ಬ್ರೇಕಿಂಗ್ ನ್ಯೂಸ್
25-01-23 10:18 pm HK News Desk ಕರ್ನಾಟಕ
ಬೆಳಗಾವಿ, ಜ.25 : ರಾಜ್ಯದಲ್ಲಿ ಮತ್ತೆ ಸೀಡಿ ವಾರ್ ಶುರುವಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಮತ್ತೆ ಮಾಜಿ ಸಚಿವ, ಸಿಡಿ ಪ್ರಕರಣದ ಸಂತ್ರಸ್ತ ರಮೇಶ್ ಜಾರಕಿಹೊಳಿ ಹರಿಹಾಯ್ದಿದ್ದಾರೆ. ನನ್ನ ಖಾಸಗಿ ವಿಡಿಯೋ ಸೇರಿದಂತೆ ಇನ್ನೂ ಹತ್ತಾರು ಜನರ 110ಕ್ಕೂ ಹೆಚ್ಚು ಸಿ.ಡಿ.ಗಳನ್ನು ಡಿ.ಕೆ.ಶಿವಕುಮಾರ್ ಇಟ್ಟುಕೊಂಡಿದ್ದಾನೆ. ಹಾಗಾಗಿ, ಈ ಸಿ.ಡಿ ಪ್ರಕರಣವನ್ನು ಸಿಬಿಐಗೆ ಒಪ್ಪಿಸಲು ಅಮಿತ್ ಷಾ ಜೊತೆಗೆ ಮಾತಾಡುತ್ತೇನೆ ಎಂದು ಹೇಳಿದ್ದಾರೆ.
‘ನನ್ನ ಸಿ.ಡಿ ಪ್ರಕರಣದಲ್ಲಿ ಈ ‘ಮಹಾನ್ ನಾಯಕ’ ಇರುವುದು ಖಚಿತ. ಆರೋಪಿಯೊಬ್ಬನ ದೇವನಹಳ್ಳಿಯ ಮನೆಯಲ್ಲಿ ತನಿಖೆ ನಡೆದಾಗ ಹಲವು ಸಿ.ಡಿಗಳು ಸಿಕ್ಕಿವೆ. ನನ್ನ ಪ್ರಕರಣದ ತನಿಖೆ ನಡೆಸಿದ ಅಧಿಕಾರಿಯ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಸಿ.ಡಿ ಕೂಡ ಸಿಕ್ಕಿದೆ. ಇದೆಲ್ಲವನ್ನೂ ಮುಚ್ಚಿಡಲಾಗಿದೆ. ನನ್ನ ವೈಯಕ್ತಿಕ ಜೀವನ ಹಾಳಾದಂತೆ ಬೇರೊಬ್ಬರಿಗೆ ಆಗಬಾರದು ಎಂಬ ಕಾರಣಕ್ಕೆ ಇದನ್ನು ಸಿಬಿಐಗೆ ಒಪ್ಪಿಸಲು ಆಗ್ರಹಿಸುತ್ತೇನೆ ಎಂದಿದ್ದಾರೆ.

ಆಮಿಷ ಒಡ್ಡಿಲ್ಲ, ಸಹಾಯ ಕೊಡ್ತೇನೆಂದಿದ್ದು..
ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ನಾನು ₹10 ಕೋಟಿ ಖರ್ಚು ಮಾಡುತ್ತೇನೆ, ಮತದಾರರಿಗೆ ತಲಾ ₹6,000 ಕೊಡುತ್ತೇನೆ ಎಂದು ಆಮಿಷ ಒಡ್ಡಿದ್ದಾಗಿ ಕಾಂಗ್ರೆಸ್ಸಿಗರು ಆರೋಪಿಸಿದ್ದಾರೆ. ನಾನು ಯಾವುದೇ ಆಮಿಷ ಒಡ್ಡಿಲ್ಲ. ನಮ್ಮ ಯಾವ ಅಭ್ಯರ್ಥಿಯ ಹೆಸರೂ ಹೇಳಿಲ್ಲ. ಈಗ ನೀತಿ ಸಂಹಿತೆ ಕೂಡ ಇಲ್ಲ. ಮಾತಿನ ಆವೇಶದಲ್ಲಿ ಖರ್ಚು ಮಾಡುತ್ತೇನೆ ಎಂದಿರಬಹುದು. ಈ ಕ್ಷೇತ್ರದ ಶಾಲೆ ಸುಧಾರಣೆ, ರೈತರು, ಬಡವರಿಗೆ ಆರೋಗ್ಯ ಸೌಕರ್ಯ ನೀಡುವ ಉದ್ದೇಶದಿಂದ ಹೇಳಿದ್ದೇನೆ ಹೊರತು ಲಂಚ ಕೊಡುತ್ತೇನೆಂದಲ್ಲ ಎಂದು ಸಮರ್ಥಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಡಿಕೆಶಿ, ಆತನಿಗೆ ಪ್ಯಾಂಟ್ ಬಿಚ್ಚು ಅಂತ ನಾನು ಹೇಳಿದ್ನಾ.. ಹತ್ತು ಸಾವಿರ ಕೊಡುತ್ತೇನೆ ಎನ್ನಲು ನಾನು ಹೇಳಿದ್ದಾ.. ಎಲ್ಲಿ ಬೇಕಾದರು ಹೋಗಲಿ, ಏನು ಸಿಬಿಐ ತನಿಖೆನಾದ್ರು ಮಾಡಲಿ ಎಂದು ಸವಾಲು ಹಾಕಿದ್ದಾರೆ.
DK Shivakumar has more than 110 CDS says Ramesh Jarkiholi.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 04:31 pm
HK News Staffer
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm