ಬ್ರೇಕಿಂಗ್ ನ್ಯೂಸ್
04-02-23 02:23 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.4: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಕರ್ನಾಟಕ ಬಿಜೆಪಿ ಚುನಾವಣಾ ಉಸ್ತುವಾರಿಯಾಗಿ ನೇಮಕ ಮಾಡಲಾಗಿದೆ. ಈ ಹಿಂದೆ ರಾಜ್ಯ ಬಿಜೆಪಿ ಉಸ್ತುವಾರಿ ಆಗಿಯೂ ಕೆಲಸ ಮಾಡಿದ ಅನುಭವ ಇರುವ ಧರ್ಮೇಂದ್ರ ಪ್ರಧಾನ್ ಅವರಿಗೆ ಚುನಾವಣಾ ಉಸ್ತುವಾರಿಯನ್ನು ನೀಡಲಾಗಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಶನಿವಾರ ಅಧಿಕೃತ ಆದೇಶವನ್ನು ಮಾಡಿದ್ದು, ಈ ಚುನಾವಣೆಯಲ್ಲಿ ಕರ್ನಾಟಕದ ಚುನಾವಣಾ ಉಸ್ತುವಾರಿಯನ್ನು ಧರ್ಮೇಂದ್ರ ಪ್ರಧಾನ್ ಹೊತ್ತುಕೊಳ್ಳಲಿದ್ದಾರೆ. ಇನ್ನು, ಬಿಜೆಪಿ ತಮಿಳುನಾಡು ರಾಜ್ಯಾಧ್ಯಕ್ಷರಾಗಿರುವ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರನ್ನು ಕರ್ನಾಟಕ ಚುನಾವಣಾ ಸಹ ಉಸ್ತುವಾರಿಯನ್ನಾಗಿ ನಿಯೋಜನೆ ಮಾಡಲಾಗಿದೆ. ಅಣ್ಣಾಮಲೈ ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆಗಿಯೂ ಕೆಲಸ ಮಾಡಿದ್ದರು. ಈ ನಿಟ್ಟಿನಲ್ಲಿ ಅವರಿಗೆ ಸಹ ಉಸ್ತುವಾರಿ ಜವಾಬ್ದಾರಿ ನೀಡಲಾಗಿದೆ.
ಧರ್ಮೇಂದ್ರ ಪ್ರಧಾನ್ ಯಾರು?
ಒಡಿಶಾ ಮೂಲದವರಾಗಿರುವ ಧರ್ಮೇಂದ್ರ ಪ್ರಧಾನ್ 2000ನೇ ಇಸವಿಯಲ್ಲಿ ಒಡಿಶಾ ವಿಧಾನಸಭೆಯ ಶಾಸಕರಾಗುವ ಮೂಲಕ ರಾಜಕೀಯಕ್ಕೆ ಪ್ರವೇಶಿಸಿದ್ದರು. ಅದಾದ ಬಳಿಕ 2004ರಲ್ಲಿ ಒಡಿಶಾದ ದಿಯೋಗರ್ನಿಂದ ಲೋಕಸಭೆಗೆ ಆಯ್ಕೆಯಾಗಿದ್ದರು. ನಂತರ ಛತ್ತೀಸ್ಗಢದ ರಾಜ್ಯ ಬಿಜೆಪಿ ಉಸ್ತುವಾರಿಯನ್ನಾಗಿ ಧರ್ಮೇಂದ್ರ ಪ್ರಧಾನ್ ಅವರನ್ನು 2007ರಲ್ಲಿ ನೇಮಿಸಲಾಗಿತ್ತು. ಬಳಿಕ ಬಿಜೆಪಿ ಉತ್ತರಾಖಂಡದ ಚುನಾವಣಾ ಉಸ್ತುವಾರಿಯಾಗಿ ಕಾರ್ಯನಿರ್ವಹಿಸಿದ್ದ ಧರ್ಮೇಂದ್ರ ಪ್ರಧಾನ್, ಬಿಹಾರ ಚುನಾವಣೆ ವೇಳೆ ಬಿಜೆಪಿ ಸಹ ಉಸ್ತುವಾರಿಯಾಗಿ ಕಾರ್ಯನಿರ್ವಹಿಸಿದ್ದರು.
ಅಣ್ಣಾಮಲೈ ಯಾರು?
ಸದ್ಯ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ಕೆ ಅಣ್ಣಾಮಲೈ, 2011ರಲ್ಲಿ ಭಾರತೀಯ ಪೊಲೀಸ್ ಸೇವೆ ಸೇರಿದ್ದು, 2013ರ ಸೆಪ್ಟೆಂಬರ್ನಲ್ಲಿ ಕಾರ್ಕಳ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಪೊಲೀಸ್ ವೃತ್ತಿಯನ್ನು ಆರಂಭಿಸಿದ್ದರು. ಬಳಿಕ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಬಡ್ತಿ ಪಡೆದ ಅವರು 2015 ರಿಂದ 2016ರವರೆಗೆ ಉಡುಪಿ ಎಸ್ಪಿಯಾಗಿ ಕಾರ್ಯನಿರ್ವಹಿಸಿದ್ದರು. ಬಳಿಕ ಚಿಕ್ಕಮಗಳೂರು ಎಸ್ಪಿಯಾಗಿದ್ದ ಅವರು 2018ರಲ್ಲಿ ಬೆಂಗಳೂರು ದಕ್ಷಿಣ ಪೊಲೀಸ್ ಉಪ ಆಯುಕ್ತರಾಗಿ ಬಡ್ತಿ ಹೊಂದಿದ್ದರು. ಆದರೆ, 2019ರಲ್ಲಿ ಪೊಲೀಸ್ ಹುದ್ದೆಗೆ ರಾಜೀನಾಮೆ ನೀಡಿ ರಾಜಕೀಯವನ್ನು ಪ್ರವೇಶಿಸಿದರು.
ಅರಮನೆ ಮೈದಾನದಲ್ಲಿ ವಿಶೇಷ ಕಾರ್ಯಕಾರಿಣಿ ಸಭೆ ಚುನಾವಣಾ ಸಿದ್ದತೆ ನಿಟ್ಟಿನಲ್ಲಿ ಶನಿವಾರ ಅರಮನೆ ಮೈದಾನದಲ್ಲಿ ವಿಶೇಷ ಕಾರ್ಯಕಾರಿಣಿ ಸಭೆ ನಡೆಯಿತು. ಈ ಸಭೆಯಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮಾಜಿ ಕೇಂದ್ರ ಸಚಿವ ಸದಾನಂದ ಗೌಡ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಮತ್ತಿತರರು ಭಾಗಿಯಾಗಿದ್ದರು. ಚುನಾವಣಾ ಸಿದ್ದತೆ, ಸಂಘಟನೆ ಹಾಗೂ ಕಾರ್ಯತಂತ್ರಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯುತ್ತಿದೆ.
With the BJP preparing for a fierce battle to retain its southern bastion of Karnataka, party national president J P Nadda on Saturday appointed Union Education Minister Dharmendra Pradhan as its election in-charge, with BJP Tamil Nadu state chief K Annamalai as co-in-charge.
19-05-26 11:34 pm
HK News Desk
ಮೋರ್ಬಿ ಘಟನೆ ಗುಜರಾತ್ ಮಾದರಿಯನ್ನು ಟೊಳ್ಳಾಗಿಸಿದೆ,...
19-05-26 09:09 pm
ದಕ್ಷಿಣ ಭಾರತದಲ್ಲೇ ಮೊದಲ ಪ್ರಯೋಗ ; ಚಿಕ್ಕಮಗಳೂರಿನಲ್...
17-05-26 08:55 pm
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
21-05-26 02:49 pm
HK News Staffer
ಗೊಂದಲ ನಡುವೆಯೇ ಖಾತೆ ಹಂಚಿಕೆ ಮಾಡಿದ ಕೇರಳ ಸಿಎಂ ಸತೀ...
20-05-26 11:23 pm
ಆನ್ಲೈನ್ ಔಷಧ ಮಾರಾಟ ವಿರುದ್ಧ ದೇಶವ್ಯಾಪಿ ಪ್ರತಿಭಟ...
20-05-26 10:33 am
ಆನೆಗಳ ಕಾದಾಟ; ದುಬಾರೆ ಕ್ಯಾಂಪ್ನಲ್ಲಿ ಗಾಯಗೊಂಡಿದ್ದ...
19-05-26 04:27 pm
ಮತ್ತೆ ಬೆಲೆ ಏರಿಕೆ ಶಾಕ್! ಒಂದೇ ವಾರದಲ್ಲಿ 2ನೇ ಬಾರಿ...
19-05-26 01:06 pm
21-05-26 05:52 pm
HK News Staffer
ಮೇ 25ರವರೆಗೆ ಮೀನುಗಾರರಿಗೆ ಸಮುದ್ರ ಪ್ರವೇಶ ನಿಷೇಧ ಎ...
20-05-26 06:51 pm
ಬೆಳ್ತಂಗಡಿ ; ನೇತ್ರಾವತಿ ನದಿಯಲ್ಲಿ ಸ್ನಾನಕ್ಕಿಳಿದು...
19-05-26 10:47 pm
ಬಾವಿಯಲ್ಲಿ ನೀರಲ್ಲ , ಡೀಸೆಲ್ ! ಮಂಗಳೂರಿನಲ್ಲಿ ಆತಂಕ...
19-05-26 05:57 pm
ಒಂದು ರೂ.ಗೆ ಒಂದು ಶರ್ಟ್ ! ಆಫರ್ ಕೇಳಿ ಮುಗಿಬಿದ್ದ ಜ...
19-05-26 10:44 am
21-05-26 07:33 pm
HK News Staffer
ಧರ್ಮಸ್ಥಳದ ಬುರುಡೆ ರಹಸ್ಯ ಪ್ರಕರಣ ಮತ್ತೆ ಚುರುಕು ;...
21-05-26 04:34 pm
ಎನ್ಐಎಸ್ಎಂ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ವಿದ್ಯಾ...
21-05-26 01:34 pm
ಬೆಳ್ತಂಗಡಿ; ಜಲಪಾತಕ್ಕೆ ತೆರಳಿದ್ದ ಕಾಲೇಜು ಯುವತಿಯರಿ...
21-05-26 10:20 am
ಭಾರತದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಬಂದ ಸ್ಲೀಪರ್ ಸೆ...
20-05-26 03:08 pm