ಬ್ರೇಕಿಂಗ್ ನ್ಯೂಸ್
25-01-23 10:18 pm HK News Desk ಕರ್ನಾಟಕ
ಬೆಳಗಾವಿ, ಜ.25 : ರಾಜ್ಯದಲ್ಲಿ ಮತ್ತೆ ಸೀಡಿ ವಾರ್ ಶುರುವಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಮತ್ತೆ ಮಾಜಿ ಸಚಿವ, ಸಿಡಿ ಪ್ರಕರಣದ ಸಂತ್ರಸ್ತ ರಮೇಶ್ ಜಾರಕಿಹೊಳಿ ಹರಿಹಾಯ್ದಿದ್ದಾರೆ. ನನ್ನ ಖಾಸಗಿ ವಿಡಿಯೋ ಸೇರಿದಂತೆ ಇನ್ನೂ ಹತ್ತಾರು ಜನರ 110ಕ್ಕೂ ಹೆಚ್ಚು ಸಿ.ಡಿ.ಗಳನ್ನು ಡಿ.ಕೆ.ಶಿವಕುಮಾರ್ ಇಟ್ಟುಕೊಂಡಿದ್ದಾನೆ. ಹಾಗಾಗಿ, ಈ ಸಿ.ಡಿ ಪ್ರಕರಣವನ್ನು ಸಿಬಿಐಗೆ ಒಪ್ಪಿಸಲು ಅಮಿತ್ ಷಾ ಜೊತೆಗೆ ಮಾತಾಡುತ್ತೇನೆ ಎಂದು ಹೇಳಿದ್ದಾರೆ.
‘ನನ್ನ ಸಿ.ಡಿ ಪ್ರಕರಣದಲ್ಲಿ ಈ ‘ಮಹಾನ್ ನಾಯಕ’ ಇರುವುದು ಖಚಿತ. ಆರೋಪಿಯೊಬ್ಬನ ದೇವನಹಳ್ಳಿಯ ಮನೆಯಲ್ಲಿ ತನಿಖೆ ನಡೆದಾಗ ಹಲವು ಸಿ.ಡಿಗಳು ಸಿಕ್ಕಿವೆ. ನನ್ನ ಪ್ರಕರಣದ ತನಿಖೆ ನಡೆಸಿದ ಅಧಿಕಾರಿಯ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಸಿ.ಡಿ ಕೂಡ ಸಿಕ್ಕಿದೆ. ಇದೆಲ್ಲವನ್ನೂ ಮುಚ್ಚಿಡಲಾಗಿದೆ. ನನ್ನ ವೈಯಕ್ತಿಕ ಜೀವನ ಹಾಳಾದಂತೆ ಬೇರೊಬ್ಬರಿಗೆ ಆಗಬಾರದು ಎಂಬ ಕಾರಣಕ್ಕೆ ಇದನ್ನು ಸಿಬಿಐಗೆ ಒಪ್ಪಿಸಲು ಆಗ್ರಹಿಸುತ್ತೇನೆ ಎಂದಿದ್ದಾರೆ.

ಆಮಿಷ ಒಡ್ಡಿಲ್ಲ, ಸಹಾಯ ಕೊಡ್ತೇನೆಂದಿದ್ದು..
ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ನಾನು ₹10 ಕೋಟಿ ಖರ್ಚು ಮಾಡುತ್ತೇನೆ, ಮತದಾರರಿಗೆ ತಲಾ ₹6,000 ಕೊಡುತ್ತೇನೆ ಎಂದು ಆಮಿಷ ಒಡ್ಡಿದ್ದಾಗಿ ಕಾಂಗ್ರೆಸ್ಸಿಗರು ಆರೋಪಿಸಿದ್ದಾರೆ. ನಾನು ಯಾವುದೇ ಆಮಿಷ ಒಡ್ಡಿಲ್ಲ. ನಮ್ಮ ಯಾವ ಅಭ್ಯರ್ಥಿಯ ಹೆಸರೂ ಹೇಳಿಲ್ಲ. ಈಗ ನೀತಿ ಸಂಹಿತೆ ಕೂಡ ಇಲ್ಲ. ಮಾತಿನ ಆವೇಶದಲ್ಲಿ ಖರ್ಚು ಮಾಡುತ್ತೇನೆ ಎಂದಿರಬಹುದು. ಈ ಕ್ಷೇತ್ರದ ಶಾಲೆ ಸುಧಾರಣೆ, ರೈತರು, ಬಡವರಿಗೆ ಆರೋಗ್ಯ ಸೌಕರ್ಯ ನೀಡುವ ಉದ್ದೇಶದಿಂದ ಹೇಳಿದ್ದೇನೆ ಹೊರತು ಲಂಚ ಕೊಡುತ್ತೇನೆಂದಲ್ಲ ಎಂದು ಸಮರ್ಥಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಡಿಕೆಶಿ, ಆತನಿಗೆ ಪ್ಯಾಂಟ್ ಬಿಚ್ಚು ಅಂತ ನಾನು ಹೇಳಿದ್ನಾ.. ಹತ್ತು ಸಾವಿರ ಕೊಡುತ್ತೇನೆ ಎನ್ನಲು ನಾನು ಹೇಳಿದ್ದಾ.. ಎಲ್ಲಿ ಬೇಕಾದರು ಹೋಗಲಿ, ಏನು ಸಿಬಿಐ ತನಿಖೆನಾದ್ರು ಮಾಡಲಿ ಎಂದು ಸವಾಲು ಹಾಕಿದ್ದಾರೆ.
DK Shivakumar has more than 110 CDS says Ramesh Jarkiholi.
19-05-26 11:34 pm
HK News Desk
ಮೋರ್ಬಿ ಘಟನೆ ಗುಜರಾತ್ ಮಾದರಿಯನ್ನು ಟೊಳ್ಳಾಗಿಸಿದೆ,...
19-05-26 09:09 pm
ದಕ್ಷಿಣ ಭಾರತದಲ್ಲೇ ಮೊದಲ ಪ್ರಯೋಗ ; ಚಿಕ್ಕಮಗಳೂರಿನಲ್...
17-05-26 08:55 pm
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
21-05-26 02:49 pm
HK News Staffer
ಗೊಂದಲ ನಡುವೆಯೇ ಖಾತೆ ಹಂಚಿಕೆ ಮಾಡಿದ ಕೇರಳ ಸಿಎಂ ಸತೀ...
20-05-26 11:23 pm
ಆನ್ಲೈನ್ ಔಷಧ ಮಾರಾಟ ವಿರುದ್ಧ ದೇಶವ್ಯಾಪಿ ಪ್ರತಿಭಟ...
20-05-26 10:33 am
ಆನೆಗಳ ಕಾದಾಟ; ದುಬಾರೆ ಕ್ಯಾಂಪ್ನಲ್ಲಿ ಗಾಯಗೊಂಡಿದ್ದ...
19-05-26 04:27 pm
ಮತ್ತೆ ಬೆಲೆ ಏರಿಕೆ ಶಾಕ್! ಒಂದೇ ವಾರದಲ್ಲಿ 2ನೇ ಬಾರಿ...
19-05-26 01:06 pm
21-05-26 05:52 pm
HK News Staffer
ಮೇ 25ರವರೆಗೆ ಮೀನುಗಾರರಿಗೆ ಸಮುದ್ರ ಪ್ರವೇಶ ನಿಷೇಧ ಎ...
20-05-26 06:51 pm
ಬೆಳ್ತಂಗಡಿ ; ನೇತ್ರಾವತಿ ನದಿಯಲ್ಲಿ ಸ್ನಾನಕ್ಕಿಳಿದು...
19-05-26 10:47 pm
ಬಾವಿಯಲ್ಲಿ ನೀರಲ್ಲ , ಡೀಸೆಲ್ ! ಮಂಗಳೂರಿನಲ್ಲಿ ಆತಂಕ...
19-05-26 05:57 pm
ಒಂದು ರೂ.ಗೆ ಒಂದು ಶರ್ಟ್ ! ಆಫರ್ ಕೇಳಿ ಮುಗಿಬಿದ್ದ ಜ...
19-05-26 10:44 am
21-05-26 07:33 pm
HK News Staffer
ಧರ್ಮಸ್ಥಳದ ಬುರುಡೆ ರಹಸ್ಯ ಪ್ರಕರಣ ಮತ್ತೆ ಚುರುಕು ;...
21-05-26 04:34 pm
ಎನ್ಐಎಸ್ಎಂ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ವಿದ್ಯಾ...
21-05-26 01:34 pm
ಬೆಳ್ತಂಗಡಿ; ಜಲಪಾತಕ್ಕೆ ತೆರಳಿದ್ದ ಕಾಲೇಜು ಯುವತಿಯರಿ...
21-05-26 10:20 am
ಭಾರತದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಬಂದ ಸ್ಲೀಪರ್ ಸೆ...
20-05-26 03:08 pm