ಬ್ರೇಕಿಂಗ್ ನ್ಯೂಸ್
28-01-23 09:33 pm HK News Desk ಕರ್ನಾಟಕ
ಬೆಂಗಳೂರು, ಜ.28 : ವಿಧಾನಸಭೆ ಚುನಾವಣೆಗೆ ದಿನ ಹತ್ತಿರವಾಗುತ್ತಿದ್ದಂತೆ ಚುನಾವಣಾ ಆಯೋಗವೂ ಚುರುಕಾಗಿದೆ. ಚುನಾವಣೆ ನಡೆಸಲು ಸಿದ್ಧತೆಗಳನ್ನು ನಡೆಸುತ್ತಿದ್ದು, ಮೇ 2ನೇ ವಾರದಲ್ಲಿ ಮತದಾನಕ್ಕೆ ಲೆಕ್ಕಾಚಾರ ಹಾಕಿಕೊಂಡಿದೆ.
ಹಾಲಿ ವಿಧಾನಸಭೆಯ ಅವಧಿ ಈ ವರ್ಷ ಮೇ 24ಕ್ಕೆ ಕೊನೆಗೊಳ್ಳಲಿದೆ. ಅದರೊಳಗೆ ಹೊಸ ವಿಧಾನಸಭೆ ರಚನೆಯಾಗಬೇಕು. ಕಳೆದ ಬಾರಿ, 2018ರಲ್ಲಿ ಮೇ 12ರಂದು ಮತದಾನ ನಡೆದಿತ್ತು. ಹೆಚ್ಚು ಕಡಿಮೆ ಈ ಬಾರಿಯೂ ಅದೇ ಅವಧಿಯಲ್ಲಿ ಚುನಾವಣೆ ನಡೆಯಬಹುದು.
ಇಡೀ ರಾಜ್ಯದಲ್ಲಿ ಚುನಾವಣಾ ಪ್ರಕ್ರಿಯೆಗೆ 3 ಲಕ್ಷ ಸಿಬಂದಿ ಅಗತ್ಯವಿದ್ದು, ಬಹುತೇಕ ಶಿಕ್ಷಕರನ್ನು ಈ ಕೆಲಸಕ್ಕೆ ನಿಯೋಜಿಸಲಾಗುತ್ತದೆ. ಮಾ.9ರಿಂದ 29ರ ವರೆಗೆ ದ್ವಿತೀಯ ಪಿಯುಸಿ ಮತ್ತು ಮಾ. 31ರಿಂದ ಎ.15ರ ವರೆಗೆ ಎಸೆಸೆಲ್ಸಿ ಪರೀಕ್ಷೆ ನಡೆಯಲಿದೆ. ಇದರ ಬಳಿಕವಷ್ಟೇ ಚುನಾವಣೆ ನಡೆಸಬೇಕಾಗುತ್ತದೆ.
ಇದೇ ವೇಳೆ, ರಾಜ್ಯದ ಎಲ್ಲ 224 ವಿಧಾನಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯನ್ನು ಆಯೋಗ ಸಿದ್ಧಪಡಿಸಿದೆ. ಆದರೂ ಅಂತಿಮ ಮತದಾರರ ಪಟ್ಟಿಯನ್ನು ಇನ್ನೊಮ್ಮೆ ಪರಿಶೀಲಿಸಿ ಲೋಪಗಳಿದ್ದರೆ ಸರಿಪಡಿಸಿಕೊಳ್ಳುವಂತೆ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಆಯೋಗ ಸೂಚನೆ ನೀಡಿದೆ. ರಾಜಕೀಯ ಪಕ್ಷಗಳಿಗೂ ಮತದಾರರ ಪಟ್ಟಿಯನ್ನು ನೀಡಲಾಗಿದೆ.
ಈ ಬಾರಿ 60 ಸಾವಿರ ಮತಗಟ್ಟೆ ಇರಬಹುದು ಎಂದು ಅಂದಾಜಿಸಲಾಗಿದೆ. ಒಂದು ಮತಗಟ್ಟೆಗೆ ಕನಿಷ್ಟ ಐವರಂತೆ ಒಟ್ಟು 3 ಲಕ್ಷ ಸಿಬಂದಿ ಬೇಕಾಗಬಹುದು. ಅವರ ನಿಯೋಜನೆ ಮತ್ತು ತರಬೇತಿ ಪ್ರಕ್ರಿಯೆಯನ್ನು ಈಗಾಗಲೇ ಆರಂಭಿಸಲಾಗಿದೆ ಎಂದು ಚುನಾವಣಾಧಿಕಾರಿಗಳ ಕಚೇರಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
Elections expected to be on May 2nd week in Karnataka.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm