ಬ್ರೇಕಿಂಗ್ ನ್ಯೂಸ್
24-01-23 03:01 pm HK News Desk ಕರ್ನಾಟಕ
ಕಲಬುರಗಿ, ಜ.24 : ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣದಿಂದ ಪಾರು ಮಾಡುವುದಕ್ಕಾಗಿ ಸಿಐಡಿ ಡಿವೈಎಸ್ಪಿ ಶಂಕರಗೌಡ ಪಾಟೀಲ ಅವರಿಗೆ 76 ಲಕ್ಷ ರೂ. ನೀಡಿರುವುದಾಗಿ ಪ್ರಕರಣದ ಕಿಂಗ್ ಪಿನ್ ಎನ್ನಲಾಗಿರುವ ಆರ್.ಡಿ. ಪಾಟೀಲ ಕರ್ನಾಟಕ ಲೋಕಾಯುಕ್ತರಿಗೆ ದೂರು ನೀಡಿದ್ದಾನೆ.
ದೂರಿನ ಜೊತೆಗೆ 8.4 ನಿಮಿಷ ಅವಧಿಯ ಆಡಿಯೋ ಇರುವ ಪೆನ್ ಡ್ರೈವನ್ನು ದಾಖಲೆಯಾಗಿ ನೀಡಿದ್ದಾನೆ. ಇದಲ್ಲದೆ, 'ಆರ್.ಡಿ. ಪಾಟೀಲ ಯುವ ಬ್ರಿಗೇಡ್' ಹೆಸರಿನ ಫೇಸ್ಬುಕ್ ಪೇಜ್ ನಲ್ಲಿ ಆರ್.ಡಿ. ಪಾಟೀಲ ಮಾತನಾಡಿರುವ ವಿಡಿಯೊವನ್ನು ಅಪ್ ಲೋಡ್ ಮಾಡಲಾಗಿದೆ.

'ಶಂಕರಗೌಡ ಪಾಟೀಲ ಅವರು ಪ್ರಕರಣ ಮುಂದುವರೆಸದಿರಲು ನನಗೆ ₹3 ಕೋಟಿ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಆದರೆ ನನ್ನಿಂದ ಅಷ್ಟು ಹಣ ಹೊಂದಿಸಲು ಸಾಧ್ಯವಾಗುವುದಿಲ್ಲ. ಬೇಕಿದ್ದರೆ ₹76 ಲಕ್ಷ ಹಣವನ್ನು ಕೊಡುತ್ತೇನೆ ಎಂದು ಹೇಳಿ ಬ್ಯಾಂಕ್ ಆಫ್ ಬರೋಡಾ ಶಾಖೆಯಿಂದ ಹಣ ಡ್ರಾ ಮಾಡಿಸಿಕೊಂಡು ನನ್ನ ಅಳಿಯ ಶ್ರೀಕಾಂತನ ಮೂಲಕ ಅವರಿಗೆ ತಲುಪಿಸಿದ್ದೆ. ನಾನು ಜಾಮೀನು ಪಡೆದು ಹೊರಬಂದ ಬಳಿಕವೂ ಶಂಕರಗೌಡ ಹಾಗೂ ಅವರ ಅಧೀನ ಸಿಬ್ಬಂದಿ ಮನೆಗೆ ಬಂದು ಉಳಿದ ಹಣ ನೀಡುವಂತೆ ಕಿರುಕುಳ ನೀಡಿದ್ದಾರೆ' ಎಂದು ಫೇಸ್ಬುಕ್ ವಿಡಿಯೊ ಹೇಳಿಕೆಯಲ್ಲಿ ತಿಳಿಸಿದ್ದಾನೆ.
ಆದರೆ, ಈ ಆರೋಪಗಳನ್ನು ಸಿಐಡಿ ಡಿವೈಎಸ್ಪಿ ಶಂಕರಗೌಡ ಪಾಟೀಲ ಅಲ್ಲಗಳೆದಿದ್ದಾರೆ. ಎಂಟು ನಿಮಿಷ ನಾಲ್ಕು ಸೆಕೆಂಡ್ ಅವಧಿಯ ವಿಡಿಯೋದಲ್ಲಿ ಆರ್.ಡಿ.ಪಾಟೀಲ ಮಾತು ಮಾತ್ರ ಸ್ಪಷ್ಟವಾಗಿ ಕೇಳಿಸುತ್ತದೆ. ಎದುರಿಗೆ ಮಾತನಾಡಿರುವ ವ್ಯಕ್ತಿಯ ಧ್ವನಿ ಅಸ್ಪಷ್ಟವಾಗಿದೆ. ಏನಾದರೂ ಮಾಡಿ, ನನಗೆ ಹೊರಗೆ ಹೋಗುವಂತೆ ಮಾಡಿ. ನನಗೆ ಪ್ರತಿ ದಿನವೂ ಮಹತ್ವದ ದಿನವಾಗಿದೆ. ನನಗೆ ಲಂಡನ್ ನಲ್ಲಿ 'ಭಕ್ತ'ರೊಬ್ಬರು ಇದ್ದಾರೆ. ಅವರಿಂದ ಹಣದ ವ್ಯವಸ್ಥೆ ಮಾಡುತ್ತೇನೆ. ಇನ್ನಿಬ್ಬರು ತನಿಖಾಧಿಕಾರಿಗಳಾದ ಪ್ರಕಾಶ ರಾಠೋಡ, ವೀರೇಂದ್ರ ಕುಮಾರ್ ಅವರಿಗೂ ಹಣ ನೀಡುತ್ತೇನೆ ಎಂದಿದ್ದಾನೆ.

ದೂರಿನ ಕುರಿತು ಪ್ರತಿಕ್ರಿಯೆ ನೀಡಿದ ಕಲಬುರಗಿ ಲೋಕಾಯುಕ್ತ ಎಸ್ಪಿ ಎ.ಆರ್.ಕರ್ನೂಲ್, ಆರ್.ಡಿ. ಪಾಟೀಲ ದೂರನ್ನು ಲೋಕಾಯುಕ್ತರಿಗೆ ಕಳುಹಿಸಿರುವ ಬಗ್ಗೆ ಮಾಹಿತಿ ಇಲ್ಲ. ಒಮ್ಮೊಮ್ಮೆ ಲೋಕಾಯುಕ್ತರೇ ಪ್ರಕರಣದ ತನಿಖೆ ನಡೆಸುತ್ತಾರೆ. ಅಗತ್ಯ ಬಿದ್ದರೆ ನಮಗೂ ಹಸ್ತಾಂತರಿಸುತ್ತಾರೆ ಎಂದರು.
ಆರ್.ಡಿ.ಪಾಟೀಲ ಸಿಐಡಿ ಅಧಿಕಾರಿಗಳ ಕೈಗೆ ಸಿಗದೇ ಪರಾರಿಯಾಗಿದ್ದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸೋಮವಾರ ನ್ಯಾಯಾಲಯಕ್ಕೆ ಶರಣಾಗಿದ್ದ. ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
RD Patil, considered the kingpin of the Karnataka police sub-inspector (PSI) recruitment scam, surrendered before a local court in Kalaburagi Monday. He had recently escaped arrest by purportedly pushing CID (Criminal Investigation Department) officers. RD Patil surrendered before the fifth JMFC court in Kalaburagi. The court sent him to judicial custody till February 6.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm