ಬ್ರೇಕಿಂಗ್ ನ್ಯೂಸ್
25-01-23 10:18 pm HK News Desk ಕರ್ನಾಟಕ
ಬೆಳಗಾವಿ, ಜ.25 : ರಾಜ್ಯದಲ್ಲಿ ಮತ್ತೆ ಸೀಡಿ ವಾರ್ ಶುರುವಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಮತ್ತೆ ಮಾಜಿ ಸಚಿವ, ಸಿಡಿ ಪ್ರಕರಣದ ಸಂತ್ರಸ್ತ ರಮೇಶ್ ಜಾರಕಿಹೊಳಿ ಹರಿಹಾಯ್ದಿದ್ದಾರೆ. ನನ್ನ ಖಾಸಗಿ ವಿಡಿಯೋ ಸೇರಿದಂತೆ ಇನ್ನೂ ಹತ್ತಾರು ಜನರ 110ಕ್ಕೂ ಹೆಚ್ಚು ಸಿ.ಡಿ.ಗಳನ್ನು ಡಿ.ಕೆ.ಶಿವಕುಮಾರ್ ಇಟ್ಟುಕೊಂಡಿದ್ದಾನೆ. ಹಾಗಾಗಿ, ಈ ಸಿ.ಡಿ ಪ್ರಕರಣವನ್ನು ಸಿಬಿಐಗೆ ಒಪ್ಪಿಸಲು ಅಮಿತ್ ಷಾ ಜೊತೆಗೆ ಮಾತಾಡುತ್ತೇನೆ ಎಂದು ಹೇಳಿದ್ದಾರೆ.
‘ನನ್ನ ಸಿ.ಡಿ ಪ್ರಕರಣದಲ್ಲಿ ಈ ‘ಮಹಾನ್ ನಾಯಕ’ ಇರುವುದು ಖಚಿತ. ಆರೋಪಿಯೊಬ್ಬನ ದೇವನಹಳ್ಳಿಯ ಮನೆಯಲ್ಲಿ ತನಿಖೆ ನಡೆದಾಗ ಹಲವು ಸಿ.ಡಿಗಳು ಸಿಕ್ಕಿವೆ. ನನ್ನ ಪ್ರಕರಣದ ತನಿಖೆ ನಡೆಸಿದ ಅಧಿಕಾರಿಯ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಸಿ.ಡಿ ಕೂಡ ಸಿಕ್ಕಿದೆ. ಇದೆಲ್ಲವನ್ನೂ ಮುಚ್ಚಿಡಲಾಗಿದೆ. ನನ್ನ ವೈಯಕ್ತಿಕ ಜೀವನ ಹಾಳಾದಂತೆ ಬೇರೊಬ್ಬರಿಗೆ ಆಗಬಾರದು ಎಂಬ ಕಾರಣಕ್ಕೆ ಇದನ್ನು ಸಿಬಿಐಗೆ ಒಪ್ಪಿಸಲು ಆಗ್ರಹಿಸುತ್ತೇನೆ ಎಂದಿದ್ದಾರೆ.

ಆಮಿಷ ಒಡ್ಡಿಲ್ಲ, ಸಹಾಯ ಕೊಡ್ತೇನೆಂದಿದ್ದು..
ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ನಾನು ₹10 ಕೋಟಿ ಖರ್ಚು ಮಾಡುತ್ತೇನೆ, ಮತದಾರರಿಗೆ ತಲಾ ₹6,000 ಕೊಡುತ್ತೇನೆ ಎಂದು ಆಮಿಷ ಒಡ್ಡಿದ್ದಾಗಿ ಕಾಂಗ್ರೆಸ್ಸಿಗರು ಆರೋಪಿಸಿದ್ದಾರೆ. ನಾನು ಯಾವುದೇ ಆಮಿಷ ಒಡ್ಡಿಲ್ಲ. ನಮ್ಮ ಯಾವ ಅಭ್ಯರ್ಥಿಯ ಹೆಸರೂ ಹೇಳಿಲ್ಲ. ಈಗ ನೀತಿ ಸಂಹಿತೆ ಕೂಡ ಇಲ್ಲ. ಮಾತಿನ ಆವೇಶದಲ್ಲಿ ಖರ್ಚು ಮಾಡುತ್ತೇನೆ ಎಂದಿರಬಹುದು. ಈ ಕ್ಷೇತ್ರದ ಶಾಲೆ ಸುಧಾರಣೆ, ರೈತರು, ಬಡವರಿಗೆ ಆರೋಗ್ಯ ಸೌಕರ್ಯ ನೀಡುವ ಉದ್ದೇಶದಿಂದ ಹೇಳಿದ್ದೇನೆ ಹೊರತು ಲಂಚ ಕೊಡುತ್ತೇನೆಂದಲ್ಲ ಎಂದು ಸಮರ್ಥಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಡಿಕೆಶಿ, ಆತನಿಗೆ ಪ್ಯಾಂಟ್ ಬಿಚ್ಚು ಅಂತ ನಾನು ಹೇಳಿದ್ನಾ.. ಹತ್ತು ಸಾವಿರ ಕೊಡುತ್ತೇನೆ ಎನ್ನಲು ನಾನು ಹೇಳಿದ್ದಾ.. ಎಲ್ಲಿ ಬೇಕಾದರು ಹೋಗಲಿ, ಏನು ಸಿಬಿಐ ತನಿಖೆನಾದ್ರು ಮಾಡಲಿ ಎಂದು ಸವಾಲು ಹಾಕಿದ್ದಾರೆ.
DK Shivakumar has more than 110 CDS says Ramesh Jarkiholi.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 11:47 am
HK News Staffer
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm