ಬ್ರೇಕಿಂಗ್ ನ್ಯೂಸ್
09-02-23 10:31 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.9: ವರದಕ್ಷಿಣೆ ಕಿರುಕುಳ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ನಟಿ ಅಭಿನಯ ಹಾಗೂ ಅವರ ಕುಟುಂಬದ ಸದಸ್ಯರು ಪೊಲೀಸರಿಗೆ ಸಿಗದೇ ತಲೆಮರೆಸಿಕೊಂಡಿರುವ ಹಿನ್ನೆಲೆಯಲ್ಲಿ ಅವರ ಬಂಧನಕ್ಕೆ ಲುಕ್ಔಟ್ ನೋಟಿಸ್ ಬಿಡುಗಡೆ ಮಾಡಲಾಗಿದೆ.
ಅಭಿನಯ ಅವರ ಅತ್ತಿಗೆ ಲಕ್ಷ್ಮೀದೇವಿ ನೀಡಿದ್ದ ದೂರಿನ ಹಿನ್ನೆಲೆಯಲ್ಲಿ ನಡೆದ ವಿಚಾರಣೆಯಲ್ಲಿ ಅಭಿನಯ, ಸಹೋದರ ಚಲುವರಾಜು ಹಾಗೂ ತಾಯಿಗೆ ಶಿಕ್ಷೆಯಾಗಿತ್ತು. ಅಲ್ಲಿಂದ ಅವರು ನಾಪತ್ತೆಯಾಗಿರುವ ಹಿನ್ನೆಲೆಯಲ್ಲಿ ಅವರ ಬಗ್ಗೆ ಮಾಹಿತಿ ಇದ್ದರೆ ಬೆಂಗಳೂರಿನ ಚಂದ್ರಾಲೇಔಟ್ನ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಮನವಿ ಮಾಡಲಾಗಿದೆ.
ನಟಿ ಅಭಿನಯ ಹಾಗೂ ಅವರ ಕುಟುಂಬಸ್ಥರು ತಮಗೆ ವರದಕ್ಷಿಣೆ ಕಿರುಕುಳ ನೀಡಿದ್ದಾರೆ ಎಂದು ಅವರ ಅತ್ತಿಗೆ 2012ರಲ್ಲಿ ದೂರು ದಾಖಲಿಸಿದ್ದರು. ಇದೇ ವೇಳೆ ಅವರು ವೇಶ್ಯಾವಾಟಿಕೆ ಕೂಡ ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದರು. ಪ್ರಕರಣದಲ್ಲಿ ಸೆಷೆನ್ಸ್ ಕೋರ್ಟ್ ಅಭಿನಯ ಹಾಗೂ ಇತರರು ತಪ್ಪಿತಸ್ಥರು ಎಂದು ತೀರ್ಪು ನೀಡಿ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಇದರ ವಿರುದ್ಧ ಅಭಿನಯ ಹಾಗೂ ಅವರ ಸಹೋದರ ಹೈಕೋರ್ಟ್ ಮೆಟ್ಟಿಲೇರಿದ್ದರು. ಅಲ್ಲೂ ಅವರಿಗೆ ಸೋಲಾಗಿತ್ತು. ಸೆಷನ್ಷ್ ಕೋರ್ಟ್ನ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿತ್ತು.

ಶಿಕ್ಷೆ ಪ್ರಕಟಗೊಂಡ ಹಿನ್ನೆಲೆಯಲ್ಲಿ ಪೊಲೀಸರು ನಟಿ ಅಭಿನಯ, ತಾಯಿ ಜಯಮ್ಮ ಹಾಗೂ ಸಹೋದರ ಚಲುವರಾಜು ಅವರನ್ನು ಬಂಧಿಸಿ ಕೋರ್ಟ್ಗೆ ಹಾಜರುಪಡಿಸಬೇಕಾಗಿತ್ತು. ಆದರೆ ಅವರು ನಾಪತ್ತೆಯಾಗಿರುವ ಕಾರಣ ಲುಕ್ಔಟ್ ನೋಟಿಸ್ ಜಾರಿ ಮಾಡಲಾಗಿದೆ.

1998ರಲ್ಲಿ ಅಭಿನಯ ಅಣ್ಣ ಶ್ರೀನಿವಾಸ್ ಅವರ ಜತೆ ಲಕ್ಷ್ಮೀ ದೇವಿ ವಿವಾಹವಾಗಿದ್ದರು. ಈ ವೇಳೆ ವರದಕ್ಷಿಣೆ ನೀಡಲಾಗಿತ್ತು ಹಾಗೂ ನಂತರವೂ ಅಭಿನಯ ಸೇರಿದಂತೆ ಕುಟುಂಬಸ್ಥರು ಹೆಚ್ಚಿನ ಹಣಕ್ಕಾಗಿ ಪೀಡಿಸಿದ್ದರು. ಈ ಬಗ್ಗೆ 2012ರಲ್ಲಿ ದೂರು ದಾಖಲಾಗಿತ್ತು. ಮೊದಲಿಗೆ ಕೋರ್ಟ್ ನೀಡಿದ್ದ ಶಿಕ್ಷೆಯನ್ನು ಅಭಿನಯ ಕುಟುಂಬದವರು ಪ್ರಶ್ನಿಸಿದ್ದರು. ಅಲ್ಲೂ ಅವರಿಗೆ ಸೋಲಾಗಿದೆ.
The police have issued a lookout notice to locate Anubhava, an actress of Kannada film fame, Abhinaya and her family who have been sentenced to jail.Actress Abhinaya (74), mother Jayamma (54) and brother Cheluvaraju (52) are absconding without being found by the police. In this background, Bangalore City Chandra Layout Police has issued a lookout notice to trace him.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
16-02-26 12:53 pm
HK Staffer
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
16-02-26 11:13 pm
Mangaluru Staffer
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Manjunath Bhandary MLC: ಕೆಪಿಸಿಸಿ ಕಾರ್ಯಾಧ್ಯಕ್ಷ...
16-02-26 01:48 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
16-02-26 04:01 pm
HK News Desk
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm