ಬ್ರೇಕಿಂಗ್ ನ್ಯೂಸ್
19-10-20 05:41 pm Headline Karnataka News Network ಕರ್ನಾಟಕ
ಬೆಂಗಳೂರು, ಅಕ್ಟೋಬರ್ 19 : ಸಿಎಂ ಬಿಎಸ್ ಯಡಿಯೂರಪ್ಪ ಸ್ವಕ್ಷೇತ್ರ ಶಿಕಾರಿಪುರ ಪ್ರವಾಸದ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಉತ್ತರ ಕರ್ನಾಟಕದಲ್ಲಿ ಪ್ರವಾಹ ಬಂದು ಜನರು ತತ್ತರಿಸಿದ್ದಾರೆ. ನಾಡಿದ್ದು ಸಿಎಂ ವೈಮಾನಿಕ ಸಮೀಕ್ಷೆ ಮಾಡ್ತಾರೆ ಅಂತ ನೋಡಿದ್ದೇನೆ. ಸಿಎಂಗೆ ಹೃದಯದಲ್ಲಿ ಗಾಂಭೀರ್ಯ ಇದ್ದಿದ್ದರೆ ಶಿಕಾರಿಪುರಕ್ಕೆ ಹೋಗೋ ಬದಲು ಅಲ್ಲಿಗೆ ಹೋಗಬೇಕಿತ್ತು. ಊರು ಹೊತ್ತಿಕೊಂಡು ಉರಿಯುತ್ತಿದೆ, ಜಿಲ್ಲೆಗಳು ನೀರಿನಲ್ಲಿ ಮುಳುಗಿದೆ. ಪರಿಸ್ಥಿತಿ ಹೀಗಿದ್ದರೂ ಶಿಕಾರಿಪುರಕ್ಕೆ ಹೋಗಿ ಸಿಎಂ ಕುಳಿತಿದ್ದಾರೆ ಎಂದು ಎಚ್ಡಿಕೆ ವಾಗ್ದಾಳಿ ನಡೆಸಿದ್ದಾರೆ.
ಬಿಎಸ್ವೈ ಶಿಕಾರಿಪುರವನ್ನು ಮಾಡಲ್ ಮಾಡಲು ಹೊರಟಿದ್ದಾರೆ. ಹಿಂದೆ ನಾನು ಬಜೆಟ್ ಮಂಡನೆ ಮಾಡಿದ್ದಾಗ ರಾಮನಗರ, ಮಂಡ್ಯ ಬಜೆಟ್ ಅಂದ್ರು, ಇವಾಗ ಯಡಿಯೂರಪ್ಪ ಏನು ಶಿಕಾರಿಪುರದ ಸಿಎಂ ಆಗಿದ್ದಾರಾ...? ಎಂದು ಪ್ರಶ್ನಿಸಿದ ಕುಮಾರಸ್ವಾಮಿ, ಬಿಎಸ್ವೈ ವಿರುದ್ಧ ಸಿಡಿದಿದ್ದೆರು. ಜನರಿಗೆ ಈ ಸರ್ಕಾರ ಸ್ಪಂದನೆ ಮಾಡ್ತಿಲ್ಲ. ಉತ್ತರ ಕರ್ನಾಟಕದಲ್ಲಿ ಮಳೆ ಬಂದು ಸಂತ್ರಸ್ತರು ನರಳುತ್ತಿದ್ದಾರೆ. ಸಹಾಯ ಮಾಡುವ ಕನಿಷ್ಠ ಸೌಜನ್ಯ ಕೂಡ ಈ ಸರ್ಕಾರಕ್ಕೆ ಇಲ್ಲ. ಯಾವ ಮಂತ್ರಿಗೂ ಜವಾಬ್ದಾರಿ ಇಲ್ಲ ಎಂದು ವಾಗ್ದಾಳಿ ನಡೆಸಿದರು.
ಬಿಜೆಪಿಯವರು ಚುನಾವಣೆಗೆ ಕೋಟಿ ಕೋಟಿ ಹಣ ಖರ್ಚು ಮಾಡ್ತಿದ್ದಾರೆ. ಪಾಪದ ಹಣ ತಗೊಂಡು ಹೋಗಿ ಶಿರಾ ಚುನಾವಣೆ ಮಾಡ್ತಿದ್ದೀರಾ? ಆ ಹಣವನ್ನ ಸಿಎಂ ಮಾಡಲು ಸ್ಥಾನ ಕೊಟ್ಟ ಜನರಿಗೆ ಕೊಡಿ. ಸರ್ಕಾರದ ಪರಿಹಾರಕ್ಕೆ ನಾನು ಕಾಯಲ್ಲ. ಬುಧವಾರ ಪ್ರವಾಹ ಪ್ರದೇಶಕ್ಕೆ ನಾನೇ ಅಕ್ಕಿ, ಬೇಳೆ, ಬಟ್ಟೆ ಕಳಿಸ್ತಿದ್ದೇನೆ. ನನ್ನ ಕರ್ತವ್ಯ ನಾನು ಮಾಡ್ತಿದ್ದೇನೆ. ಆ ಭಾಗದ ಜನ ಮತ ಕೊಡದೇ ಹೋದ್ರು ನನ್ನ ಪ್ರಾಮಾಣಿಕ ಹಣದಲ್ಲಿ ಸಹಾಯ ಮಾಡ್ತಿದ್ದೇನೆ. ಬುಧವಾರ ಎಲ್ಲ ಸಾಮಗ್ರಿಗಳನ್ನು ನಮ್ಮ ಪಕ್ಷದಿಂದ ಕೊಡ್ತಿದ್ದೇವೆ ಎಂದರು.
ಇದೇ ವೇಳೆ, ಸಿಎಂ ಪುತ್ರ ವಿಜಯೇಂದ್ರ ವಿರುದ್ಧ ಕಿಡಿಕಾರಿದ ಎಚ್ಡಿಕೆ, ಕೆಆರ್ ಪೇಟೆಯಂತೆ ಶಿರಾ ಮುಗಿಸ್ತೀನಿ ಅಂತಾ ಸಿಎಂ ಪುತ್ರ ಹೇಳಿದ್ದಾರೆ. ಅವರು ಜನರಿಗೆ ಕುಡಿಸಿ ಬೀದಿ ಬೀದಿಯಲ್ಲಿ ಮಲಗಿಸಿದ್ದಾರೆ. ಇದು ಮಾಧ್ಯಮಗಳಲ್ಲೇ ಬಂದಿದೆ. ನಾಮಪತ್ರ ಸಲ್ಲಿಕೆ ವೇಳೆ ಯುವಕರಿಗೆ ಕುಡಿಸಿ, ರಸ್ತೆಯಲ್ಲೇ ಮಲಗಿಸಿದ್ದಾರೆ. ಅದೇ ದುಡ್ಡನ್ನು ತಗೊಂಡು ಹೋಗಿ ಬೀದಿಯಲ್ಲಿ ಇರುವ ಜನರಿಗೆ ಕೊಡಬೇಕಿತ್ತು ಎಂದು ಆಕ್ರೋಶ ಹೊರಹಾಕಿದರು.
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 10:28 pm
Mangalore Correspondent
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm