ಬ್ರೇಕಿಂಗ್ ನ್ಯೂಸ್
20-10-20 01:42 pm Bangalore Correspondent ಕರ್ನಾಟಕ
ಬೆಂಗಳೂರು, ಅಕ್ಟೋಬರ್ 19: ಡ್ರಗ್ಸ್ ಜಾಲ ಪ್ರಕರಣದಲ್ಲಿ ವಿಚಾರಣೆ ನಡೆಸುತ್ತಿರುವ ಎನ್ ಡಿಪಿಎಸ್ ಕೋರ್ಟ್ ನ್ಯಾಯಾಧೀಶರಿಗೆ ಬಾಂಬ್ ಬೆದರಿಕೆಯೊಡ್ಡಿ ಪತ್ರ ಬರೆದಿದ್ದ ಆರೋಪದಲ್ಲಿ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ತುಮಕೂರಿನ ರಾಜಶೇಖರ್, ವೇದಾಂತ್, ಶಿವಪ್ರಕಾಶ್, ರಮೇಶ್ ಎಂಬವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗುತ್ತಿದೆ. ಅವರನ್ನು ಪೊಲೀಸರು ಬೆಂಗಳೂರಿಗೆ ಕರೆತಂದು ವಿಚಾರಣೆ ನಡೆಸಲಿದ್ದಾರೆ.
ನಾಲ್ವರು ಕೂಡ ಸಂಬಂಧಿಕರಾಗಿದ್ದು ಆಸ್ತಿ ಹಂಚಿಕೆ ಸಂಬಂಧ ಅವರ ನಡುವೆ ಮನಸ್ತಾಪವಿತ್ತು. ಅದೇ ಸಿಟ್ಟಿನಲ್ಲಿ ಆರೋಪಿ ರಾಜಶೇಖರ್ ಎಂಬಾತ, ಶಿವಪ್ರಕಾಶ್, ವೇದಾಂತ್ ಹಾಗೂ ರಮೇಶ್ ಹೆಸರಿನಲ್ಲಿ ಪತ್ರ ಬರೆದಿದ್ದ. ಮೂವರನ್ನು ಜೈಲಿಗೆ ಕಳುಹಿಸುವುದು ಅವನ ಉದ್ದೇಶವಾಗಿತ್ತು. ಆದರೂ ಎಲ್ಲರನ್ನು ವಿಚಾರಣೆಗೆ ಒಳಪಡಿಸಬೇಕಾಗಿದ್ದು ಅದಕ್ಕಾಗಿ ವಶಕ್ಕೆ ಪಡೆದಿದ್ದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.
ಡ್ರಗ್ ಪ್ರಕರಣದಲ್ಲಿ ಸಂಜನಾ ಗಲ್ರಾನಿ, ರಾಗಿಣಿ ದ್ವಿವೇದಿ ಹಾಗೂ ಪ್ರಕರಣದಲ್ಲಿ ಬಂಧಿಸಿರುವ ಎಲ್ಲ ಆರೋಪಿಗಳಿಗೆ ಜಾಮೀನು ನೀಡಬೇಕು. ನಿಮಗೆ ಏನು ಬೇಕಿದ್ದರೂ ಕೇಳಿ ಕೊಡುತ್ತೇವೆ. ಮತ್ತೆ ಜಾಮೀನು ನಿರಾಕರಿಸಿದರೆ, ಕಾರಿನ ಎಂಜಿನ್ಗೆ ಬಾಂಬ್ ಇಟ್ಟು ಸ್ಪೋಟಿಸುತ್ತೇವೆ ಎಂದು ಬೆದರಿಕೆ ಪತ್ರದಲ್ಲಿ ಬರೆಯಲಾಗಿತ್ತು. ಬೆಂಗಳೂರು ನಗರ ಪೊಲೀಸ್ ಕಮಿಷನರ್ ಹಾಗೂ ಸಿಸಿಬಿ ಜಂಟಿ ಕಮಿಷನರ್ ಸಂದೀಪ್ ಪಾಟೀಲರಿಗೂ ಇದೇ ರೀತಿ ಪತ್ರ ಕಳುಹಿಸಲಾಗಿದೆ. ಇದು, ಮಹಮ್ಮದ್ ಜೈಷ್ ಸಂಘಟನೆ ಎಚ್ಚರಿಕೆ' ಎಂದು ದಾರಿ ತಪ್ಪಿಸುವ ರೀತಿ ಪತ್ರದಲ್ಲಿ ಬರೆಯಲಾಗಿತ್ತು.
LIVE VIDEO:
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 10:28 pm
Mangalore Correspondent
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm