ಬ್ರೇಕಿಂಗ್ ನ್ಯೂಸ್
20-10-20 01:42 pm Bangalore Correspondent ಕರ್ನಾಟಕ
ಬೆಂಗಳೂರು, ಅಕ್ಟೋಬರ್ 19: ಡ್ರಗ್ಸ್ ಜಾಲ ಪ್ರಕರಣದಲ್ಲಿ ವಿಚಾರಣೆ ನಡೆಸುತ್ತಿರುವ ಎನ್ ಡಿಪಿಎಸ್ ಕೋರ್ಟ್ ನ್ಯಾಯಾಧೀಶರಿಗೆ ಬಾಂಬ್ ಬೆದರಿಕೆಯೊಡ್ಡಿ ಪತ್ರ ಬರೆದಿದ್ದ ಆರೋಪದಲ್ಲಿ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ತುಮಕೂರಿನ ರಾಜಶೇಖರ್, ವೇದಾಂತ್, ಶಿವಪ್ರಕಾಶ್, ರಮೇಶ್ ಎಂಬವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗುತ್ತಿದೆ. ಅವರನ್ನು ಪೊಲೀಸರು ಬೆಂಗಳೂರಿಗೆ ಕರೆತಂದು ವಿಚಾರಣೆ ನಡೆಸಲಿದ್ದಾರೆ.
ನಾಲ್ವರು ಕೂಡ ಸಂಬಂಧಿಕರಾಗಿದ್ದು ಆಸ್ತಿ ಹಂಚಿಕೆ ಸಂಬಂಧ ಅವರ ನಡುವೆ ಮನಸ್ತಾಪವಿತ್ತು. ಅದೇ ಸಿಟ್ಟಿನಲ್ಲಿ ಆರೋಪಿ ರಾಜಶೇಖರ್ ಎಂಬಾತ, ಶಿವಪ್ರಕಾಶ್, ವೇದಾಂತ್ ಹಾಗೂ ರಮೇಶ್ ಹೆಸರಿನಲ್ಲಿ ಪತ್ರ ಬರೆದಿದ್ದ. ಮೂವರನ್ನು ಜೈಲಿಗೆ ಕಳುಹಿಸುವುದು ಅವನ ಉದ್ದೇಶವಾಗಿತ್ತು. ಆದರೂ ಎಲ್ಲರನ್ನು ವಿಚಾರಣೆಗೆ ಒಳಪಡಿಸಬೇಕಾಗಿದ್ದು ಅದಕ್ಕಾಗಿ ವಶಕ್ಕೆ ಪಡೆದಿದ್ದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.
ಡ್ರಗ್ ಪ್ರಕರಣದಲ್ಲಿ ಸಂಜನಾ ಗಲ್ರಾನಿ, ರಾಗಿಣಿ ದ್ವಿವೇದಿ ಹಾಗೂ ಪ್ರಕರಣದಲ್ಲಿ ಬಂಧಿಸಿರುವ ಎಲ್ಲ ಆರೋಪಿಗಳಿಗೆ ಜಾಮೀನು ನೀಡಬೇಕು. ನಿಮಗೆ ಏನು ಬೇಕಿದ್ದರೂ ಕೇಳಿ ಕೊಡುತ್ತೇವೆ. ಮತ್ತೆ ಜಾಮೀನು ನಿರಾಕರಿಸಿದರೆ, ಕಾರಿನ ಎಂಜಿನ್ಗೆ ಬಾಂಬ್ ಇಟ್ಟು ಸ್ಪೋಟಿಸುತ್ತೇವೆ ಎಂದು ಬೆದರಿಕೆ ಪತ್ರದಲ್ಲಿ ಬರೆಯಲಾಗಿತ್ತು. ಬೆಂಗಳೂರು ನಗರ ಪೊಲೀಸ್ ಕಮಿಷನರ್ ಹಾಗೂ ಸಿಸಿಬಿ ಜಂಟಿ ಕಮಿಷನರ್ ಸಂದೀಪ್ ಪಾಟೀಲರಿಗೂ ಇದೇ ರೀತಿ ಪತ್ರ ಕಳುಹಿಸಲಾಗಿದೆ. ಇದು, ಮಹಮ್ಮದ್ ಜೈಷ್ ಸಂಘಟನೆ ಎಚ್ಚರಿಕೆ' ಎಂದು ದಾರಿ ತಪ್ಪಿಸುವ ರೀತಿ ಪತ್ರದಲ್ಲಿ ಬರೆಯಲಾಗಿತ್ತು.
LIVE VIDEO:
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm