ಬ್ರೇಕಿಂಗ್ ನ್ಯೂಸ್
31-01-23 09:17 pm Bangalore Correspondent ಕರ್ನಾಟಕ
ಬೆಂಗಳೂರು, ಜ.31 : ವಿಜಯ್ ಮಲ್ಯ, ನೀರವ್ ಮೋದಿ ಸಾವಿರಾರು ಕೋಟಿ ರೂಪಾಯಿ ವಂಚಿಸಿ ಪರಾರಿಯಾಗಿದ್ದಾರೆ. ಅವರನ್ನು ಏನೂ ಮಾಡದೆ ಬಿಡಲಾಗಿದೆ. ನಾನು ಕೇವಲ ಮೂರು-ನಾಲ್ಕು ಕೋಟಿಯಷ್ಟೇ ವಂಚನೆ ಮಾಡಿದ್ದೇನೆ. ನಿಮಗ್ಯಾಕೆ ಚಿಂತೆ, ನಾನು ನೋಡಿಕೊಳ್ಳುತ್ತೇನೆ. ಹೀಗೆಂದು ವಂಚನೆ ಪ್ರಕರಣದಲ್ಲಿ ಸಿಕ್ಕಿಬಿದ್ದ ಆರೋಪಿ ಪೊಲೀಸರಿಗೆ ಪ್ರಶ್ನಿಸಿದ್ದಾನೆ.
ನಿವೇಶನ ಖರೀದಿ ನೆಪದಲ್ಲಿ ನಕಲಿ ದಾಖಲೆ ಸೃಷ್ಟಿಸಿ ಬ್ಯಾಂಕ್ಗಳಿಂದ ಕೋಟ್ಯಂತರ ರೂ. ಸಾಲ ಪಡೆದು ವಂಚಿಸುತ್ತಿದ್ದ ತಿಪಟೂರು ಮೂಲದ ಲೋಕೇಶ್(43)ನನ್ನು ಶೇಷಾದ್ರಿಪುರ ಠಾಣೆ ಪೊಲೀಸರು ಬಂಧಿಸಿದ್ದು ವಿಚಾರಣೆ ವೇಳೆ ಈ ರೀತಿ ಪ್ರಶ್ನೆ ಮಾಡಿದ್ದಾನೆ.

ಆರೋಪಿ 2018ರಲ್ಲಿ ನಿವೇಶನ ಖರೀದಿ ನೆಪದಲ್ಲಿ ವ್ಯಕ್ತಿಯೊಬ್ಬರಿಂದ ದಾಖಲೆಗಳ ಜೆರಾಕ್ಸ್ ಪ್ರತಿ ಪಡೆದಿದ್ದು ಬಳಿಕ ಅವನ್ನೇ ಬಳಸಿ ನಕಲಿ ದಾಖಲೆ ಸೃಷ್ಟಿಸಿದ್ದು ಎಸ್ಬಿಐ ಬ್ಯಾಂಕ್ಗೆ ಸಲ್ಲಿಸಿ ಅದೇ ನಿವೇಶನದ ಮೇಲೆ 83 ಲಕ್ಷ ರೂ. ಸಾಲ ಪಡೆದಿದ್ದ. ಈ ಬಗ್ಗೆ ಬ್ಯಾಂಕ್ ಕಡೆಯಿಂದ ಶೇಷಾದ್ರಿಪುರ ಠಾಣೆಯಲ್ಲಿ ದೂರು ನೀಡಿದ್ದರು. ಪೊಲೀಸರು ಆರೋಪಿ ಲೋಕೇಶ್ ಸಹಚರರಾದ ಅಯೂಬ್ ಹಾಗೂ ನಾಗರಾಜ್ ಎಂಬವರನ್ನು ಬಂಧಿಸಿದ್ದರು. ಅಂದಿನಿಂದ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಲೋಕೇಶ್ ಐದು ವರ್ಷಗಳ ಬಳಿಕ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಈ ಹಿಂದೆಯೂ ನಿವೇಶನ ಖರೀದಿಸುವ ನೆಪದಲ್ಲಿ ನಕಲಿ ದಾಖಲೆ ಸೃಷ್ಟಿಸಿ ಬ್ಯಾಂಕ್ಗಳಿಂದ ಕೋಟ್ಯಂತರ ರೂ. ಸಾಲ ಪಡೆದು ವಂಚಿಸಿದ ಆರೋಪದಡಿ ವಂಚಕ ಲೋಕೇಶ್ ಹಾಗೂ ಆತನ ಸಹಚರರ ವಿರುದ್ಧ ಶಂಕರಪುರ, ವಿದ್ಯಾರಣ್ಯಪುರ, ಜಿಗಣಿ, ಕೆ.ಜಿ.ನಗರ ಸೇರಿ ವಿವಿಧ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದ್ದವು. ಬಂಧನದ ಬಳಿಕವೂ ಜಾಮೀನು ಪಡೆದು ಹೊರಬಂದು ಮತ್ತೆ ಅದೇ ಕೆಲಸ ಮುಂದುವರಿಸಿದ್ದರು.

ಪತ್ರಿಕೆಗಳಲ್ಲಿ ಬರುವ ನಿವೇಶನ ಮಾರಾಟದ ಜಾಹೀರಾತು ಹಾಗೂ ನಿವೇಶನಗಳಲ್ಲಿ ಅಂಟಿಸುವ ಮಾಹಿತಿ ಫಲಕಗಳಲ್ಲಿ ಸಂಪರ್ಕ ಸಂಖ್ಯೆ ಪಡೆದು ಬಳಿಕ ನಿವೇಶನ ಖರೀದಿಸುವ ನೆಪದಲ್ಲಿ ಮಾಲೀಕರಿಗೆ ಕರೆ ಮಾಡುತ್ತಿದ್ದ. ಬಳಿಕ ನಿವೇಶನ ಖರೀದಿಸುವುದಾಗಿ ವ್ಯವಹಾರ ಕುದುರಿಸುತ್ತಿದ್ದ. 20 ಸಾವಿರ ರೂ. ಮುಂಗಡ ಹಣ ಕೊಟ್ಟು ನಿವೇಶನದ ದಾಖಲೆಗಳ ಜೆರಾಕ್ಸ್ ಪ್ರತಿ ಪಡೆದು ನಂತರ ತಾನೇ ನಕಲಿ ದಾಖಲೆ ಸೃಷ್ಟಿಸಿ ತನ್ನ ಸಹಚರರನ್ನು ಖರೀದಿದಾರರನ್ನಾಗಿ ತೋರಿಸಿ ಅದೇ ಜಾಗದ ಮೇಲೆ ಸಾಲ ಪಡೆಯುತ್ತಿದ್ದರು.
Why there is no arrest of Vijay Mallya, Nirav Modi, accused questions Police after his arrest on cheating in Bangalore.
19-05-26 11:34 pm
HK News Desk
ಮೋರ್ಬಿ ಘಟನೆ ಗುಜರಾತ್ ಮಾದರಿಯನ್ನು ಟೊಳ್ಳಾಗಿಸಿದೆ,...
19-05-26 09:09 pm
ದಕ್ಷಿಣ ಭಾರತದಲ್ಲೇ ಮೊದಲ ಪ್ರಯೋಗ ; ಚಿಕ್ಕಮಗಳೂರಿನಲ್...
17-05-26 08:55 pm
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
21-05-26 02:49 pm
HK News Staffer
ಗೊಂದಲ ನಡುವೆಯೇ ಖಾತೆ ಹಂಚಿಕೆ ಮಾಡಿದ ಕೇರಳ ಸಿಎಂ ಸತೀ...
20-05-26 11:23 pm
ಆನ್ಲೈನ್ ಔಷಧ ಮಾರಾಟ ವಿರುದ್ಧ ದೇಶವ್ಯಾಪಿ ಪ್ರತಿಭಟ...
20-05-26 10:33 am
ಆನೆಗಳ ಕಾದಾಟ; ದುಬಾರೆ ಕ್ಯಾಂಪ್ನಲ್ಲಿ ಗಾಯಗೊಂಡಿದ್ದ...
19-05-26 04:27 pm
ಮತ್ತೆ ಬೆಲೆ ಏರಿಕೆ ಶಾಕ್! ಒಂದೇ ವಾರದಲ್ಲಿ 2ನೇ ಬಾರಿ...
19-05-26 01:06 pm
21-05-26 05:52 pm
HK News Staffer
ಮೇ 25ರವರೆಗೆ ಮೀನುಗಾರರಿಗೆ ಸಮುದ್ರ ಪ್ರವೇಶ ನಿಷೇಧ ಎ...
20-05-26 06:51 pm
ಬೆಳ್ತಂಗಡಿ ; ನೇತ್ರಾವತಿ ನದಿಯಲ್ಲಿ ಸ್ನಾನಕ್ಕಿಳಿದು...
19-05-26 10:47 pm
ಬಾವಿಯಲ್ಲಿ ನೀರಲ್ಲ , ಡೀಸೆಲ್ ! ಮಂಗಳೂರಿನಲ್ಲಿ ಆತಂಕ...
19-05-26 05:57 pm
ಒಂದು ರೂ.ಗೆ ಒಂದು ಶರ್ಟ್ ! ಆಫರ್ ಕೇಳಿ ಮುಗಿಬಿದ್ದ ಜ...
19-05-26 10:44 am
21-05-26 07:33 pm
HK News Staffer
ಧರ್ಮಸ್ಥಳದ ಬುರುಡೆ ರಹಸ್ಯ ಪ್ರಕರಣ ಮತ್ತೆ ಚುರುಕು ;...
21-05-26 04:34 pm
ಎನ್ಐಎಸ್ಎಂ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ವಿದ್ಯಾ...
21-05-26 01:34 pm
ಬೆಳ್ತಂಗಡಿ; ಜಲಪಾತಕ್ಕೆ ತೆರಳಿದ್ದ ಕಾಲೇಜು ಯುವತಿಯರಿ...
21-05-26 10:20 am
ಭಾರತದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಬಂದ ಸ್ಲೀಪರ್ ಸೆ...
20-05-26 03:08 pm