ಬ್ರೇಕಿಂಗ್ ನ್ಯೂಸ್
25-01-23 10:18 pm HK News Desk ಕರ್ನಾಟಕ
ಬೆಳಗಾವಿ, ಜ.25 : ರಾಜ್ಯದಲ್ಲಿ ಮತ್ತೆ ಸೀಡಿ ವಾರ್ ಶುರುವಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಮತ್ತೆ ಮಾಜಿ ಸಚಿವ, ಸಿಡಿ ಪ್ರಕರಣದ ಸಂತ್ರಸ್ತ ರಮೇಶ್ ಜಾರಕಿಹೊಳಿ ಹರಿಹಾಯ್ದಿದ್ದಾರೆ. ನನ್ನ ಖಾಸಗಿ ವಿಡಿಯೋ ಸೇರಿದಂತೆ ಇನ್ನೂ ಹತ್ತಾರು ಜನರ 110ಕ್ಕೂ ಹೆಚ್ಚು ಸಿ.ಡಿ.ಗಳನ್ನು ಡಿ.ಕೆ.ಶಿವಕುಮಾರ್ ಇಟ್ಟುಕೊಂಡಿದ್ದಾನೆ. ಹಾಗಾಗಿ, ಈ ಸಿ.ಡಿ ಪ್ರಕರಣವನ್ನು ಸಿಬಿಐಗೆ ಒಪ್ಪಿಸಲು ಅಮಿತ್ ಷಾ ಜೊತೆಗೆ ಮಾತಾಡುತ್ತೇನೆ ಎಂದು ಹೇಳಿದ್ದಾರೆ.
‘ನನ್ನ ಸಿ.ಡಿ ಪ್ರಕರಣದಲ್ಲಿ ಈ ‘ಮಹಾನ್ ನಾಯಕ’ ಇರುವುದು ಖಚಿತ. ಆರೋಪಿಯೊಬ್ಬನ ದೇವನಹಳ್ಳಿಯ ಮನೆಯಲ್ಲಿ ತನಿಖೆ ನಡೆದಾಗ ಹಲವು ಸಿ.ಡಿಗಳು ಸಿಕ್ಕಿವೆ. ನನ್ನ ಪ್ರಕರಣದ ತನಿಖೆ ನಡೆಸಿದ ಅಧಿಕಾರಿಯ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಸಿ.ಡಿ ಕೂಡ ಸಿಕ್ಕಿದೆ. ಇದೆಲ್ಲವನ್ನೂ ಮುಚ್ಚಿಡಲಾಗಿದೆ. ನನ್ನ ವೈಯಕ್ತಿಕ ಜೀವನ ಹಾಳಾದಂತೆ ಬೇರೊಬ್ಬರಿಗೆ ಆಗಬಾರದು ಎಂಬ ಕಾರಣಕ್ಕೆ ಇದನ್ನು ಸಿಬಿಐಗೆ ಒಪ್ಪಿಸಲು ಆಗ್ರಹಿಸುತ್ತೇನೆ ಎಂದಿದ್ದಾರೆ.

ಆಮಿಷ ಒಡ್ಡಿಲ್ಲ, ಸಹಾಯ ಕೊಡ್ತೇನೆಂದಿದ್ದು..
ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ನಾನು ₹10 ಕೋಟಿ ಖರ್ಚು ಮಾಡುತ್ತೇನೆ, ಮತದಾರರಿಗೆ ತಲಾ ₹6,000 ಕೊಡುತ್ತೇನೆ ಎಂದು ಆಮಿಷ ಒಡ್ಡಿದ್ದಾಗಿ ಕಾಂಗ್ರೆಸ್ಸಿಗರು ಆರೋಪಿಸಿದ್ದಾರೆ. ನಾನು ಯಾವುದೇ ಆಮಿಷ ಒಡ್ಡಿಲ್ಲ. ನಮ್ಮ ಯಾವ ಅಭ್ಯರ್ಥಿಯ ಹೆಸರೂ ಹೇಳಿಲ್ಲ. ಈಗ ನೀತಿ ಸಂಹಿತೆ ಕೂಡ ಇಲ್ಲ. ಮಾತಿನ ಆವೇಶದಲ್ಲಿ ಖರ್ಚು ಮಾಡುತ್ತೇನೆ ಎಂದಿರಬಹುದು. ಈ ಕ್ಷೇತ್ರದ ಶಾಲೆ ಸುಧಾರಣೆ, ರೈತರು, ಬಡವರಿಗೆ ಆರೋಗ್ಯ ಸೌಕರ್ಯ ನೀಡುವ ಉದ್ದೇಶದಿಂದ ಹೇಳಿದ್ದೇನೆ ಹೊರತು ಲಂಚ ಕೊಡುತ್ತೇನೆಂದಲ್ಲ ಎಂದು ಸಮರ್ಥಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಡಿಕೆಶಿ, ಆತನಿಗೆ ಪ್ಯಾಂಟ್ ಬಿಚ್ಚು ಅಂತ ನಾನು ಹೇಳಿದ್ನಾ.. ಹತ್ತು ಸಾವಿರ ಕೊಡುತ್ತೇನೆ ಎನ್ನಲು ನಾನು ಹೇಳಿದ್ದಾ.. ಎಲ್ಲಿ ಬೇಕಾದರು ಹೋಗಲಿ, ಏನು ಸಿಬಿಐ ತನಿಖೆನಾದ್ರು ಮಾಡಲಿ ಎಂದು ಸವಾಲು ಹಾಕಿದ್ದಾರೆ.
DK Shivakumar has more than 110 CDS says Ramesh Jarkiholi.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm