ಬ್ರೇಕಿಂಗ್ ನ್ಯೂಸ್
23-01-23 09:04 pm HK News Desk ಕರ್ನಾಟಕ
ಹಾವೇರಿ, ಜ.23 : ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ ಸ್ಪರ್ಧೆಗೆ ಪಾಕಿಸ್ತಾನವೇ ಸುರಕ್ಷಿತ. ಅಲ್ಲಿ ಮೋದಿ, ಬೊಮ್ಮಾಯಿ, ಯಡಿಯೂರಪ್ಪನವರಿಲ್ಲ. ಅಲ್ಲಿಗೆ ಹೋದರೆ ಕಾಟ ಕೊಡೋದಕ್ಕೆ ಡಿ.ಕೆ. ಶಿವಕುಮಾರ್ ಮತ್ತು ಖರ್ಗೆ ಅವರೂ ಇರಲ್ಲ ಎಂದು ಶಾಸಕ ಸಿ.ಟಿ.ರವಿ ವ್ಯಂಗ್ಯವಾಡಿದ್ದಾರೆ.
ರಾಣೆಬೆನ್ನೂರಿನಲ್ಲಿ ಮಾಧ್ಯಮಕ್ಕೆ ಮಾತನಾಡಿದ ಅವರು, ಬಿಜೆಪಿಯ ಹಾಲಿ ಶಾಸಕರೇ ಕಾಂಗ್ರೆಸ್ ಸೇರಲು ಸಿದ್ಧವಿದ್ದಾರೆ ಎಂಬ ಡಿ.ಕೆ. ಶಿವಕುಮಾರ್ ಹೇಳಿಕೆ ಸತ್ಯಕ್ಕೆ ದೂರವಾದುದು. ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ಕಾಂಗ್ರೆಸ್ನವರು ತುದಿಗಾಲ ಮೇಲೆ ನಿಂತಿದ್ದಾರೆ. ನಾವು ಆಯ್ಕೆ ಮಾಡಿ ಸೇರ್ಪಡೆ ಮಾಡಿಕೊಳ್ಳುತ್ತೇವೆ. ಕಾಂಗ್ರೆಸ್ ಎಂಬ ಮುಳುಗುತ್ತಿರುವ ಹಡಗಿನಲ್ಲಿ ಯಾರು ಇರುತ್ತಾರೆ ಎಂದು ತಿರುಗೇಟು ನೀಡಿದರು.
ವಿಧಾನ ಪರಿಷತ್ ಸದಸ್ಯ ಆರ್. ಶಂಕರ್ ಕಾಂಗ್ರೆಸ್ ಸೇರುವ ವಿಚಾರಕ್ಕೆ ಪ್ರತಿಕ್ರಿಯಿಸಿ, ಶಂಕರ್ ಅನರ್ಹ ಆದಾಗ ಎಂಎಲ್ಸಿ ಮಾಡಿದ್ದೇವೆ. ಅವರಿಗೆ ಮಂತ್ರಿ ಆಗಬೇಕು ಅಂತ ಆಸೆ ಇತ್ತು. ತಾಳ್ಮೆಯಿಂದ ಇದ್ದು ಬಿಜೆಪಿಯಲ್ಲಿ ಉಳಿದುಕೊಂಡು ಬಿಜೆಪಿ ಅಭ್ಯರ್ಥಿ ಗೆಲ್ಲಿಸಿದರೆ ಬಡ್ಡಿ ಸಮೇತ ಬರುತ್ತೆ, ಬಿಟ್ಟು ಹೋದರೆ ಡೆಪಾಸಿಟ್ ಕೂಡ ಹೋಗುತ್ತೆ ಎಂದು ನುಡಿದರು.
ಪ್ರಜಾಧ್ವನಿ ಎಂದರೆ ಜನ ಮಾತನಾಡೋದು. ಆರೇಳು ಸಾವಿರ ಜನ ಸೇರಿಸಿದರೆ ಪ್ರಜಾಧ್ವನಿ ಹೇಗಾಗುತ್ತೆ. ಇದು ಪ್ರಜಾಧ್ವನಿ ಅಲ್ಲ, ಕಾಂಗ್ರೆಸ್ ಧ್ವನಿ. ಪ್ರಜೆಗಳು ನಮ್ಮ ಜೊತೆ ಇರುವುದಕ್ಕೆ ಕಾಂಗ್ರೆಸ್ನವರಿಗೆ ಭಯ ಶುರುವಾಗಿದೆ. ಪ್ರಜೆಗಳನ್ನು ಲೂಟಿ ಮಾಡಿದ ಕಾಂಗ್ರೆಸ್ನವರದ್ದು ಸೌಂಡು, ನಮ್ಮದ ಗ್ರೌಂಡು. ಸಿದ್ದರಾಮಯ್ಯನವರು ಅಪ್ಪನಾಣೆ ಮಾಡಿದ ಎಲ್ಲ ಹೇಳಿಕೆಗಳು ಸುಳ್ಳಾಗಿವೆ ಎಂದು ತಿರುಗೇಟು ನೀಡಿದರು.
Pakistan is the best place for Siddaramaiah to contest this coming elections slams CT Ravi in Haveri.
14-10-25 11:24 am
HK News Desk
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
15-10-25 12:09 pm
HK News Desk
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
Ex-IAS Officer Kannan Gopinathan, Congress: ಜ...
13-10-25 10:37 pm
15-10-25 12:12 pm
Udupi Correspondent
ಮೈಸೂರು, ಬೆಂಗಳೂರು, ಶಿವಮೊಗ್ಗ ಕಂಬಳಕ್ಕೆ ಹೈಕೋರ್ಟ್...
14-10-25 10:36 pm
ಸುಳ್ಯ ಮೂಲದ ಯುವಕ ಮಾರಿಷಸ್ ನಲ್ಲಿ ಜಲಪಾತಕ್ಕೆ ಬಿದ್ದ...
14-10-25 10:13 pm
ರಸ್ತೆಯಲ್ಲೇ ತ್ಯಾಜ್ಯ ಸುರಿಸುವ ಮೀನಿನ ಲಾರಿಗಳಿಗೆ ಮತ...
14-10-25 09:12 pm
ಮುದುಂಗಾರುಕಟ್ಟೆ ಬಸ್ ನಿಲ್ದಾಣದಲ್ಲಿ ಯುವಕನ ಮೃತದೇಹ...
14-10-25 06:39 pm
15-10-25 12:00 pm
HK News Desk
ಅಮಲಿಗಾಗಿ ಯುವಕರಿಗೆ ಕಫ್ ಸಿರಪ್ ಮಾರಾಟ ದಂಧೆ ; ದಾವಣ...
14-10-25 04:44 pm
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm