ಬ್ರೇಕಿಂಗ್ ನ್ಯೂಸ್
15-02-23 07:47 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.15: ಬೊಮ್ಮನಹಳ್ಳಿ ಬಿಜೆಪಿ ಶಾಸಕ ಸತೀಶ್ ರೆಡ್ಡಿ ಹತ್ಯೆಗೆ ಸುಪಾರಿ ನೀಡಿರುವ ಆರೋಪದ ಮೇಲೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಸತೀಶ್ ರೆಡ್ಡಿ ಹತ್ಯೆಗೆ ಕುಖ್ಯಾತ ರೌಡಿ ಗ್ಯಾಂಗ್ ಸ್ಕೆಚ್ ಹಾಕಿದ್ದ ಸ್ಫೋಟಕ ವಿಷಯ ಬಹಿರಂಗಗೊಂಡಿದೆ. ನಗರದ ವಿಲ್ಸನ್ ಗಾರ್ಡನ್ ನಾಗನ ತಂಡ ಶಾಸಕನ ಹತ್ಯೆಗೆ 2 ಕೋಟಿಗೆ ಸುಪಾರಿ ಪಡೆದಿದ್ದು ಶಾಸಕರ ಚಲನವಲನಗಳ ಬಗ್ಗೆ ನಿಗಾವಹಿಸಿದ್ದರು. ಆದರೆ ದಾಳಿಗೂ ಮುಂಚೆ ರೌಡಿಶೀಟರ್ ನಾಗನ ತಂಡದಿಂದಲೇ ವಿಷಯ ಬಹಿರಂಗಗೊಂಡಿದೆ.
ನಾಗನ ತಂಡದಲ್ಲಿದ್ದ ಚಿತ್ರದುರ್ಗದ ಮೂಲದ ಆಕಾಶ್ ಕೊಲೆಯ ಸುಳಿವು ಬಿಟ್ಟು ಕೊಟ್ಟಿದ್ದಾನೆ. ಸತೀಶ್ ರೆಡ್ಡಿ ಬೆಂಬಲಿಗ ಚಂದ್ರು ಕರೆ ಮಾಡಿದ್ದಾಗ ಆಕಾಶ್ ಕೊಲೆಯ ಸಂಚು ಬಾಯ್ಬಿಟ್ಟಿದ್ದಾನೆ. ನಂತರ ಎಚ್ಚೆತ್ತ ಶಾಸಕರು ಪೊಲೀಸರಿಗೆ ದೂರು ನೀಡಿದ್ದಾರೆ.
ತಮ್ಮ ವಿರುದ್ಧ ದೂರು ದಾಖಲಾಗುತ್ತಿದ್ದಂತೆ ರೌಡಿ ನಾಗನ ತಂಡ ಎಸ್ಕೇಪ್ ಆಗಿದೆ. ರೌಡಿಗಳ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಈ ಹಿಂದೆ ಬೊಮ್ಮನಹಳ್ಳಿ ಬಿಜೆಪಿ ಶಾಸಕ ಸತೀಶ್ ರೆಡ್ಡಿ ನಿವಾಸದ ಅಂಗಳದಲ್ಲಿ ನಿಲ್ಲಿಸಿದ್ದ ಎರಡು ಐಷಾರಾಮಿ ಕಾರುಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದರು. ಫಾರ್ಚೂನರ್ ಕಾರು ಹಾಗೂ ಮಹೀಂದ್ರಾ ಥಾರ್ ಜೀಪ್ ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದರು. ಈ ಘಟನೆ ರಾಜ್ಯ ರಾಜಕೀಯದಲ್ಲೂ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡೇ ದಿನಗಳಲ್ಲಿ ಆರೋಪಿಗಳ ಬಂಧನ ಆಗಿತ್ತು. ನಾಲ್ವರು ದುಷ್ಕರ್ಮಿಗಳು ಪೆಟ್ರೋಲ್ ಕ್ಯಾನ್ ತಂದು ಎರಡು ಐಷಾರಾಮಿ ಕಾರುಗಳಿಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು.
ಹತ್ಯೆ ಸುಪಾರಿ ಬಗ್ಗೆ ವಿಧಾನಸೌಧದಲ್ಲಿ ಸತೀಶ್ ರೆಡ್ಡಿ ಮಾತನಾಡಿ, ನನಗೆ ಮಂಗಳವಾರ ಸಂಜೆ ಪೊಲೀಸರು ಈ ಬಗ್ಗೆ ತಿಳಿಸಿದರು. ಈಗ ಚುನಾವಣೆ ಇದೆ, ರಾಜಕೀಯ ಕಾರಣಗಳೂ ಇರಬಹುದು. ಈ ವಿವಾರದ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿಗೆ ತಿಳಿಸಿದ್ದೇನೆ. ಬೆದರಿಕೆ ಹಿನ್ನೆಲೆಯಲ್ಲಿ ಭದ್ರತೆಯನ್ನು ಪಡೆದುಕೊಳ್ಳಲು ಸಿಎಂ ಸೂಚಿಸಿದರು. ಆದರೆ ನನಗೆ ಭದ್ರತೆ ಬೇಡ ಅಂದಿದ್ದೇನೆ. ಇದರ ಹಿಂದೆ ರಾಜಕೀಯ ಉದ್ದೇಶ ಇದೆ . ನಾನು ಭಯ ಪಡುವುದಿಲ್ಲ. ಸುಪಾರಿ ಹಿಂದೆ ಅಕ್ರಮವಾಗಿ ಹಣ ಸಂಪಾದನೆ ಮಾಡುವ ಉದ್ದೇಶವೂ ಇರಬಹುದು. ಪೊಲೀಸರು ಈ ಬಗ್ಗೆ ಕ್ರಮ ಕೈಗೊಳ್ತಾರೆ. ಆರೋಪಿಗಳು ನನ್ನ ಚಲನವಲನ ಮೇಲೆ ಗಮನ ಇಟ್ಟಿದ್ದರಂತೆ. ಅವರು ಎಲ್ಲೆಲ್ಲಿ ಓಡಾಡಿದ್ದಾರೆ, ಏನೇನು ಮಾಡಿದ್ದಾರೆ ಅಂತ ಪೊಲೀಸರು ಮಾಹಿತಿ ಪಡ್ಕೊಂಡಿದ್ದಾರೆ ಎಂದು ತಿಳಿಸಿದರು.
Plot to Murder bangalore MLA Satish Reddy, killers master plan leaked, two arrested. Wilson garden Rowdy shetter was given two crores to murder MLA.
07-02-25 11:00 pm
Bangalore Correspondent
ಮುಡಾ ಹಗರಣ ; ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್ ರಿಲೀಫ...
07-02-25 08:09 pm
Microfinance Karnataka, Governor, Siddaramai...
07-02-25 04:22 pm
National aerobic Championship Karnataka: ಜಮ್ಮ...
06-02-25 07:55 pm
Yadagiri Accident, Five Killed: ಯಾದಗಿರಿ; ಸಾರಿ...
05-02-25 06:39 pm
08-02-25 12:14 pm
HK News Desk
Mahakumbh accident, Jaipur: ಜೈಪುರದಲ್ಲಿ ಭೀಕರ ರ...
07-02-25 05:27 pm
Zamfara school fire accident: SHOCKING; ತರಗತ...
07-02-25 05:23 pm
Telangana, student suicide: ಪ್ರಾಂಶುಪಾಲರು ಬೈದರ...
06-02-25 05:37 pm
ಅಮೆರಿಕದಲ್ಲಿ ಅಕ್ರಮ ವಲಸಿಗರ ಗಡೀಪಾರು ; ಪ್ರಧಾನಿ ಮೋ...
06-02-25 02:21 pm
08-02-25 01:08 pm
Mangalore Correspondent
Covid 19 death, Karnataka CM Siddaramaiah: ಕೋ...
07-02-25 10:13 pm
Brijesh Chowta, DK MP, Piyush Goyal: ದ.ಕ.ದಲ್ಲ...
07-02-25 08:24 pm
Belthangady, House, Evil spirit: ಬೆಳ್ತಂಗಡಿ ;...
07-02-25 03:12 pm
Mangalore airport: ಮಂಗಳೂರು ಏರ್ಪೋರ್ಟ್ ರನ್ ವೇ ವ...
06-02-25 10:16 pm
08-02-25 01:00 pm
HK News Desk
Mangalore court, Crime: ಕುಡಿದ ಮತ್ತಿನಲ್ಲಿ ಪತ್ನ...
07-02-25 11:55 am
Mangalore crime, blackmail Temple priest: ಅರ್...
06-02-25 09:32 pm
Kalaburagi, Reels,weapons, Crime: ಕಲಬುರಗಿ ; ಶ...
06-02-25 04:35 pm
Raichur Rape, Crime: ರಾಯಚೂರಿನಲ್ಲಿ ಎರಡನೇ ಕ್ಲಾಸ...
06-02-25 12:00 pm