ಮುತಾಲಿಕ್ ಸ್ಪರ್ಧೆಯಿಂದ ಹಿಂದು ಪರ ಇರುವ ಬಿಜೆಪಿಗೆ ಹಿನ್ನಡೆಯಾಗುತ್ತದೆ ; ಸುನಿಲ್ ಕುಮಾರ್ 

05-02-23 02:56 pm       HK News Desk   ಕರ್ನಾಟಕ

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರು ಎಲ್ಲಿ ಬೇಕಾದರೂ ಸ್ಪರ್ಧಿಸಬಹುದು. ಪ್ರಮೋದ್ ಮುತಾಲಿಕ್ ಎಲ್ಲಿ ಬೇಕಾದರೂ ಸ್ಪರ್ಧಿಸಲಿ. ಕಾರ್ಕಳದಲ್ಲಿ ಚುನಾವಣೆ ಸ್ಪರ್ಧಿಸಿದರೂ ಸ್ವಾಗತಿಸುತ್ತೇನೆ ಎಂದು ಇಂಧನ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ. 

ಕೊಪ್ಪಳ, ಫೆ.5 : ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರು ಎಲ್ಲಿ ಬೇಕಾದರೂ ಸ್ಪರ್ಧಿಸಬಹುದು. ಪ್ರಮೋದ್ ಮುತಾಲಿಕ್ ಎಲ್ಲಿ ಬೇಕಾದರೂ ಸ್ಪರ್ಧಿಸಲಿ. ಕಾರ್ಕಳದಲ್ಲಿ ಚುನಾವಣೆ ಸ್ಪರ್ಧಿಸಿದರೂ ಸ್ವಾಗತಿಸುತ್ತೇನೆ ಎಂದು ಇಂಧನ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ. 

ಬಿಜೆಪಿ ರಾಜ್ಯದ 224 ಕ್ಷೇತ್ರಕ್ಕೂ ಸ್ಪರ್ಧಿಸಲಿದೆ.‌ ಚುನಾವಣೆ ಹತ್ತಿರ ಬರಲಿ, ಎಲ್ಲವೂ ಗೊತ್ತಾಗಲಿದೆ ಎಂದ ಅವರು, ಮುತಾಲಿಕ್ ಸ್ಪರ್ಧೆಯಿಂದ ಹಿಂದು ಪರ ಇರುವ ರಾಜಕೀಯ ಪಕ್ಷಕ್ಕೆ ಹಿನ್ನೆಡೆಯಾಗಲಿದೆ. ಇದನ್ನು ಅವರು ತಿಳಿದುಕೊಳ್ಳಬೇಕು. ಬಿಜೆಪಿ ಸರಕಾರ ಬಂದ ನಂತರ ಕೇವಲ ಒಬ್ಬ ಹಿಂದೂ ಕಾರ್ಯಕರ್ತನ ಹತ್ಯೆಯಾಗಿದೆ. ಸಿದ್ದರಾಮಯ್ಯ ಸರಕಾರದ ಅವಧಿಯಲ್ಲಿ ಒಟ್ಟು 18 ಹಿಂದು ಕಾರ್ಯಕರ್ತರ ಹತ್ಯೆಯಾಗಿತ್ತು. ಇವರು ಬಿಜೆಪಿ ವಿರುದ್ಧ ಸ್ಪರ್ಧಿಸಿದರೆ ಯಾರಿಗೆ ಲಾಭ ಎನ್ನುವುದನ್ನು ತಿಳಿದುಕೊಳ್ಳಬೇಕು ಎಂದು ಟಾಂಗ್ ಕೊಟ್ಟರು.‌

ಬಿಜೆಪಿ ಸರಕಾರ ಬಂದ ನಂತರ ಮತಾಂತರ ನಿಷೇಧ ಕಾಯ್ದೆ ಬಂದಿದೆ.‌ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ಬಂದಿದೆ.‌ ಹಿಜಾಬ್ ಕುರಿತು ಕಾಯ್ದೆ ರೂಪಿಸಿದ್ದೇವೆ. ಹಿಂದು ಪರ ಇದ್ದೇವೆ ಎನ್ನುವುದನ್ನು ಕೆಲಸದ ಮೂಲಕ ತೋರಿಸಿದ್ದೇವೆ ಎಂದರು.

ರಾಜ್ಯಕ್ಕೆ ಪದೇ ಪದೇ ಮೋದಿ ಬರುವುದು ಯಾಕೆಂಬ ಪ್ರತಿಪಕ್ಷಗಳ ಟೀಕೆಗೆ, ರಾಜ್ಯಕ್ಕೆ ಮುಂದಿನ ದಿನಗಳಲ್ಲಿ 10 ಬಾರಿ ಬರುತ್ತಾರೆ. ಅದರಲ್ಲಿ ತಪ್ಪೇನು. ಮೋದಿ ನಮ್ಮ ಪರಮೋಚ್ಛ ನಾಯಕರು.‌ ನಾವು ಚುನಾವಣೆ ಗೆಲ್ಲಲೇಬೇಕು. ಅದಕ್ಕಾಗಿ ಮೋದಿ ಕರೆಸ್ತೀವಿ. ಆದರೆ ಸಿದ್ದರಾಮಯ್ಯ ಮೊದಲು ತಮ್ಮ ಕ್ಷೇತ್ರ ಯಾವುದು ಎಂದು ಖಚಿತ ಪಡಿಸಿಕೊಳ್ಳಲಿ.‌ ಆಮೇಲೆ ನಮ್ಮ ಪಕ್ಷದ ಬಗ್ಗೆ ಮಾತನಾಡಲಿ ಎಂದು ಸುನಿಲ್ ಕುಮಾರ್ ಟೀಕಿಸಿದ್ದಾರೆ. ‌

A few days after Sri Rama Sene chief, Pramod Muthalik demanded BJP to field for him instead of BJP's own candidate, the current State Minister for Energy, Kannada and Culture, V Sunil Kumar addressed the issue. Pramod Muthalik had stated that he would be contesting from Karkala constituency for the upcoming assembly election as an independent candidate.