ಬ್ರೇಕಿಂಗ್ ನ್ಯೂಸ್
25-01-23 10:18 pm HK News Desk ಕರ್ನಾಟಕ
ಬೆಳಗಾವಿ, ಜ.25 : ರಾಜ್ಯದಲ್ಲಿ ಮತ್ತೆ ಸೀಡಿ ವಾರ್ ಶುರುವಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಮತ್ತೆ ಮಾಜಿ ಸಚಿವ, ಸಿಡಿ ಪ್ರಕರಣದ ಸಂತ್ರಸ್ತ ರಮೇಶ್ ಜಾರಕಿಹೊಳಿ ಹರಿಹಾಯ್ದಿದ್ದಾರೆ. ನನ್ನ ಖಾಸಗಿ ವಿಡಿಯೋ ಸೇರಿದಂತೆ ಇನ್ನೂ ಹತ್ತಾರು ಜನರ 110ಕ್ಕೂ ಹೆಚ್ಚು ಸಿ.ಡಿ.ಗಳನ್ನು ಡಿ.ಕೆ.ಶಿವಕುಮಾರ್ ಇಟ್ಟುಕೊಂಡಿದ್ದಾನೆ. ಹಾಗಾಗಿ, ಈ ಸಿ.ಡಿ ಪ್ರಕರಣವನ್ನು ಸಿಬಿಐಗೆ ಒಪ್ಪಿಸಲು ಅಮಿತ್ ಷಾ ಜೊತೆಗೆ ಮಾತಾಡುತ್ತೇನೆ ಎಂದು ಹೇಳಿದ್ದಾರೆ.
‘ನನ್ನ ಸಿ.ಡಿ ಪ್ರಕರಣದಲ್ಲಿ ಈ ‘ಮಹಾನ್ ನಾಯಕ’ ಇರುವುದು ಖಚಿತ. ಆರೋಪಿಯೊಬ್ಬನ ದೇವನಹಳ್ಳಿಯ ಮನೆಯಲ್ಲಿ ತನಿಖೆ ನಡೆದಾಗ ಹಲವು ಸಿ.ಡಿಗಳು ಸಿಕ್ಕಿವೆ. ನನ್ನ ಪ್ರಕರಣದ ತನಿಖೆ ನಡೆಸಿದ ಅಧಿಕಾರಿಯ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಸಿ.ಡಿ ಕೂಡ ಸಿಕ್ಕಿದೆ. ಇದೆಲ್ಲವನ್ನೂ ಮುಚ್ಚಿಡಲಾಗಿದೆ. ನನ್ನ ವೈಯಕ್ತಿಕ ಜೀವನ ಹಾಳಾದಂತೆ ಬೇರೊಬ್ಬರಿಗೆ ಆಗಬಾರದು ಎಂಬ ಕಾರಣಕ್ಕೆ ಇದನ್ನು ಸಿಬಿಐಗೆ ಒಪ್ಪಿಸಲು ಆಗ್ರಹಿಸುತ್ತೇನೆ ಎಂದಿದ್ದಾರೆ.

ಆಮಿಷ ಒಡ್ಡಿಲ್ಲ, ಸಹಾಯ ಕೊಡ್ತೇನೆಂದಿದ್ದು..
ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ನಾನು ₹10 ಕೋಟಿ ಖರ್ಚು ಮಾಡುತ್ತೇನೆ, ಮತದಾರರಿಗೆ ತಲಾ ₹6,000 ಕೊಡುತ್ತೇನೆ ಎಂದು ಆಮಿಷ ಒಡ್ಡಿದ್ದಾಗಿ ಕಾಂಗ್ರೆಸ್ಸಿಗರು ಆರೋಪಿಸಿದ್ದಾರೆ. ನಾನು ಯಾವುದೇ ಆಮಿಷ ಒಡ್ಡಿಲ್ಲ. ನಮ್ಮ ಯಾವ ಅಭ್ಯರ್ಥಿಯ ಹೆಸರೂ ಹೇಳಿಲ್ಲ. ಈಗ ನೀತಿ ಸಂಹಿತೆ ಕೂಡ ಇಲ್ಲ. ಮಾತಿನ ಆವೇಶದಲ್ಲಿ ಖರ್ಚು ಮಾಡುತ್ತೇನೆ ಎಂದಿರಬಹುದು. ಈ ಕ್ಷೇತ್ರದ ಶಾಲೆ ಸುಧಾರಣೆ, ರೈತರು, ಬಡವರಿಗೆ ಆರೋಗ್ಯ ಸೌಕರ್ಯ ನೀಡುವ ಉದ್ದೇಶದಿಂದ ಹೇಳಿದ್ದೇನೆ ಹೊರತು ಲಂಚ ಕೊಡುತ್ತೇನೆಂದಲ್ಲ ಎಂದು ಸಮರ್ಥಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಡಿಕೆಶಿ, ಆತನಿಗೆ ಪ್ಯಾಂಟ್ ಬಿಚ್ಚು ಅಂತ ನಾನು ಹೇಳಿದ್ನಾ.. ಹತ್ತು ಸಾವಿರ ಕೊಡುತ್ತೇನೆ ಎನ್ನಲು ನಾನು ಹೇಳಿದ್ದಾ.. ಎಲ್ಲಿ ಬೇಕಾದರು ಹೋಗಲಿ, ಏನು ಸಿಬಿಐ ತನಿಖೆನಾದ್ರು ಮಾಡಲಿ ಎಂದು ಸವಾಲು ಹಾಕಿದ್ದಾರೆ.
DK Shivakumar has more than 110 CDS says Ramesh Jarkiholi.
13-03-26 12:09 pm
HK News Staffer
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
13-03-26 11:24 am
HK News Staffer
ಅಮೆರಿಕದ ಪಶ್ಚಿಮ ಕರಾವಳಿಗೆ ಇರಾನ್ ದಾಳಿ ಸಾಧ್ಯತೆ ;...
12-03-26 09:03 pm
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
13-03-26 01:51 pm
HK News Staffer
ಶಿವಮೊಗ್ಗದಲ್ಲಿ ಅಪಘಾತ ; ಕಾರ್ಕಳ ಮೂಲದ ಮೆಡಿಕಲ್ ವಿದ...
13-03-26 11:46 am
ಸುಳ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯ...
12-03-26 10:47 pm
ಸೈಬರ್ ಜಾಲದ ಮ್ಯೂಲ್ ಅಕೌಂಟ್ ವಂಚನೆ ; ಚೀನಾ ಲಿಂಕ್ ಹ...
12-03-26 02:44 pm
Cyber Fraud Awareness, Mangalore: ಸೈಬರ್ ವಂಚನೆ...
12-03-26 08:33 am
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm