ಬ್ರೇಕಿಂಗ್ ನ್ಯೂಸ್
03-02-23 11:33 am Bangalore Correspondent ಕರ್ನಾಟಕ
ಬೆಂಗಳೂರು, ಫೆ.3: ರಾಜ್ಯ ಕಾಂಗ್ರೆಸ್ನಲ್ಲಿ ನಾಯಕರ ಒಳಗಿನ ಅಸಮಾಧಾನ ಸ್ಫೋಟಗೊಂಡಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಡೆಗೆ ಬೇಸತ್ತ ಚುನಾವಣೆ ಪ್ರಣಾಳಿಕೆ ಸಮಿತಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ತನ್ನ ಹುದ್ದೆಗೆ ರಾಜಿನಾಮೆ ನೀಡಿದ್ದಾರೆ. ಸಮಿತಿಯಲ್ಲಿ ಚರ್ಚಿಸದೆ, ಪ್ರಜಾಧ್ವನಿ ಕಾರ್ಯಕ್ರಮದಲ್ಲಿ ತಮ್ಮದೇ ಭರವಸೆಗಳನ್ನು ಘೋಷಣೆ ಮಾಡುತ್ತಿದ್ದಾರೆ. ಹೀಗಾಗಿ ನಾಮಕೆವಾಸ್ತೆ ಪ್ರಣಾಳಿಕೆ ಸಮಿತಿಯಲ್ಲಿ ಇರುವುದಿಲ್ಲ ಎಂದು ಹಿರಿಯ ನಾಯಕ ಪರಮೇಶ್ವರ್ ರಾಜೀನಾಮೆ ಪತ್ರ ಬರೆದು ನೀಡಿದ್ದಾರೆ ಎನ್ನಲಾಗಿದೆ.
ಪ್ರಣಾಳಿಕೆ ಘೋಷಣೆ ಸಂದರ್ಭದಲ್ಲಿ ತಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ ಎಂಬುದು ಪರಮೇಶ್ವರ ಅಸಮಾಧಾನಕ್ಕೆ ಕಾರಣ. ಈ ಬಗ್ಗೆ ತಮ್ಮ ಆಪ್ತರ ಬಳಿಯೂ ಬೇಸರ ಹೊರ ಹಾಕಿದ್ದರು ಎಂಬುದು ಮಾಹಿತಿ. ಎಂಟು ವರ್ಷ ಕೆಪಿಸಿಸಿ ಅಧ್ಯಕ್ಷನಾಗಿ ಕೆಲಸ ಮಾಡಿದ್ದೇನೆ. ಅಷ್ಟೇ ಏಕೆ, ಡಿಸಿಎಂ, ಪ್ರಬಲ ಖಾತೆಗಳನ್ನೂ ನಿಭಾಯಿಸಿದ್ದೇನೆ. ಪಕ್ಷ ಸಂಘಟನೆಯಲ್ಲಿ ನನ್ನದೇ ಆದ ಕೊಡುಗೆ ಇದೆ. ಪ್ರಸ್ತುತ ಪ್ರಣಾಳಿಕೆ ಸಮಿತಿ ಅಧ್ಯಕ್ಷನಾಗಿದ್ದೇನೆ. ಆದರೂ ತನ್ನನ್ನು ಕಡೆಗಣಿಸಿ ಉಚಿತ ಯೋಜನೆಗಳನ್ನು ನಾಯಕರೇ ಘೋಷಣೆ ಮಾಡುತ್ತಿದ್ದಾರೆಂದು ಬೇಸರ ತೋಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.


ಇದರ ಬೆನ್ನಲ್ಲೇ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಪರಮೇಶ್ವರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಬೆಂಗಳೂರಿಗೆ ಆಗಮಿಸುತ್ತಿದ್ದಂತೆ ಸದಾಶಿವನಗರದ ಪರಮೇಶ್ವರ್ ನಿವಾಸಕ್ಕೆ ಭೇಟಿ ನೀಡಿ ಸುರ್ಜೇವಾಲ ಮಾತುಕತೆ ನಡೆಸಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಪರಮೇಶ್ವರ್ ರಾಜಿನಾಮೆ ಪಕ್ಷದ ಒಳಗಡೆ ಭಿನ್ನವಾದ ಸಂದೇಶ ಹೋಗಲಿದೆ ಎಂಬುದನ್ನು ಅರಿತ ಸುರ್ಜೇವಾಲಾ, ಪರಮೇಶ್ವರ್ ಅವರನ್ನು ಮನವೊಲಿಸಿದ್ದಾರೆ. ಪ್ರಬಲ ದಲಿತ ವರ್ಗಕ್ಕೆ ಸೇರಿರುವ ಪರಮೇಶ್ವರ್ ರಾಜಿನಾಮೆ ಪಕ್ಷದ ಕಾರ್ಯಕರ್ತರ ನಡುವೆ ಭಿನ್ನವಾದ ಸಂದೇಶ ನೀಡುವುದರಿಂದ ಅವರನ್ನು ಮನವೊಲಿಸಿ ಆ ಹುದ್ದೆಯಲ್ಲೇ ಮುಂದುವರಿಸುವ ಸಾಧ್ಯತೆಯಿದೆ.
Simmering discontent has reportedly erupted the congress party in the state.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 04:31 pm
HK News Staffer
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm