ಬ್ರೇಕಿಂಗ್ ನ್ಯೂಸ್
03-02-23 11:49 am HK News Desk ಕರ್ನಾಟಕ
ಹಾಸನ, ಫೆ.3: ರಾಷ್ಟ್ರೀಯ ಹೆದ್ದಾರಿ 75ರ ಹಾಸನ- ಸಕಲೇಶಪುರ - ಮಾರನಹಳ್ಳಿ ವಿಭಾಗದ ಚತುಷ್ಪಥ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದ್ದು, ಮಳೆಗಾಲದ ನಂತರವಷ್ಟೇ ಪೂರ್ಣಗೊಳ್ಳಲಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.
ಲೋಕಸಭೆಯಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ನಿತಿನ್ ಗಡ್ಕರಿ, ಸುಮಾರು 45 ಕಿ.ಮೀ ಉದ್ದದ ರಸ್ತೆ ಯೋಜನೆಯಲ್ಲಿ 30 ಕಿ.ಮೀ.ನಲ್ಲಿ ಚತುಷ್ಪಥ ಕಾಮಗಾರಿ ಪೂರ್ಣಗೊಂಡಿದೆ. ಇನ್ನೊಂದು 5 ಕಿಮೀ ವಿಸ್ತರಣೆಯನ್ನು ಜೂನ್, 2023ರೊಳಗೆ ಪೂರ್ಣಗೊಳಿಸುವ ಗುರಿಯನ್ನು ಹೊಂದಿದೆ. ನಿರ್ಬಂಧಿತ ಅಗಲದಿಂದಾಗಿ 10 ಕಿಮೀ ವಿಸ್ತರಣೆಗೆ ರಸ್ತೆಯನ್ನು ಮುಚ್ಚುವ ಅಗತ್ಯವಿದೆ. ಇದನ್ನು ಮಳೆಗಾಲದ ನಂತರ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ರಸ್ತೆಯನ್ನು ಸುಸ್ಥಿತಿಯಲ್ಲಿಡಲು 2023ರ ಜ.9ರಂದು ಸಕಲೇಶಪುರ- ಮಾರನಹಳ್ಳಿ ನಡುವೆ 10 ಕಿಮೀ ಉದ್ದದ ನಿರ್ವಹಣಾ ಕಾಮಗಾರಿಗೆ ಮಂಜೂರಾತಿ ನೀಡಲಾಗಿದ್ದು, ಈಗಾಗಲೇ ಕಾಮಗಾರಿ ಆರಂಭಿಸಲಾಗಿದೆ. ಹಾಸನ- ಮಾರನಹಳ್ಳಿ ರಸ್ತೆ ನಿರ್ಮಾಣಕ್ಕೆ ಅರಣ್ಯ ಭೂಮಿ ಸೇರಿದಂತೆ ಭೂಮಿಯನ್ನು ಈಗಾಗಲೇ ಸ್ವಾಧೀನಪಡಿಸಿಕೊಳ್ಳಲಾಗಿದೆ. ಮುಖ್ಯ ಗುತ್ತಿಗೆದಾರರ ದಿವಾಳಿತನ ಪ್ರಕ್ರಿಯೆ, ಬ್ಲಾಸ್ಟಿಂಗ್ ಅನುಮತಿಯಲ್ಲಿ ವಿಳಂಬ, ಭಾರೀ ಮಳೆ, ಕೋವಿಡ್ -19 ಸಾಂಕ್ರಾಮಿಕ ಮತ್ತು ಗುತ್ತಿಗೆದಾರರ ವಿಳಂಬ ಕೆಲಸ ಸೇರಿದಂತೆ ಹಲವಾರು ಕಾರಣಗಳಿಂದ ಯೋಜನೆಯ ಕೆಲಸ ವಿಳಂಬವಾಗಿದೆ ಎಂದು ಗಡ್ಕರಿ ಹೇಳಿದರು.

ಬೆಂಗಳೂರು- ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಸಕಲೇಶಪುರ ಮತ್ತು ಮಾರನಹಳ್ಳಿ ನಡುವೆ 10 ಕಿಲೋಮೀಟರ್ ವ್ಯಾಪ್ತಿಯಲ್ಲಿ ರಸ್ತೆ ಸಂಪೂರ್ಣ ಹದಗೆಟ್ಟಿರುವುದರಿಂದ ಸಾರ್ವಜನಿಕರ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಇದರಿಂದ ಎಚ್ಚೆತ್ತ ಬೆಂಗಳೂರಿನ ರಾಷ್ಟ್ರೀಯ ಹೆದ್ದಾರಿ ಪ್ರಾದೇಶಿಕ ಕಚೇರಿಯ ಮುಖ್ಯ ಪ್ರಧಾನ ವ್ಯವಸ್ಥಾಪಕರು (ತಾಂತ್ರಿಕ) ಡಿಸೆಂಬರ್ 16ರಂದು ಹಾಸನ -ಮಾರನಹಳ್ಳಿ ವಿಭಾಗದ ಹತ್ತು ಕಿಮೀ ರಸ್ತೆ ಅಭಿವೃದ್ಧಿಗೆ ಅಂದಾಜು ₹12 ಕೋಟಿ ವೆಚ್ಚದಲ್ಲಿ ಬಿಡ್ ಆಹ್ವಾನಿಸಿದ್ದರು.
Union Road Transport Minister Nitin Gadkari on Thursday said that the work on four-laning of Hassan-Sakleshpur-Maranahalli section of National Highway (NH) - 75 had been taken up and it would be completed after monsoon.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
16-02-26 12:53 pm
HK Staffer
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
16-02-26 11:13 pm
Mangaluru Staffer
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Manjunath Bhandary MLC: ಕೆಪಿಸಿಸಿ ಕಾರ್ಯಾಧ್ಯಕ್ಷ...
16-02-26 01:48 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
16-02-26 04:01 pm
HK News Desk
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm