ಬ್ರೇಕಿಂಗ್ ನ್ಯೂಸ್
04-02-23 10:17 pm HK News Desk ಕರ್ನಾಟಕ
ತುಮಕೂರು, ಫೆ.4 : ತಾನು ಯಾವುದೇ ಪ್ರಣಾಳಿಕೆ ಸಮಿತಿಗೂ ರಾಜಿನಾಮೆ ನೀಡಿಲ್ಲ. ಅದೆಲ್ಲ ಊಹಾಪೋಹ ಎಂದು ಕಾಂಗ್ರೆಸ್ ಪ್ರಣಾಳಿಕೆ ಸಮಿತಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.
ತುಮಕೂರಿನಲ್ಲಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಸುಮಾರು 3 ಗಂಟೆ ಕಾಲ ಸುರ್ಜೆವಾಲಾ ಅವರೊಂದಿಗೆ ಚರ್ಚೆ ಮಾಡಿದ್ದೇನೆ. ನಾವು ಯಾವ ರೀತಿ ಚುನಾವಣೆಗೆ ಹೋಗ್ಬೇಕು. ಚುನಾವಣೆಗೆ ನಮ್ಮ ಪಕ್ಷದ ರಣನೀತಿ ಏನು ಇರಬೇಕು. ಚುನಾವಣಾ ಪ್ರಣಾಳಿಕೆಗಳು ಹೇಗೆ ಇರ್ಬೇಕು. ಜನ ಇದನ್ನೆಲ್ಲ ಒಪ್ತರಾ ಎಂಬ ಬಗ್ಗೆ ಚರ್ಚೆ ನಡೆಸಿದ್ದೇವೆ ಎಂದು ತಿಳಿಸಿದರು.
ಸುರ್ಜೇವಾಲ ಮತ್ತು ತನ್ನ ಭೇಟಿಯನ್ನೂ ಬೇರೆ ರೀತಿ ಬಿಂಬಿಸಲಾಗಿದೆ. ಕಾಂಗ್ರೆಸ್ ಹೊರಡಿಸಿದ ಎಲ್ಲ ಪ್ರಣಾಳಿಕೆಗಳು ನನ್ನ ಗಮನಕ್ಕೆ ಬಂದಿದೆ. ನಾವೆಲ್ಲರೂ ಒಟ್ಟಿಗೆ ಸೇರಿ ಮಾಡಿದ್ದೇವೆ. ಕೆಲವರು ನಮ್ಮಲ್ಲಿ ಅಸಮಾಧಾನ ತರೋಕೆ ಈ ರೀತಿ ಮಾಡ್ತಿದ್ದಾರೆ. ಗೃಹ ಲಕ್ಷ್ಮೀ ಭಾಗ್ಯ ಪ್ರಣಾಳಿಕೆಗೆ ಕೆಲವರು ಎಲ್ಲಿಂದ ಹಣ ತರ್ತಿರಾ ಅಂದ್ರು, ಅದಕ್ಕೆಲ್ಲಾ ನಾವು ಉತ್ತರ ಕೊಟ್ಟಿದ್ದೇವೆ ಎಂದು ಸ್ಪಷ್ಟಪಡಿಸಿದರು. ನಾವು ಜನರಿಗೆ ಪ್ರಣಾಳಿಕೆ ಕೊಟ್ಟ ಮೇಲೆ ಅದನ್ನು ಜಾರಿಗೆ ತರಬೇಕು. ಅದರ ಬಗ್ಗೆ ನಾವು ಚರ್ಚೆ ಮಾಡಿದ್ದೇವೆ. 1ರಿಂದ 5ನೇ ತರಗತಿ ವರೆಗೆ ಸರಕಾರಿ ಶಾಲೆ ಮಕ್ಕಳನ್ನು ಕಳುಹಿಸುವ ಎಸ್ಸಿ, ಎಸ್ಟಿ ಸಮುದಾಯದ ಕುಟುಂಬಕ್ಕೆ ಹಣ ಬಿಡುಗಡೆ ಮಾಡುತ್ತೇವೆ ಎಂದು ಪ್ರಣಾಳಿಕೆ ಬಿಡುಗಡೆ ಮಾಡಿದ್ದೇವೆ ಎಂದು ಮಾಹಿತಿ ನೀಡಿದರು.
ಅದಕ್ಕಾಗಿ ವರ್ಷಕ್ಕೆ 3600 ಕೋಟಿ ಹಣ ಬೇಕಾಗುತ್ತದೆ. ಅದರ ಬಗ್ಗೆ ತೀರ್ಮಾನ ಮಾಡಿದ್ದೀವಿ. ನಿನ್ನೆ ಚಿತ್ರದುರ್ಗದಲ್ಲಿ 10 ಪ್ರಣಾಳಿಕೆಗಳನ್ನು ಘೋಷಣೆ ಮಾಡಿದ್ದೇವೆ. ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ವಿಚಾರದಲ್ಲಿ ನಾನು 8 ವರ್ಷ ಕೆಪಿಸಿಸಿ ಅಧ್ಯಕ್ಷ ಆಗಿದ್ದೆ. 224 ಕ್ಷೇತ್ರದಲ್ಲೂ ಸಹ ಅಭ್ಯರ್ಥಿಗಳಿದ್ದಾರೆ. ಅದರಲ್ಲಿ ಯಾರು ಅಂತ ತೀರ್ಮಾನ ಆಗ್ಬೇಕು ಎಂದರು.
G Parameshwara resignation to the party, clarifies stating haven't resigned. Karnataka Congress leader G Parameshwara rebelled against his party and resigned from Congress' poll manifesto committee ahead of the state Assembly elections, scheduled for this year. This came after the Congress leader was allegedly dissatisfied with the way the grand old party was progressing in Karnataka before the polls.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
16-02-26 12:53 pm
HK Staffer
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
16-02-26 11:13 pm
Mangaluru Staffer
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Manjunath Bhandary MLC: ಕೆಪಿಸಿಸಿ ಕಾರ್ಯಾಧ್ಯಕ್ಷ...
16-02-26 01:48 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
16-02-26 04:01 pm
HK News Desk
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm