ಬ್ರೇಕಿಂಗ್ ನ್ಯೂಸ್
28-01-23 09:14 pm HK News Desk ಕರ್ನಾಟಕ
ಮಂಡ್ಯ, ಜ.28 : ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಲ್ಲಿ ಪ್ರತಿ ಲೀಟರ್ ಹಾಲಿಗೆ 1 ರೂಪಾಯಿ ಪ್ರೋತ್ಸಾಹ ಧನ ಹೆಚ್ಚಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ಮಂಡ್ಯ ವಿಶ್ವವಿದ್ಯಾಲಯ ಆವರಣದಲ್ಲಿ ನಡೆದ ಪ್ರಜಾಧ್ವನಿ ಸಮಾವೇಶದಲ್ಲಿ ಮಾತನಾಡಿದ ಅವರು, ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದರು. ಹಾಲಿನ ದರವನ್ನು ಲೀಟರ್ ಗೆ 5 ರೂಪಾಯಿ ಹೆಚ್ಚಿಸುವ ಭರವಸೆಯನ್ನು ಕಳೆದ ಬಾರಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಈಡೇರಿಸಿರಲಿಲ್ಲ. ಆದರೆ ನಾವು ಅಧಿಕಾರಕ್ಕೆ ಬಂದಿದ್ದೇ ಆದರೆ, ಮಂಡ್ಯದಲ್ಲಿ ಹೈನೋದ್ಯಮ ಪ್ರೋತ್ಸಾಹಿಸಿ ರೈತರಿಗೆ ನೆರವಾಗುವ ದೃಷ್ಟಿಯಿಂದ ಈಗಿರುವ 5 ರೂಪಾಯಿ ಪ್ರೋತ್ಸಾಹದೊಂದಿಗೆ ಹೆಚ್ಚುವರಿ 1 ರೂಪಾಯಿ ಸೇರಿಸಿ 6 ರೂಪಾಯಿಗಳ ಪ್ರೋತ್ಸಾಹ ಧನ ನೀಡಲಾಗುವುದು. ಇದರಿಂದ ಹೈನುಗಾರರಿಗೆ ಸಾಕಷ್ಟು ಅನುಕೂಲವಾಗಲಿದೆ ಎಂದು ಹೇಳಿದರು.

ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಸಿದ್ದರಾಮಯ್ಯ, ಮೈಶುಗರ್ ಕಾರ್ಖಾನೆಯನ್ನು ವಿಲೇವಾರಿ ಮಾಡಲು ಬಿಜೆಪಿ ಸರ್ಕಾರ ಸಿದ್ಧವಾಗಿತ್ತು. ಕಾರ್ಖಾನೆಯನ್ನು ಸ್ವಾಧೀನಪಡಿಸಿಕೊಳ್ಳಲು ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಉತ್ಸುಕರಾಗಿದ್ದರು. ಆದರೆ, ಸಕ್ಕರೆ ಕಾರ್ಖಾನೆಗಳನ್ನು ಖಾಸಗಿಯವರಿಗೆ ಮಾರಾಟ ಮಾಡುವುದನ್ನು ನಾವು ತೀವ್ರವಾಗಿ ವಿರೋಧಿಸಿದ್ದರಿಂದ ಬಿಜೆಪಿ ಈ ಪ್ರಸ್ತಾಪವನ್ನು ಕೈಬಿಟ್ಟಿತ್ತು ಎಂದು ಹೇಳಿದರು.

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮಾತನಾಡಿ, ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿ ಯೋಜನೆಗೆ ಮೊದಲು ಅಡಿಗಲ್ಲು ಹಾಕಿದ್ದು ನಾವು. ಆಸ್ಕರ್ ಫೆರ್ನಾಂಡಿಸ್ ಹೆದ್ದಾರಿ ಸಚಿವರಾಗಿದ್ದ ಸಮಯದಲ್ಲಿ ಸಿದ್ದರಾಮಯ್ಯ ಮತ್ತು ನಾವು ಹೋಗಿ 14 ಸಾವಿರ ಕೋಟಿ ರೂಪಾಯಿ ಯೋಜನೆಗೆ ಮಂಜೂರಾತಿ ಪಡೆದು ಬಂದಿದ್ದೆವು. ಅದನ್ನು ಈಗ ಬಿಜೆಪಿಯವರು ಉದ್ಘಾಟನೆ ಮಾಡುವುದಕ್ಕೆ ರೆಡಿಯಾಗಿದ್ದಾರೆ ಎಂದು ಕುಟುಕಿದರು.
Opposition leader Siddaramaiah said that the incentive for the milk will be increased from Rs 5 to Rs 6 per litre if Congress comes to power after the assembly election. Speaking at a public convention organised as part of Praja Dhwani Yatre of Congress, Siddaramaiah said, "We were giving Rs 5 per litre of milk as an incentive during our tenure. Later, H D Kumaraswamy, who was the chief minister of the Congress-JD(S) coalition government, wanted to increase it by Re 1.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
16-02-26 12:53 pm
HK Staffer
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
16-02-26 11:13 pm
Mangaluru Staffer
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Manjunath Bhandary MLC: ಕೆಪಿಸಿಸಿ ಕಾರ್ಯಾಧ್ಯಕ್ಷ...
16-02-26 01:48 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
16-02-26 04:01 pm
HK News Desk
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm