ಬ್ರೇಕಿಂಗ್ ನ್ಯೂಸ್
28-01-23 10:35 pm HK News Desk ಕರ್ನಾಟಕ
ಬೆಳಗಾವಿ, ಜ.28: ಮಧ್ಯಪ್ರದೇಶದ ಗ್ವಾಲಿಯರ್ ಸಮೀಪದ ಮೊರೇನಾ ಎಂಬಲ್ಲಿ ನಡೆದ ವಾಯುಪಡೆ ವಿಮಾನಗಳ ಡಿಕ್ಕಿ ಪ್ರಕರಣದಲ್ಲಿ ಬೆಳಗಾವಿ ಮೂಲದ ವಿಂಗ್ ಕಮಾಂಡರ್ ಹನುಮಂತ ರಾವ್ ಸಾರಥಿ ಮೃತಪಟ್ಟಿದ್ದಾರೆ.
ಘಟನೆಯಲ್ಲಿ ಒಬ್ಬರು ಪೈಲಟ್ ಸ್ಥಳದಲ್ಲೇ ಸಾವಿಗೀಡಾಗಿದ್ದರು. ಅವರು ಯಾರೆನ್ನುವುದು ದೃಢವಾಗಿರಲಿಲ್ಲ. ಇದೀಗ ಬೆಳಗಾವಿ ನಗರದ ಗಣೇಶಪುರದ ನಿವಾಸಿ ಹನುಮಂತ ರಾವ್ ಮೃತಪಟ್ಟಿದ್ದಾರೆಂದು ಕುಟುಂಬಸ್ಥರಿಗೆ ಸೇನಾ ಮೂಲಗಳು ಖಚಿತಪಡಿಸಿವೆ. ಹನುಮಂತ ರಾವ್, ವಾಯುಪಡೆಯಲ್ಲಿ ವಿಂಗ್ ಕಮಾಂಡರ್ ಆಗಿದ್ದು ಪೈಲಟ್ ಗಳಿಗೆ ತರಬೇತು ನೀಡುತ್ತಿದ್ದರು. ಹನುಮಂತ ರಾವ್, ತಂದೆ, ತಾಯಿ, ಸೋದರ, ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಅವರ ಪಾರ್ಥಿವ ಶರೀರ ಭಾನುವಾರ ಬೆಳಗಾವಿ ತಲುಪಲಿದೆ.



ಮಧ್ಯಪ್ರದೇಶದ ಮೊರೇನಾದಲ್ಲಿ ಸುಖೋಯ್ -30 ಮತ್ತು ಮೀರಜ್ 2000 ಎರಡು ವಾಯುಪಡೆ ವಿಮಾನಗಳು ಸಂಚಾರ ನಡೆಸುತ್ತಿದ್ದಾಗಲೇ ಡಿಕ್ಕಿಯಾಗಿ ಪತನಗೊಂಡಿದ್ದವು. ಶನಿವಾರ ಬೆಳಗ್ಗೆ ಘಟನೆ ನಡೆದಿದ್ದು, ಸುಖೋಯ್ ಯುದ್ಧ ವಿಮಾನದಲ್ಲಿ ಮೂವರು ಪೈಲಟ್ ಗಳಿದ್ದರೆ, ಮೀರಜ್ ನಲ್ಲಿ ಒಬ್ಬರೇ ಪೈಲಟ್ ಇದ್ದರು. ಇಬ್ಬರು ಪೈಲಟ್ ಅಪಾಯದಿಂದ ಪಾರಾಗಿದ್ದರು. ಒಬ್ಬರು ಸ್ಥಳದಲ್ಲೇ ಸಾವು ಕಂಡಿದ್ದರೆ, ಇನ್ನೊಬ್ಬರು ಗಂಭೀರ ಗಾಯಗೊಂಡಿದ್ದರು ಎಂದು ಸೇನಾ ಮೂಲಗಳು ತಿಳಿಸಿದ್ದವು.
ಹನುಮಂತ ರಾವ್ ಸೋದರನೂ ವಾಯುಪಡೆಯಲ್ಲಿದ್ದು, ಪೈಲಟ್ ಆಗಿದ್ದಾರೆ.
The deceased pilot who lost his life in Saturday's Sukhoi-Mirage 2000 collision has been identified as Wing Commander Hanumanth Rao Sarathi who hailed from Karnataka's Belagavi.
13-03-26 12:09 pm
HK News Staffer
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
13-03-26 11:24 am
HK News Staffer
ಅಮೆರಿಕದ ಪಶ್ಚಿಮ ಕರಾವಳಿಗೆ ಇರಾನ್ ದಾಳಿ ಸಾಧ್ಯತೆ ;...
12-03-26 09:03 pm
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
13-03-26 01:51 pm
HK News Staffer
ಶಿವಮೊಗ್ಗದಲ್ಲಿ ಅಪಘಾತ ; ಕಾರ್ಕಳ ಮೂಲದ ಮೆಡಿಕಲ್ ವಿದ...
13-03-26 11:46 am
ಸುಳ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯ...
12-03-26 10:47 pm
ಸೈಬರ್ ಜಾಲದ ಮ್ಯೂಲ್ ಅಕೌಂಟ್ ವಂಚನೆ ; ಚೀನಾ ಲಿಂಕ್ ಹ...
12-03-26 02:44 pm
Cyber Fraud Awareness, Mangalore: ಸೈಬರ್ ವಂಚನೆ...
12-03-26 08:33 am
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm