ಬ್ರೇಕಿಂಗ್ ನ್ಯೂಸ್
09-02-23 10:31 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.9: ವರದಕ್ಷಿಣೆ ಕಿರುಕುಳ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ನಟಿ ಅಭಿನಯ ಹಾಗೂ ಅವರ ಕುಟುಂಬದ ಸದಸ್ಯರು ಪೊಲೀಸರಿಗೆ ಸಿಗದೇ ತಲೆಮರೆಸಿಕೊಂಡಿರುವ ಹಿನ್ನೆಲೆಯಲ್ಲಿ ಅವರ ಬಂಧನಕ್ಕೆ ಲುಕ್ಔಟ್ ನೋಟಿಸ್ ಬಿಡುಗಡೆ ಮಾಡಲಾಗಿದೆ.
ಅಭಿನಯ ಅವರ ಅತ್ತಿಗೆ ಲಕ್ಷ್ಮೀದೇವಿ ನೀಡಿದ್ದ ದೂರಿನ ಹಿನ್ನೆಲೆಯಲ್ಲಿ ನಡೆದ ವಿಚಾರಣೆಯಲ್ಲಿ ಅಭಿನಯ, ಸಹೋದರ ಚಲುವರಾಜು ಹಾಗೂ ತಾಯಿಗೆ ಶಿಕ್ಷೆಯಾಗಿತ್ತು. ಅಲ್ಲಿಂದ ಅವರು ನಾಪತ್ತೆಯಾಗಿರುವ ಹಿನ್ನೆಲೆಯಲ್ಲಿ ಅವರ ಬಗ್ಗೆ ಮಾಹಿತಿ ಇದ್ದರೆ ಬೆಂಗಳೂರಿನ ಚಂದ್ರಾಲೇಔಟ್ನ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಮನವಿ ಮಾಡಲಾಗಿದೆ.
ನಟಿ ಅಭಿನಯ ಹಾಗೂ ಅವರ ಕುಟುಂಬಸ್ಥರು ತಮಗೆ ವರದಕ್ಷಿಣೆ ಕಿರುಕುಳ ನೀಡಿದ್ದಾರೆ ಎಂದು ಅವರ ಅತ್ತಿಗೆ 2012ರಲ್ಲಿ ದೂರು ದಾಖಲಿಸಿದ್ದರು. ಇದೇ ವೇಳೆ ಅವರು ವೇಶ್ಯಾವಾಟಿಕೆ ಕೂಡ ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದರು. ಪ್ರಕರಣದಲ್ಲಿ ಸೆಷೆನ್ಸ್ ಕೋರ್ಟ್ ಅಭಿನಯ ಹಾಗೂ ಇತರರು ತಪ್ಪಿತಸ್ಥರು ಎಂದು ತೀರ್ಪು ನೀಡಿ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಇದರ ವಿರುದ್ಧ ಅಭಿನಯ ಹಾಗೂ ಅವರ ಸಹೋದರ ಹೈಕೋರ್ಟ್ ಮೆಟ್ಟಿಲೇರಿದ್ದರು. ಅಲ್ಲೂ ಅವರಿಗೆ ಸೋಲಾಗಿತ್ತು. ಸೆಷನ್ಷ್ ಕೋರ್ಟ್ನ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿತ್ತು.

ಶಿಕ್ಷೆ ಪ್ರಕಟಗೊಂಡ ಹಿನ್ನೆಲೆಯಲ್ಲಿ ಪೊಲೀಸರು ನಟಿ ಅಭಿನಯ, ತಾಯಿ ಜಯಮ್ಮ ಹಾಗೂ ಸಹೋದರ ಚಲುವರಾಜು ಅವರನ್ನು ಬಂಧಿಸಿ ಕೋರ್ಟ್ಗೆ ಹಾಜರುಪಡಿಸಬೇಕಾಗಿತ್ತು. ಆದರೆ ಅವರು ನಾಪತ್ತೆಯಾಗಿರುವ ಕಾರಣ ಲುಕ್ಔಟ್ ನೋಟಿಸ್ ಜಾರಿ ಮಾಡಲಾಗಿದೆ.

1998ರಲ್ಲಿ ಅಭಿನಯ ಅಣ್ಣ ಶ್ರೀನಿವಾಸ್ ಅವರ ಜತೆ ಲಕ್ಷ್ಮೀ ದೇವಿ ವಿವಾಹವಾಗಿದ್ದರು. ಈ ವೇಳೆ ವರದಕ್ಷಿಣೆ ನೀಡಲಾಗಿತ್ತು ಹಾಗೂ ನಂತರವೂ ಅಭಿನಯ ಸೇರಿದಂತೆ ಕುಟುಂಬಸ್ಥರು ಹೆಚ್ಚಿನ ಹಣಕ್ಕಾಗಿ ಪೀಡಿಸಿದ್ದರು. ಈ ಬಗ್ಗೆ 2012ರಲ್ಲಿ ದೂರು ದಾಖಲಾಗಿತ್ತು. ಮೊದಲಿಗೆ ಕೋರ್ಟ್ ನೀಡಿದ್ದ ಶಿಕ್ಷೆಯನ್ನು ಅಭಿನಯ ಕುಟುಂಬದವರು ಪ್ರಶ್ನಿಸಿದ್ದರು. ಅಲ್ಲೂ ಅವರಿಗೆ ಸೋಲಾಗಿದೆ.
The police have issued a lookout notice to locate Anubhava, an actress of Kannada film fame, Abhinaya and her family who have been sentenced to jail.Actress Abhinaya (74), mother Jayamma (54) and brother Cheluvaraju (52) are absconding without being found by the police. In this background, Bangalore City Chandra Layout Police has issued a lookout notice to trace him.
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm