಯುಕ್ತಕ್ಕೆ ಮರು ಶಿಫಾರಸ್ಸು ಮಾಡುತ್ತಿದ್ದೇವೆ ಎಂದರು.
ಪ್ರತಿಪಕ್ಷ ಕಾಂಗ್ರೆಸ್ ಪ್ರತಿಯೊಂದಕ್ಕೂ ಬಹಿರಂಗ ಚರ್ಚೆಗೆ ಬನ್ನಿ ಎಂದು ಹೇಳುವದು ಹಾಸ್ಯಾಸ್ಪದವಾಗಿದೆ. ಈ ಹಿಂದೆ ಬೆಂಗಳೂರು ಅಧಿವೇಶನ ನಂತರ ಬೆಳಗಾವಿ ಅಧಿವೇಶನದಲ್ಲಿ ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತೇವೆ ಎಂದು ನೋಟೀಸ್ ಕೊಟ್ಟಿದ್ದರು. ಅಧಿವೇಶನಕ್ಕಿಂತ ದೊಡ್ಡ ಬಹಿರಂಗ ಸಭೆಯ ಅಗತ್ಯವಿದೆಯಾ. ಇದನ್ನು ಇಡೀ ರಾಜ್ಯದ ಜನರು ನೋಡುತ್ತಾರೆ. ಇಲ್ಲಿ ಎದುರು ಬದುರು ಚರ್ಚೆ ನಡೆಯುತ್ತದೆ. ಆದರೆ ನೋಟೀಸ್ ಕೊಟ್ಟಿದ್ದ ಕಾಂಗ್ರೆಸ್ ನವರು ಓಡಿಹೋದರು. ಅಧಿವೇಶನದಲ್ಲಿ ಚರ್ಚೆ ಮಾಡದೆ ಭಾಷಣಕ್ಕಾಗಿ ಈ ರೀತಿ ಮಾತನಾಡುವದು ಸರಿಯಲ್ಲ ಎಂದು ತಿರುಗೇಟು ನೀಡಿದರು.
ಸುಳ್ಳನ್ನು ಹೇಳುವದರಲ್ಲಿ ಕೀಳುಮಟ್ಟದ ಹೇಳಿಕೆ ಕೊಡುವದರಲ್ಲಿ ಕಾಂಗ್ರೆಸ್ ನವರು ನಿಸ್ಸೀಮರು. ಇದು ನಮ್ಮ ರಾಜ್ಯದ ಸಂಸ್ಕೃತಿಯಲ್ಲ. ನಾವು ನಮ್ಮ ಸಂಸ್ಕೃತಿಯ ಚೌಕಟ್ಟಿನಲ್ಲಿರಬೇಕು ಎಂದು ಬೊಮ್ಮಾಯಿ ಹೇಳಿದರು.
Congress leaders are PHD holders in corruption, and masters in speaking lies slams CM Bommai in Belagavi.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 04:31 pm
HK News Staffer
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm