ಬ್ರೇಕಿಂಗ್ ನ್ಯೂಸ್
28-01-23 09:33 pm HK News Desk ಕರ್ನಾಟಕ
ಬೆಂಗಳೂರು, ಜ.28 : ವಿಧಾನಸಭೆ ಚುನಾವಣೆಗೆ ದಿನ ಹತ್ತಿರವಾಗುತ್ತಿದ್ದಂತೆ ಚುನಾವಣಾ ಆಯೋಗವೂ ಚುರುಕಾಗಿದೆ. ಚುನಾವಣೆ ನಡೆಸಲು ಸಿದ್ಧತೆಗಳನ್ನು ನಡೆಸುತ್ತಿದ್ದು, ಮೇ 2ನೇ ವಾರದಲ್ಲಿ ಮತದಾನಕ್ಕೆ ಲೆಕ್ಕಾಚಾರ ಹಾಕಿಕೊಂಡಿದೆ.
ಹಾಲಿ ವಿಧಾನಸಭೆಯ ಅವಧಿ ಈ ವರ್ಷ ಮೇ 24ಕ್ಕೆ ಕೊನೆಗೊಳ್ಳಲಿದೆ. ಅದರೊಳಗೆ ಹೊಸ ವಿಧಾನಸಭೆ ರಚನೆಯಾಗಬೇಕು. ಕಳೆದ ಬಾರಿ, 2018ರಲ್ಲಿ ಮೇ 12ರಂದು ಮತದಾನ ನಡೆದಿತ್ತು. ಹೆಚ್ಚು ಕಡಿಮೆ ಈ ಬಾರಿಯೂ ಅದೇ ಅವಧಿಯಲ್ಲಿ ಚುನಾವಣೆ ನಡೆಯಬಹುದು.
ಇಡೀ ರಾಜ್ಯದಲ್ಲಿ ಚುನಾವಣಾ ಪ್ರಕ್ರಿಯೆಗೆ 3 ಲಕ್ಷ ಸಿಬಂದಿ ಅಗತ್ಯವಿದ್ದು, ಬಹುತೇಕ ಶಿಕ್ಷಕರನ್ನು ಈ ಕೆಲಸಕ್ಕೆ ನಿಯೋಜಿಸಲಾಗುತ್ತದೆ. ಮಾ.9ರಿಂದ 29ರ ವರೆಗೆ ದ್ವಿತೀಯ ಪಿಯುಸಿ ಮತ್ತು ಮಾ. 31ರಿಂದ ಎ.15ರ ವರೆಗೆ ಎಸೆಸೆಲ್ಸಿ ಪರೀಕ್ಷೆ ನಡೆಯಲಿದೆ. ಇದರ ಬಳಿಕವಷ್ಟೇ ಚುನಾವಣೆ ನಡೆಸಬೇಕಾಗುತ್ತದೆ.
ಇದೇ ವೇಳೆ, ರಾಜ್ಯದ ಎಲ್ಲ 224 ವಿಧಾನಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯನ್ನು ಆಯೋಗ ಸಿದ್ಧಪಡಿಸಿದೆ. ಆದರೂ ಅಂತಿಮ ಮತದಾರರ ಪಟ್ಟಿಯನ್ನು ಇನ್ನೊಮ್ಮೆ ಪರಿಶೀಲಿಸಿ ಲೋಪಗಳಿದ್ದರೆ ಸರಿಪಡಿಸಿಕೊಳ್ಳುವಂತೆ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಆಯೋಗ ಸೂಚನೆ ನೀಡಿದೆ. ರಾಜಕೀಯ ಪಕ್ಷಗಳಿಗೂ ಮತದಾರರ ಪಟ್ಟಿಯನ್ನು ನೀಡಲಾಗಿದೆ.
ಈ ಬಾರಿ 60 ಸಾವಿರ ಮತಗಟ್ಟೆ ಇರಬಹುದು ಎಂದು ಅಂದಾಜಿಸಲಾಗಿದೆ. ಒಂದು ಮತಗಟ್ಟೆಗೆ ಕನಿಷ್ಟ ಐವರಂತೆ ಒಟ್ಟು 3 ಲಕ್ಷ ಸಿಬಂದಿ ಬೇಕಾಗಬಹುದು. ಅವರ ನಿಯೋಜನೆ ಮತ್ತು ತರಬೇತಿ ಪ್ರಕ್ರಿಯೆಯನ್ನು ಈಗಾಗಲೇ ಆರಂಭಿಸಲಾಗಿದೆ ಎಂದು ಚುನಾವಣಾಧಿಕಾರಿಗಳ ಕಚೇರಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
Elections expected to be on May 2nd week in Karnataka.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 04:31 pm
HK News Staffer
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm