ಬ್ರೇಕಿಂಗ್ ನ್ಯೂಸ್
28-01-23 09:14 pm HK News Desk ಕರ್ನಾಟಕ
ಮಂಡ್ಯ, ಜ.28 : ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಲ್ಲಿ ಪ್ರತಿ ಲೀಟರ್ ಹಾಲಿಗೆ 1 ರೂಪಾಯಿ ಪ್ರೋತ್ಸಾಹ ಧನ ಹೆಚ್ಚಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ಮಂಡ್ಯ ವಿಶ್ವವಿದ್ಯಾಲಯ ಆವರಣದಲ್ಲಿ ನಡೆದ ಪ್ರಜಾಧ್ವನಿ ಸಮಾವೇಶದಲ್ಲಿ ಮಾತನಾಡಿದ ಅವರು, ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದರು. ಹಾಲಿನ ದರವನ್ನು ಲೀಟರ್ ಗೆ 5 ರೂಪಾಯಿ ಹೆಚ್ಚಿಸುವ ಭರವಸೆಯನ್ನು ಕಳೆದ ಬಾರಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಈಡೇರಿಸಿರಲಿಲ್ಲ. ಆದರೆ ನಾವು ಅಧಿಕಾರಕ್ಕೆ ಬಂದಿದ್ದೇ ಆದರೆ, ಮಂಡ್ಯದಲ್ಲಿ ಹೈನೋದ್ಯಮ ಪ್ರೋತ್ಸಾಹಿಸಿ ರೈತರಿಗೆ ನೆರವಾಗುವ ದೃಷ್ಟಿಯಿಂದ ಈಗಿರುವ 5 ರೂಪಾಯಿ ಪ್ರೋತ್ಸಾಹದೊಂದಿಗೆ ಹೆಚ್ಚುವರಿ 1 ರೂಪಾಯಿ ಸೇರಿಸಿ 6 ರೂಪಾಯಿಗಳ ಪ್ರೋತ್ಸಾಹ ಧನ ನೀಡಲಾಗುವುದು. ಇದರಿಂದ ಹೈನುಗಾರರಿಗೆ ಸಾಕಷ್ಟು ಅನುಕೂಲವಾಗಲಿದೆ ಎಂದು ಹೇಳಿದರು.
ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಸಿದ್ದರಾಮಯ್ಯ, ಮೈಶುಗರ್ ಕಾರ್ಖಾನೆಯನ್ನು ವಿಲೇವಾರಿ ಮಾಡಲು ಬಿಜೆಪಿ ಸರ್ಕಾರ ಸಿದ್ಧವಾಗಿತ್ತು. ಕಾರ್ಖಾನೆಯನ್ನು ಸ್ವಾಧೀನಪಡಿಸಿಕೊಳ್ಳಲು ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಉತ್ಸುಕರಾಗಿದ್ದರು. ಆದರೆ, ಸಕ್ಕರೆ ಕಾರ್ಖಾನೆಗಳನ್ನು ಖಾಸಗಿಯವರಿಗೆ ಮಾರಾಟ ಮಾಡುವುದನ್ನು ನಾವು ತೀವ್ರವಾಗಿ ವಿರೋಧಿಸಿದ್ದರಿಂದ ಬಿಜೆಪಿ ಈ ಪ್ರಸ್ತಾಪವನ್ನು ಕೈಬಿಟ್ಟಿತ್ತು ಎಂದು ಹೇಳಿದರು.
ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮಾತನಾಡಿ, ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿ ಯೋಜನೆಗೆ ಮೊದಲು ಅಡಿಗಲ್ಲು ಹಾಕಿದ್ದು ನಾವು. ಆಸ್ಕರ್ ಫೆರ್ನಾಂಡಿಸ್ ಹೆದ್ದಾರಿ ಸಚಿವರಾಗಿದ್ದ ಸಮಯದಲ್ಲಿ ಸಿದ್ದರಾಮಯ್ಯ ಮತ್ತು ನಾವು ಹೋಗಿ 14 ಸಾವಿರ ಕೋಟಿ ರೂಪಾಯಿ ಯೋಜನೆಗೆ ಮಂಜೂರಾತಿ ಪಡೆದು ಬಂದಿದ್ದೆವು. ಅದನ್ನು ಈಗ ಬಿಜೆಪಿಯವರು ಉದ್ಘಾಟನೆ ಮಾಡುವುದಕ್ಕೆ ರೆಡಿಯಾಗಿದ್ದಾರೆ ಎಂದು ಕುಟುಕಿದರು.
Opposition leader Siddaramaiah said that the incentive for the milk will be increased from Rs 5 to Rs 6 per litre if Congress comes to power after the assembly election. Speaking at a public convention organised as part of Praja Dhwani Yatre of Congress, Siddaramaiah said, "We were giving Rs 5 per litre of milk as an incentive during our tenure. Later, H D Kumaraswamy, who was the chief minister of the Congress-JD(S) coalition government, wanted to increase it by Re 1.
06-08-25 10:51 pm
Bangalore Correspondent
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
06-08-25 11:11 pm
Mangalore Correspondent
Dharmasthala News, Banglegudde: ಬಂಗ್ಲೆಗುಡ್ಡೆ...
06-08-25 07:37 pm
Sharjah NRI dream college: ಕಾನೂನು ಉಲ್ಲಂಘಿಸಿ ವ...
06-08-25 06:00 pm
ಬೆಂಗಳೂರು ಹೋಗುತ್ತೇನೆಂದು ತೆರಳಿದ್ದ ದೇರಳಕಟ್ಟೆ ಯುವ...
06-08-25 03:45 pm
Looking for a Reliable Nurse, Nanny, or House...
06-08-25 01:06 pm
06-08-25 08:02 pm
Mangalore Correspondent
Bangalore Kidnap, Nischith Murder: ಬೆಂಗಳೂರು ನ...
06-08-25 05:43 pm
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm