ಬ್ರೇಕಿಂಗ್ ನ್ಯೂಸ್
11-02-23 07:45 pm HK News Desk ಕರ್ನಾಟಕ
ತುಮಕೂರು, ಫೆ.11: ಜಿಲ್ಲೆಯ ಚಿಕ್ಕನಾಯಕನಳ್ಳಿ ತಾಲೂಕಿನ ಹುಳಿಯಾರ್ ಗೇಟ್ ಬಳಿ ಲಾರಿ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನವದಂಪತಿ ದಾರುಣವಾಗಿ ಪ್ರಾಣ ಕಳೆದುಕೊಂಡಿದ್ದಾರೆ.
12 ಗಂಟೆ ಸುಮಾರಿಗೆ ನಡೆದಿರುವ ಅಪಘಾತದಲ್ಲಿ ಕೇವಲ ಒಂದೂವರೆ ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ನವ ಜೋಡಿಯಾದ ರಘು(35), ಅನುಷಾ (28) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇಬ್ಬರೂ ಟೆಕ್ಕಿಗಳಾಗಿದ್ದರು.
ಅನುಷಾ ಮತ್ತು ರಘು ಅವರು ಚಿಕ್ಕನಾಯಕನಹಳ್ಳಿ ತಾಲೂಕಿನ ತಿಗಳನಹಳ್ಳಿಯಿಂದ ಬಳ್ಳಾರಿ ಕಡೆಗೆ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಲು ತೆರಳುತ್ತಿದ್ದರು. ಹ್ಯೂಂಡೈ ಕ್ರೆಟಾ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹುಳಿಯಾರ್ ಗೇಟ್ ಬಳಿ ಲಾರಿಯೊಂದು ಡಿಕ್ಕಿ ಹೊಡೆದಿದೆ.
ಘಟನೆಯಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ರಘು ಎದುರಿನ ಸೀಟಿನಲ್ಲಿದ್ದರೆ ಅನುಷಾ ಹಿಂಬದಿ ಸೀಟಿನಲ್ಲಿ ಕುಳಿತಿದ್ದರು. ಇಬ್ಬರೂ ಸ್ಥಳದಲ್ಲೇ ಅಸು ನೀಗಿದ್ದಾರೆ. ಅಪಘಾತದಲ್ಲಿ ಭಾಗಿಯಾದ ಲಾರಿ ರಸ್ತೆ ಬಿಟ್ಟು ಹೊರಗೆ ಹೋಗಿ ಮರಕ್ಕೆ ಡಿಕ್ಕಿಯಾಗಿ ನಿಂತಿದೆ.
ಇಬ್ಬರೂ ಟೆಕ್ಕಿಗಳಾಗಿದ್ದರು;
ಹಾಸನ ಜಿಲ್ಲೆ ಅರಸಿಕೆರೆ ಮೂಲದ ರಘು ಮತ್ತು ಚಿಕ್ಕನಾಯಕನಹಳ್ಳಿ ತಾಲೂಕಿನ ತಿಗಳನಹಳ್ಳಿ ಮೂಲದ ಅನುಷಾ ಅವರಿಗೆ ಒಂದೂವರೆ ತಿಂಗಳ ಹಿಂದಷ್ಟೆ ಮದುವೆಯಾಗಿತ್ತು.
ಬೆಂಗಳೂರಿನಲ್ಲಿ ಸಾಫ್ಟ್ವೇರ್ ಎಂಜಿನಿಯರ್ಗಳಾಗಿದ್ದ ಅವರು ಸಂಬಂಧಿಕರ ಮದುವೆಗೆಂದು ಕಾರಿನಲ್ಲಿ ತೆರಳುತ್ತಿದ್ದರು. ದಂಪತಿ.
Tumkur accident, newly married couple die on spot after truck rams car. The deceased have been identified as Raghu and Anusha. Both were techies working in Bangalore. They were on their way to attend a wedding function during which the ghastly accident took place.
07-02-25 11:00 pm
Bangalore Correspondent
ಮುಡಾ ಹಗರಣ ; ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್ ರಿಲೀಫ...
07-02-25 08:09 pm
Microfinance Karnataka, Governor, Siddaramai...
07-02-25 04:22 pm
National aerobic Championship Karnataka: ಜಮ್ಮ...
06-02-25 07:55 pm
Yadagiri Accident, Five Killed: ಯಾದಗಿರಿ; ಸಾರಿ...
05-02-25 06:39 pm
07-02-25 05:27 pm
HK News Desk
Zamfara school fire accident: SHOCKING; ತರಗತ...
07-02-25 05:23 pm
Telangana, student suicide: ಪ್ರಾಂಶುಪಾಲರು ಬೈದರ...
06-02-25 05:37 pm
ಅಮೆರಿಕದಲ್ಲಿ ಅಕ್ರಮ ವಲಸಿಗರ ಗಡೀಪಾರು ; ಪ್ರಧಾನಿ ಮೋ...
06-02-25 02:21 pm
Kerala Suicide, Ragging: ಕೇರಳದಲ್ಲಿ 15ರ ಬಾಲಕ ಮ...
04-02-25 10:49 pm
07-02-25 10:13 pm
Mangalore Correspondent
Brijesh Chowta, DK MP, Piyush Goyal: ದ.ಕ.ದಲ್ಲ...
07-02-25 08:24 pm
Belthangady, House, Evil spirit: ಬೆಳ್ತಂಗಡಿ ;...
07-02-25 03:12 pm
Mangalore airport: ಮಂಗಳೂರು ಏರ್ಪೋರ್ಟ್ ರನ್ ವೇ ವ...
06-02-25 10:16 pm
Prasad Attavar, Saloon Attack, Mangalore: ಮಸಾ...
05-02-25 10:51 pm
07-02-25 11:55 am
Mangalore Correspondent
Mangalore crime, blackmail Temple priest: ಅರ್...
06-02-25 09:32 pm
Kalaburagi, Reels,weapons, Crime: ಕಲಬುರಗಿ ; ಶ...
06-02-25 04:35 pm
Raichur Rape, Crime: ರಾಯಚೂರಿನಲ್ಲಿ ಎರಡನೇ ಕ್ಲಾಸ...
06-02-25 12:00 pm
Bangalore crime, Illicit affair: ಶೀಲ ಶಂಕಿಸಿ ನ...
05-02-25 04:29 pm