ಬ್ರೇಕಿಂಗ್ ನ್ಯೂಸ್
12-02-23 03:03 pm HK News Desk ಕರ್ನಾಟಕ
ಬೆಂಗಳೂರು, ಫೆ.12: ಕಾಂತಾರ ಸಿನೆಮಾ ಅನುಕರಿಸಿ ದೈವದ ವೇಷ ಧರಿಸುವುದು, ವೇದಿಕೆ ಕಾರ್ಯಕ್ರಮಗಳಲ್ಲಿ ನೃತ್ಯ ಮಾಡಿ ದೈವಕ್ಕೆ ಅಪಹಾಸ್ಯ ಮಾಡುವುದು ಹೆಚ್ಚುತ್ತಿದೆ. ನಗರದ ಖಾಸಗಿ ಕಾಲೇಜೊಂದರಲ್ಲಿ ಪಂಜುರ್ಲಿ ದೈವದ ವೇಷ ಧರಿಸಿ ನರ್ತಿಸುತ್ತಿದ್ದ ವಿದ್ಯಾರ್ಥಿ ಮೇಲೆ ದೈವ ಆವಾಹನೆ ಆಗಿರುವ ಘಟನೆ ನಡೆದಿದ್ದು ಅಲ್ಲಿದ್ದವರು ಶಾಕ್ ಆಗಿದ್ದಾರೆ.

ಬೆಂಗಳೂರಿನ ಗಾಯತ್ರಿ ನಗರದಲ್ಲಿರುವ ಹೊಂಬೇಗೌಡ ಪದವಿಪೂರ್ವ ಕಾಲೇಜಿನಲ್ಲಿ ಶನಿವಾರ ಸಂಜೆ ಘಟನೆ ನಡೆದಿದೆ. ದ್ವೀತಿಯ ಪಿಯುಸಿ ವಿದ್ಯಾರ್ಥಿ ವಿಶಾಲ್, ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ದೈವದ ವೇಷ ಧರಿಸಿ ವರಾಹ ರೂಪಂ ಹಾಡಿಗೆ ನೃತ್ಯ ಮಾಡುತ್ತಿದ್ದ. ಕಾಂತಾರ ಸಿನಿಮಾದ ರೀತಿಯಲ್ಲೇ ಪಂಜುರ್ಲಿ ದೈವದ ವೇಷ ಧರಿಸಿ ವರಾಹ ರೂಪಂ ಹಾಡಿಗೆ ನೃತ್ಯ ಮಾಡುತ್ತಿದ್ದಾಗ ದೈವ ಆವಾಹನೆಯಾಗಿದೆ ಎನ್ನಲಾಗುತ್ತಿದ್ದು ವೇದಿಕೆ ಮೇಲಿಂದ ಕೆಳಗೆ ಹಾರಿ ಆವೇಶಕ್ಕೊಳಗಾಗಿದ್ದಾನೆ. ಕೂಡಲೇ ಎಚ್ಚೆತ್ತ ಕಾಲೇಜು ಸಿಬಂದಿ ಹಾಡನ್ನು ನಿಲ್ಲಿಸಿದ್ದಾರೆ. ವಿದ್ಯಾರ್ಥಿಯನ್ನು ಹಿಡಿದು ಸಮಾಧಾನಪಡಿಸಲು ಯತ್ನಿಸಿದರೂ ಸಾಧ್ಯವಾಗಿಲ್ಲ.
ಹಾಡು ನಿಲ್ಲಿಸಿದರೂ, ವಿಶಾಲ್ ಆರ್ಭಟ ನೋಡಿದ ಪೋಷಕರು, ಕಾಲೇಜು ಸಿಬಂದಿ ದಂಗಾಗಿದ್ದಾರೆ. ಕಾಂತಾರ ಸಿನಿಮಾ ಬಂದ ಬಳಿಕ ಎಲ್ಲೆಲ್ಲೋ ದೈವದ ವೇಷ ಧರಿಸಿ ಕುಣಿಯುವುದನ್ನು ಮಾಡುತ್ತಾರೆ. ಕಾಲೇಜಿನ ವೇದಿಕೆಗಳಲ್ಲಿ ಭೂತ ನರ್ತನ ಸಾಮಾನ್ಯ ಎನ್ನುವಂತಾಗಿದೆ. ವಿದ್ಯಾರ್ಥಿಯ ಮೈಮೇಲೆ ಆವೇಶ ಬಂದಿರುವುದು ದೈವದ ಬಗ್ಗೆ ಅಪಹಾಸ್ಯ ಮಾಡುವವರಿಗೆ ಪಾಠ ಕಲಿಸಿರಬಹುದು.
College Student possessed by Panjurli Daiva in Bangalore after imitating like kantara
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
16-02-26 12:53 pm
HK Staffer
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
16-02-26 11:13 pm
Mangaluru Staffer
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Manjunath Bhandary MLC: ಕೆಪಿಸಿಸಿ ಕಾರ್ಯಾಧ್ಯಕ್ಷ...
16-02-26 01:48 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
16-02-26 04:01 pm
HK News Desk
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm