ಬ್ರೇಕಿಂಗ್ ನ್ಯೂಸ್
04-02-23 02:23 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.4: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಕರ್ನಾಟಕ ಬಿಜೆಪಿ ಚುನಾವಣಾ ಉಸ್ತುವಾರಿಯಾಗಿ ನೇಮಕ ಮಾಡಲಾಗಿದೆ. ಈ ಹಿಂದೆ ರಾಜ್ಯ ಬಿಜೆಪಿ ಉಸ್ತುವಾರಿ ಆಗಿಯೂ ಕೆಲಸ ಮಾಡಿದ ಅನುಭವ ಇರುವ ಧರ್ಮೇಂದ್ರ ಪ್ರಧಾನ್ ಅವರಿಗೆ ಚುನಾವಣಾ ಉಸ್ತುವಾರಿಯನ್ನು ನೀಡಲಾಗಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಶನಿವಾರ ಅಧಿಕೃತ ಆದೇಶವನ್ನು ಮಾಡಿದ್ದು, ಈ ಚುನಾವಣೆಯಲ್ಲಿ ಕರ್ನಾಟಕದ ಚುನಾವಣಾ ಉಸ್ತುವಾರಿಯನ್ನು ಧರ್ಮೇಂದ್ರ ಪ್ರಧಾನ್ ಹೊತ್ತುಕೊಳ್ಳಲಿದ್ದಾರೆ. ಇನ್ನು, ಬಿಜೆಪಿ ತಮಿಳುನಾಡು ರಾಜ್ಯಾಧ್ಯಕ್ಷರಾಗಿರುವ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರನ್ನು ಕರ್ನಾಟಕ ಚುನಾವಣಾ ಸಹ ಉಸ್ತುವಾರಿಯನ್ನಾಗಿ ನಿಯೋಜನೆ ಮಾಡಲಾಗಿದೆ. ಅಣ್ಣಾಮಲೈ ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆಗಿಯೂ ಕೆಲಸ ಮಾಡಿದ್ದರು. ಈ ನಿಟ್ಟಿನಲ್ಲಿ ಅವರಿಗೆ ಸಹ ಉಸ್ತುವಾರಿ ಜವಾಬ್ದಾರಿ ನೀಡಲಾಗಿದೆ.
ಧರ್ಮೇಂದ್ರ ಪ್ರಧಾನ್ ಯಾರು?
ಒಡಿಶಾ ಮೂಲದವರಾಗಿರುವ ಧರ್ಮೇಂದ್ರ ಪ್ರಧಾನ್ 2000ನೇ ಇಸವಿಯಲ್ಲಿ ಒಡಿಶಾ ವಿಧಾನಸಭೆಯ ಶಾಸಕರಾಗುವ ಮೂಲಕ ರಾಜಕೀಯಕ್ಕೆ ಪ್ರವೇಶಿಸಿದ್ದರು. ಅದಾದ ಬಳಿಕ 2004ರಲ್ಲಿ ಒಡಿಶಾದ ದಿಯೋಗರ್ನಿಂದ ಲೋಕಸಭೆಗೆ ಆಯ್ಕೆಯಾಗಿದ್ದರು. ನಂತರ ಛತ್ತೀಸ್ಗಢದ ರಾಜ್ಯ ಬಿಜೆಪಿ ಉಸ್ತುವಾರಿಯನ್ನಾಗಿ ಧರ್ಮೇಂದ್ರ ಪ್ರಧಾನ್ ಅವರನ್ನು 2007ರಲ್ಲಿ ನೇಮಿಸಲಾಗಿತ್ತು. ಬಳಿಕ ಬಿಜೆಪಿ ಉತ್ತರಾಖಂಡದ ಚುನಾವಣಾ ಉಸ್ತುವಾರಿಯಾಗಿ ಕಾರ್ಯನಿರ್ವಹಿಸಿದ್ದ ಧರ್ಮೇಂದ್ರ ಪ್ರಧಾನ್, ಬಿಹಾರ ಚುನಾವಣೆ ವೇಳೆ ಬಿಜೆಪಿ ಸಹ ಉಸ್ತುವಾರಿಯಾಗಿ ಕಾರ್ಯನಿರ್ವಹಿಸಿದ್ದರು.
ಅಣ್ಣಾಮಲೈ ಯಾರು?
ಸದ್ಯ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ಕೆ ಅಣ್ಣಾಮಲೈ, 2011ರಲ್ಲಿ ಭಾರತೀಯ ಪೊಲೀಸ್ ಸೇವೆ ಸೇರಿದ್ದು, 2013ರ ಸೆಪ್ಟೆಂಬರ್ನಲ್ಲಿ ಕಾರ್ಕಳ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಪೊಲೀಸ್ ವೃತ್ತಿಯನ್ನು ಆರಂಭಿಸಿದ್ದರು. ಬಳಿಕ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಬಡ್ತಿ ಪಡೆದ ಅವರು 2015 ರಿಂದ 2016ರವರೆಗೆ ಉಡುಪಿ ಎಸ್ಪಿಯಾಗಿ ಕಾರ್ಯನಿರ್ವಹಿಸಿದ್ದರು. ಬಳಿಕ ಚಿಕ್ಕಮಗಳೂರು ಎಸ್ಪಿಯಾಗಿದ್ದ ಅವರು 2018ರಲ್ಲಿ ಬೆಂಗಳೂರು ದಕ್ಷಿಣ ಪೊಲೀಸ್ ಉಪ ಆಯುಕ್ತರಾಗಿ ಬಡ್ತಿ ಹೊಂದಿದ್ದರು. ಆದರೆ, 2019ರಲ್ಲಿ ಪೊಲೀಸ್ ಹುದ್ದೆಗೆ ರಾಜೀನಾಮೆ ನೀಡಿ ರಾಜಕೀಯವನ್ನು ಪ್ರವೇಶಿಸಿದರು.
ಅರಮನೆ ಮೈದಾನದಲ್ಲಿ ವಿಶೇಷ ಕಾರ್ಯಕಾರಿಣಿ ಸಭೆ ಚುನಾವಣಾ ಸಿದ್ದತೆ ನಿಟ್ಟಿನಲ್ಲಿ ಶನಿವಾರ ಅರಮನೆ ಮೈದಾನದಲ್ಲಿ ವಿಶೇಷ ಕಾರ್ಯಕಾರಿಣಿ ಸಭೆ ನಡೆಯಿತು. ಈ ಸಭೆಯಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮಾಜಿ ಕೇಂದ್ರ ಸಚಿವ ಸದಾನಂದ ಗೌಡ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಮತ್ತಿತರರು ಭಾಗಿಯಾಗಿದ್ದರು. ಚುನಾವಣಾ ಸಿದ್ದತೆ, ಸಂಘಟನೆ ಹಾಗೂ ಕಾರ್ಯತಂತ್ರಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯುತ್ತಿದೆ.
With the BJP preparing for a fierce battle to retain its southern bastion of Karnataka, party national president J P Nadda on Saturday appointed Union Education Minister Dharmendra Pradhan as its election in-charge, with BJP Tamil Nadu state chief K Annamalai as co-in-charge.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 11:47 am
HK News Staffer
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm