ಬ್ರೇಕಿಂಗ್ ನ್ಯೂಸ್
28-01-23 09:33 pm HK News Desk ಕರ್ನಾಟಕ
ಬೆಂಗಳೂರು, ಜ.28 : ವಿಧಾನಸಭೆ ಚುನಾವಣೆಗೆ ದಿನ ಹತ್ತಿರವಾಗುತ್ತಿದ್ದಂತೆ ಚುನಾವಣಾ ಆಯೋಗವೂ ಚುರುಕಾಗಿದೆ. ಚುನಾವಣೆ ನಡೆಸಲು ಸಿದ್ಧತೆಗಳನ್ನು ನಡೆಸುತ್ತಿದ್ದು, ಮೇ 2ನೇ ವಾರದಲ್ಲಿ ಮತದಾನಕ್ಕೆ ಲೆಕ್ಕಾಚಾರ ಹಾಕಿಕೊಂಡಿದೆ.
ಹಾಲಿ ವಿಧಾನಸಭೆಯ ಅವಧಿ ಈ ವರ್ಷ ಮೇ 24ಕ್ಕೆ ಕೊನೆಗೊಳ್ಳಲಿದೆ. ಅದರೊಳಗೆ ಹೊಸ ವಿಧಾನಸಭೆ ರಚನೆಯಾಗಬೇಕು. ಕಳೆದ ಬಾರಿ, 2018ರಲ್ಲಿ ಮೇ 12ರಂದು ಮತದಾನ ನಡೆದಿತ್ತು. ಹೆಚ್ಚು ಕಡಿಮೆ ಈ ಬಾರಿಯೂ ಅದೇ ಅವಧಿಯಲ್ಲಿ ಚುನಾವಣೆ ನಡೆಯಬಹುದು.
ಇಡೀ ರಾಜ್ಯದಲ್ಲಿ ಚುನಾವಣಾ ಪ್ರಕ್ರಿಯೆಗೆ 3 ಲಕ್ಷ ಸಿಬಂದಿ ಅಗತ್ಯವಿದ್ದು, ಬಹುತೇಕ ಶಿಕ್ಷಕರನ್ನು ಈ ಕೆಲಸಕ್ಕೆ ನಿಯೋಜಿಸಲಾಗುತ್ತದೆ. ಮಾ.9ರಿಂದ 29ರ ವರೆಗೆ ದ್ವಿತೀಯ ಪಿಯುಸಿ ಮತ್ತು ಮಾ. 31ರಿಂದ ಎ.15ರ ವರೆಗೆ ಎಸೆಸೆಲ್ಸಿ ಪರೀಕ್ಷೆ ನಡೆಯಲಿದೆ. ಇದರ ಬಳಿಕವಷ್ಟೇ ಚುನಾವಣೆ ನಡೆಸಬೇಕಾಗುತ್ತದೆ.
ಇದೇ ವೇಳೆ, ರಾಜ್ಯದ ಎಲ್ಲ 224 ವಿಧಾನಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯನ್ನು ಆಯೋಗ ಸಿದ್ಧಪಡಿಸಿದೆ. ಆದರೂ ಅಂತಿಮ ಮತದಾರರ ಪಟ್ಟಿಯನ್ನು ಇನ್ನೊಮ್ಮೆ ಪರಿಶೀಲಿಸಿ ಲೋಪಗಳಿದ್ದರೆ ಸರಿಪಡಿಸಿಕೊಳ್ಳುವಂತೆ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಆಯೋಗ ಸೂಚನೆ ನೀಡಿದೆ. ರಾಜಕೀಯ ಪಕ್ಷಗಳಿಗೂ ಮತದಾರರ ಪಟ್ಟಿಯನ್ನು ನೀಡಲಾಗಿದೆ.
ಈ ಬಾರಿ 60 ಸಾವಿರ ಮತಗಟ್ಟೆ ಇರಬಹುದು ಎಂದು ಅಂದಾಜಿಸಲಾಗಿದೆ. ಒಂದು ಮತಗಟ್ಟೆಗೆ ಕನಿಷ್ಟ ಐವರಂತೆ ಒಟ್ಟು 3 ಲಕ್ಷ ಸಿಬಂದಿ ಬೇಕಾಗಬಹುದು. ಅವರ ನಿಯೋಜನೆ ಮತ್ತು ತರಬೇತಿ ಪ್ರಕ್ರಿಯೆಯನ್ನು ಈಗಾಗಲೇ ಆರಂಭಿಸಲಾಗಿದೆ ಎಂದು ಚುನಾವಣಾಧಿಕಾರಿಗಳ ಕಚೇರಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
Elections expected to be on May 2nd week in Karnataka.
13-03-26 12:09 pm
HK News Staffer
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
13-03-26 11:24 am
HK News Staffer
ಅಮೆರಿಕದ ಪಶ್ಚಿಮ ಕರಾವಳಿಗೆ ಇರಾನ್ ದಾಳಿ ಸಾಧ್ಯತೆ ;...
12-03-26 09:03 pm
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
13-03-26 01:51 pm
HK News Staffer
ಶಿವಮೊಗ್ಗದಲ್ಲಿ ಅಪಘಾತ ; ಕಾರ್ಕಳ ಮೂಲದ ಮೆಡಿಕಲ್ ವಿದ...
13-03-26 11:46 am
ಸುಳ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯ...
12-03-26 10:47 pm
ಸೈಬರ್ ಜಾಲದ ಮ್ಯೂಲ್ ಅಕೌಂಟ್ ವಂಚನೆ ; ಚೀನಾ ಲಿಂಕ್ ಹ...
12-03-26 02:44 pm
Cyber Fraud Awareness, Mangalore: ಸೈಬರ್ ವಂಚನೆ...
12-03-26 08:33 am
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm